ಟ್ರಂಪ್‌ ಬೆಂಬಲಿಗರ ಹುಚ್ಚಾಟ; ಅಮೆರಿಕದ ವರ್ಚಸ್ಸಿಗೆ ಮಸಿ


Team Udayavani, Jan 8, 2021, 5:46 AM IST

ಟ್ರಂಪ್‌ ಬೆಂಬಲಿಗರ ಹುಚ್ಚಾಟ ಅಮೆರಿಕದ ವರ್ಚಸ್ಸಿಗೆ ಮಸಿ

ಜಾಗತಿಕ ಸೂಪರ್‌ ಪವರ್‌, ಜಗತ್ತಿನ ದೊಡ್ಡಣ್ಣ ಎಂದೆಲ್ಲ ಕರೆಸಿಕೊಳ್ಳುವ ಅಮೆರಿಕ ಕಳೆದ ಕೆಲವು ವರ್ಷಗಳಿಂದ ಕೆಟ್ಟ ಕಾರಣಗಳಿಂದಾಗಿಯೇ ಸುದ್ದಿಯಲ್ಲಿದೆ. ಅತ್ಯಂತ ಪ್ರಗತಿಪರ ಪ್ರಜಾಪ್ರಭುತ್ವ ರಾಷ್ಟ್ರ ತನ್ನದು ಎಂದು ಹೇಳಿಕೊಳ್ಳುವ ಅಮೆರಿಕದ ರಾಜಕೀಯವಂತೂ ಚುನಾವಣ ಸಮಯದಲ್ಲಿ ಜಗತ್ತಿನೆದುರು ನಗೆಪಾಟಲಿಗೀಡಾಗುತ್ತಾ ಬಂದಿತ್ತು, ಆದರೆ ಬುಧವಾರ ಅಮೆರಿಕದ ಸಂಸತ್‌ ಭವನದಲ್ಲಿ ನಡೆದ ಘಟನೆ ನಿಜಕ್ಕೂ ಹೇವರಿಕೆಗೆ ಹಾಗೂ ಕಳವಳಕ್ಕೆ ಕಾರಣವಾಗುವಂತೆ ಇತ್ತು.

ಎಲೆಕ್ಟೋರಲ್‌ ಕಾಲೇಜಿನ ಮತ ಗಳಿಕೆಯನ್ನು ಅಧಿಕೃತವಾಗಿ ಘೋಷಿಸಿಲು ಅಮೆರಿಕ ಕಾಂಗ್ರೆಸ್‌ ಜಂಟಿ ಅಧಿವೇಶನ ನಡೆದಿರುವಾಗಲೇ ಸಾವಿರಾರು ಸಂಖ್ಯೆಯಲ್ಲಿ ಟ್ರಂಪ್‌ ಬೆಂಬಲಿಗರು ಸಂಸತ್‌ ಭವನಕ್ಕೆ ಮುತ್ತಿಗೆ ಹಾಕಿದ್ದು, ಅವರನ್ನು ತಡೆಯುವುದಕ್ಕಾಗಿ ನಡೆದ ಪ್ರಯತ್ನ, ಪರಿಣಾಮವಾಗಿ ನಾಲ್ವರು ಟ್ರಂಪ್‌ ಬೆಂಬಲಿಗರು ಭದ್ರತಾ ಪಡೆಯ ಗುಂಡಿಗೆ ಬಲಿಯಾದ ಘಟನೆ ನಡೆದಿದೆ.

ನಿಯೋಜಿತ ಅಧ್ಯಕ್ಷ ಜೋ ಬೈಡೆನ್‌ ಅವರ ಗೆಲುವನ್ನು ಅಮೆರಿಕ ಕಾಂಗ್ರೆಸ್‌ ಅಧಿಕೃತವಾಗಿ ಪ್ರಮಾಣೀಕರಿಸಿದ್ದು, ಜನವರಿ 20ರಂದು ಅಧ್ಯಕ್ಷರಾಗಿ ಜೋ ಬೈಡೆನ್‌, ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್‌ ಪ್ರಮಾಣ ಸ್ವೀಕರಿಸಲಿರುವರಾದರೂ, ಬುಧವಾರದ ಕೋಲಾಹಲ, ಹಿಂಸಾಚಾರವೇ ಪ್ರಮುಖ ಸುದ್ದಿಯಾಗುವಂತಾಯಿತು.

ಇದಕ್ಕೆ ನಿಸ್ಸಂಶಯವಾಗಿಯೂ ಹೊರಹೋಗಲಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಾರಣ. ತಮ್ಮ ಬೆಂಬಲಿಗರು ಸಂಸತ್‌ ಭವನಕ್ಕೆ ಮುತ್ತಿಗೆ ಹಾಕಿದ ಸಮಯದಲ್ಲಿ ಬೆಚ್ಚಿಬಿದ್ದ ಅವರು “ಸುಗಮವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ’ ಹೇಳಿ ತಮ್ಮ ತಪ್ಪಿನಿಂದ ನುಣುಚಿಕೊಳ್ಳುವ ಪ್ರಯತ್ನ ನಡೆಸಿದರು. ಆದರೆ ಘಟನೆಗೂ ಮುನ್ನಾ ದಿನ ತಮ್ಮ ಬೆಂಬಲಿಗರಿಗೆ ಎಲ್ಲರೂ ಕ್ಯಾಪಿಟಲ್‌ ಹಿಲ್‌ಗೆ ಮುತ್ತಿಗೆ ಹಾಕಿ ಎಂದು ಪ್ರಚೋದನೆ ನೀಡಿದವರೂ ಅವರೇ. ಮೊದಲಿಂದಲೂ ಟ್ರಂಪ್‌ ತಮ್ಮ ಹಿಡಿತವಿಲ್ಲದ ನಾಲಗೆಯಿಂದ ಗುರುತಿಸಿಕೊಂಡಿದ್ದರಾದರೂ, ಎಲಕ್ಟೋರಲ್‌ ಕಾಲೇಜುಗಳ ಪ್ರಮಾಣೀಕರಣದಂಥ ಸಂದರ್ಭದ ಮಹತ್ವವನ್ನು ಅರಿಯದಷ್ಟು ಅಪ್ರಬುದ್ಧರಂತೆ ನಡೆದುಕೊಂಡದ್ದು, ಅಮೆರಿಕನ್‌ ರಾಜಕೀಯದ ಇತಿಹಾಸದಲ್ಲೇ ದೊಡ್ಡ ಕಪ್ಪುಚುಕ್ಕೆಯಾಗಿ ಉಳಿದುಹೋಗಲಿದೆ. ಟ್ರಂಪ್‌ ನವೆಂಬರ್‌ ತಿಂಗಳಿನಿಂದಲೂ ಚುನಾವಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ, ತಾವು ಸೋತಿಲ್ಲ ಎಂದೇ ವಾದಿಸುತ್ತಾ ಬಂದಿದ್ದರಾದರೂ, ಈ ಎರಡು ತಿಂಗಳಲ್ಲಿ ಚುನಾವಣ ಅಕ್ರಮವನ್ನು ರುಜುವಾತು ಮಾಡುವಲ್ಲಿ ಸಂಪೂರ್ಣ ವಿಫ‌ಲರಾದರು. ಆದಾಗ್ಯೂ ಡಿಸೆಂಬರ್‌ ತಿಂಗಳ ವೇಳೆಗಾಗಲೇ ಅಧಿಕಾರ ಹಸ್ತಾಂತರದ ಪೂರ್ವ ಪ್ರಕ್ರಿಯೆ ಆರಂಭವಾಗಿಬಿಟ್ಟಿತ್ತು.

ನಿಯೋಜಿತ ಅಧ್ಯಕ್ಷ ಬೈಡೆನ್‌ರ ತಂಡವು ಶ್ವೇತಭವನದಲ್ಲಿನ ಪ್ರಮುಖ ಕಾರ್ಯಾಲಯಗಳಲ್ಲಿ ತಮ್ಮ ನಾಮನಿರ್ದೇಶಿತ ಸಿಬಂದಿಯನ್ನು ನೇಮಿಸಲಾರಂಭಿಸಿತ್ತು ಹಾಗೂ ರಕ್ಷಣೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಹೆಸರನ್ನೂ ಘೋಷಿಸಿತ್ತು. ಅಂದರೆ, ಅಧಿಕಾರ ಹಸ್ತಾಂತರವಾಗುವುದು, ಬೈಡೆನ್‌ ಅವರೇ ಅಧ್ಯಕ್ಷರಾಗುತ್ತಾರೆ ಎನ್ನುವುದು ಟ್ರಂಪ್‌ಗ್ೂ ಆಗಲೇ ಖಚಿತವಾಗಿತ್ತು. ಈ ಪ್ರಕ್ರಿಯೆಗೆ ರಿಪಬ್ಲಿಕನ್‌ ಪಕ್ಷದ ತಂಡವೂ ಸಹಕರಿಸಲಾರಂಭಿಸಿತ್ತು. ತಮ್ಮ ಬೆಂಬಲಿಗರನ್ನು ಪ್ರಚೋದಿಸುವುದರಿಂದ ಏನೂ ಪ್ರಯೋಜನವಾಗದು ಎನ್ನುವುದೂ ಟ್ರಂಪ್‌ಗೆ ಖಾತ್ರಿಯಾಗಿತ್ತು. ಹೀಗಿರುವಾಗ, ಅವರು ತಮ್ಮ ಬೆಂಬಲಿಗರನ್ನು ಹಾದಿತಪ್ಪಿಸುವಂತೆ, ಹಿಂಸೆಯತ್ತ ಹೊರಳುವಂತೆ ಮಾಡಿದ್ದು ಬಹುದೊಡ್ಡ ತಪ್ಪು. ಈಗಿನ ಅಹಿತಕರ ಘಟನೆಗೆ ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ಬೇಸರ ವ್ಯಕ್ತಪಡಿಸಿರುವುದು ಸರಿಯಾಗಿಯೇ ಇದೆ. ಒಂದೆಡೆ, ಅಮೆರಿಕದ ಎದುರಾಳಿ ಚೀನ, ಪ್ರಸಕ್ತ ವಿದ್ಯಮಾನವನ್ನು ನೋಡಿ ಅಪಹಾಸ್ಯ ಮಾಡುತ್ತಿದೆ. ಒಟ್ಟಲ್ಲಿ, ಜಾಗತಿಕ ನಾಯಕತ್ವದಲ್ಲಿನ ಸಮತೋಲನವನ್ನು, ಅಮೆರಿಕದ ವರ್ಚಸ್ಸನ್ನು ಈ ರೀತಿಯ ಘಟನೆಗಳು ಅಲುಗಿಸುವ ಸಾಧ್ಯತೆ ಅಧಿಕವಿರುತ್ತದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.