ಭಾಲ್ಕಿ: ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ
Team Udayavani, Jan 9, 2021, 2:12 PM IST
ಭಾಲ್ಕಿ: ತಾಲೂಕಿನ ಜಿರಗ್ಯಾಳ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸೂಕ್ತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ತಡೆಹಿಡಿದ ಘಟನೆ ನಡೆದಿದೆ.
ಮೆಹಕರ ಪೊಲೀಸ್ ಠಾಣೆ ವ್ಯಾಪ್ತಿಯ ಜೀರಗ್ಯಾಳ ಗ್ರಾಮದ 12 ವರ್ಷದ ಬಾಲಕಿಯನ್ನು ಅದೇ ಗ್ರಾಮದ 24 ವರ್ಷದ ವ್ಯಕ್ತಿಗೆ ಕೊಟ್ಟು ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಕುರಿತು ಮಾಹಿತಿ ತಿಳಿದ ಮೆಹಕರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ನಂದಕುಮಾರ ವಿವಾಹ ತಡೆಗೆ ತಂಡ ರಚಿಸಿ, ದಾಳಿ ನಡೆಸಿದರು.
ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಹೇಳಿದರು. ಮಗಳಿಗೆ 18 ವರ್ಷ ತುಂಬುವವರೆಗೆ ವಿವಾಹ ಮಾಡುವುದಿಲ್ಲ ಎನ್ನುವ ಮುಚ್ಚಳಿಕೆ ಪತ್ರ
ಬರೆಸಿಕೊಂಡು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ:ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆ: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್
ಈ ಸಂದರ್ಭದಲ್ಲಿ ಗ್ರಾ.ಪಂ ಅಧಿಕಾರಿ ಚಂದ್ರಶೇಖರ ಬನ್ನಾಳೆ, ಎಎಸ್ಐ ಮಲ್ಲಿಕಾರ್ಜುನ, ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ವಿಜಯಲಕ್ಷ್ಮಿ, ಮುಖ್ಯಶಿಕ್ಷಕ ಮಾರುತಿರಾವ, ಭಾತಂಬ್ರಾ ಗ್ರಾಪಂ ಪಿಡಿಒ ಧನರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ