ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ
Team Udayavani, Jan 6, 2021, 5:38 PM IST
ಬೆಂಗಳೂರು : ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿ ಜ್ವರ (H5N8) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೈ – ಅಲರ್ಟ್ ಘೋಷಿಸಿದ್ದು, ಕೋಳಿ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ದತೆ ಮಾಡಿಕೊಳ್ಳಿ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಇದುವರೆಗೆ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ, ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಪನಿರ್ದೇಶಕರುಗಳು ಕೋಳಿ ಜ್ವರದ ಸಂಭಾವ್ಯ ರೋಗೋದ್ರೇಕವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ರೋಗ ನಿಯಂತ್ರಣ ಸಮಿತಿಯ ಸಭೆ ನಡೆಸಿ ಸೂಕ್ತ ಮುಂಜಾಗ್ರತ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಕಾನ್ಸ್ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ
ಕೇರಳ ರಾಜ್ಯದ ಗಡಿ ಭಾಗದಲ್ಲಿ ಕೂಡಲೇ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಕೇರಳ ರಾಜ್ಯದಿಂದ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸುವುದು ಹಾಗೂ, ಕೇರಳ ರಾಜ್ಯದಿಂದ ಒಳ ಬರುವ ಕೋಳಿ ಸಾಗಾಣಿಕೆ ವಾಹನಗಳನ್ನು ನೈರ್ಮಲ್ಯೀಕರಿಸಿ (disinfection /Sanitization) ಒಳಬಿಡಲು ಸೂಚನೆ ನೀಡಲಾಗಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ದೈನಂದಿನ ವರದಿಯನ್ನು ಉಪನಿರ್ದೇಶಕರು, ಕೋಳಿ ರೋಗ ನಿರ್ಣಯ ಪ್ರಯೋಗಾಲಯದ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ