ಮಕ್ಕಳ ಹಕ್ಕುಗಳ ಸಂರಕ್ಷಣೆ ಗ್ರಾಮ ಮಟ್ಟಕ್ಕೂ ವಿಸ್ತರಿಸಿ


Team Udayavani, Jan 6, 2021, 1:56 PM IST

ಮಕ್ಕಳ ಹಕ್ಕುಗಳ ಸಂರಕ್ಷಣೆ ಗ್ರಾಮ ಮಟ್ಟಕ್ಕೂ ವಿಸ್ತರಿಸಿ

ಹಾಸನ: ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಪ್ರಯತ್ನಗಳು ಇನ್ನಷ್ಟು ಪರಿಣಾಮಕಾರಿಯಾಗಿ ಗ್ರಾಮ ಮಟ್ಟದವರೆಗೂ ತಲುಪಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ಬಿ.ಕೆ.ರವಿಕಾಂತ್‌ಅವರ ಉಪಸ್ಥಿತಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಉಡುಪಿ ಜಿಲ್ಲೆಯ ಮಕ್ಕಳ ರಕ್ಷಣಾನಿಯಾಮವಳಿಗಳ ಮಾದರಿಯನ್ನು ಜಿಲ್ಲೆಗಳಲ್ಲಿಅಳವಡಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಬರುವ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಸಿಗುವಂತೆಕಾರ್ಯನಿರ್ವಹಿಸಬೇಕು ಹಾಗೂ ಗ್ರಾಮ ಸಭೆಗಳಿಗೆಭೇಟಿ ನೀಡಿದಾಗ ಅರಿವು ಮೂಡಿಸುವಂತಹ ಕಾರ್ಯಮಾಡಬೇಕು ಎಂದು ನಿರ್ದೇಶಿಸಿದರು.

ಸ್ಥಳೀಯವಾಗಿ ರಕ್ಷಿಸಿ: ಮಕ್ಕಳ ಸಂರಕ್ಷಣೆ ಗ್ರಾಮ ಮಟ್ಟದಿಂದ ನಡೆಯಬೇಕು, ಯಾವುದೇ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕತೆ, ಲೈಂಗಿದೌರ್ಜನ್ಯ ನಡೆದಾಗ ಹಾಗೂ ಅನಾಥ, ಪರಿತ್ಯಕ್ತಮಕ್ಕಳು ಸಿಕ್ಕಾಗ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಬರುವವರೆಗೆ ಕಾಯದೇ, ಸ್ಥಳೀಯಗ್ರಾಪಂ ಮಟ್ಟದಲ್ಲಿ ಗುರುತಿಸಿರುವ ಮಕ್ಕಳ ಮಿತ್ರ ಹಾಗೂ ಮಹಿಳಾ ಮಿತ್ರ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಂಕಷ್ಟದಲ್ಲಿರುವ ಮಕ್ಕಳ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.

ಈಗಾಗಲೇ ಗ್ರಾಮ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಕಾವಲು ಸಮಿತಿ ಕಾರ್ಯನಿರ್ವಸುತ್ತಿದೆ. ಈಸಮಿತಿಯು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳುಸಮಿತಿಯ ಸಭೆ ನಡೆಸಬೇಕು ಹಾಗೂ ಸಮಸ್ಯೆಗಳಲ್ಲಿರುವ ಮಕ್ಕಳನ್ನು ಗುರುತಿಸಿ ಅವರ ರಕ್ಷಣೆಗೆಮಕ್ಕಳ ಸಹಾಯವಾಣಿ ತಂಡ ಹಾಗೂ ಮಕ್ಕಳ ರಕ್ಷಣಾಘಟಕಕ್ಕೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳನ್ನು ಶೀಘ್ರದಲ್ಲಿ ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣೆಗೆ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಅಂಗನವಾಡಿ ಕಾರ್ಯಕರ್ತರು, ಮೇಲ್ವಿಚಾರಕಿಯರುಹಾಗೂ ಶಿಕ್ಷಣ ಇಲಾಖೆಯ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಜೊತೆಗೆ ಆರೋಗ್ಯ ಇಲಾಖೆಯ ಆಶಾ, ಕಿರಿಯ ಆರೋಗ್ಯ ಸಹಾಯಕರು ಜಂಟಿಯಾಗಿಗ್ರಾಮಗಳಲ್ಲಿ ಜರುಗುವ ಬಾಲ್ಯ ವಿವಾಹ, ಬಾಲಕಾರ್ಮಿಕತೆ ತಡೆ, ಇತರೆ ದೌರ್ಜನ್ಯಕ್ಕೆ ಒಳಗಾಗಿರುವಮಕ್ಕಳ ಸಂರಕ್ಷಣೆಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಚ್‌.ಟಿ. ಕೋಮಲ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಗಳು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿಹಾಜರಿದ್ದರು.

ಕಾಫಿ ತೋಟಗಳು, ಗಣಿಗಾರಿಕೆ ಈ ರೀತಿಯ ಪ್ರದೇಶ ಭಾಗಗಳನ್ನು ಗುರುತಿಸಿ ಮೇಲ್ವಿಚಾರಕರು ಹಾಗೂ ಪೊಲೀಸ್‌ಸಹಾಯದೊಂದಿಗೆ ಜಾಗೃತಿ ಕಾರ್ಯಕ್ರಮನಡೆಸಿ ಅರಿವನ್ನು ಮೂಡಿಸುವಂತಹ ಕೆಲಸಗಳನ್ನು ಮಾಡಬೇಕು.

ಗಿರೀಶ್‌ ನಂದನ್‌, ಉಪಭಾಗಾಧಿಕಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.