ದುಬೈ :ಕೋವಿಡ್ ಲಸಿಕೆ ತೆಗೆದುಕೊಂಡ ಬಾಲಿವುಡ್ ನ ಮೊದಲ ನಟಿ ಶಿಲ್ಪಾ ಶಿರೋಡ್ಕರ್
ನಾನು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ ಹಾಗೂ ಸುರಕ್ಷಿತವಾಗಿದ್ದೇನೆ
Team Udayavani, Jan 9, 2021, 7:30 PM IST
ದುಬೈ: ಭಾರತವು ಕೋವಿಡ್ ಸೋಂಕಿಗೆ ದೇಶೀಯವಾಗಿ ಲಸಿಕೆ ಅಭಿವೃದ್ದಿಪಡಿಸಿ ಅದರ ಬಳಕೆಗೆ ಇನ್ನೇನು ಕ್ಷಣಗಣನೆ ಆರಂಭಿಸಿರುವಾಗಲೇ ನಟಿ ಶಿಲ್ಪಾ ಶಿರೋಡ್ಕರ್ ಅವರು ದುಬೈನಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ.
ಸದ್ಯ ದುಬೈನಲ್ಲಿ ಇರುವ ನಟಿ ಅಲ್ಲಿ ಕೋವಿಡ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಆ ಮೂಲಕ ಕೋವಿಡ್ ಲಸಿಕೆ ಪಡೆದುಕೊಂಡ ಮೊದಲ ಬಾಲಿವುಡ್ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಕುರಿತಾಗಿ ತನ್ನ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ನಾನು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ ಹಾಗೂ ಸುರಕ್ಷಿತವಾಗಿದ್ದೇನೆ, ಧನ್ಯವಾದಗಳು UAE ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ತಾವು ಲಸಿಕೆ ಹಾಕಿಸಿಕೊಂಡಿರುವ ಪೋಟೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ದೇಶದ ಮೊದಲ ಆಟಿಕೆ ಕ್ಲಸ್ಟರ್ಗೆ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ
1989ರಲ್ಲಿ ತೆರೆಕಂಡ ‘ಭ್ರಷ್ಟಾಚಾರ್’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಶಿಲ್ಪಾ ಶಿರೋಡ್ಕರ್ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ಜೊತೆಯಲ್ಲಿ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಆ ನಂತರ ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಈ ನಟಿ 2000 ನೇ ಇಸವಿಯಲ್ಲಿ ತೆರೆಕಂಡಿದ್ದ ಗಜಗಾಮಿನಿ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ನಂತರದ ದಿನಗಳಲ್ಲಿ ಚಿತ್ರರಂಗದಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.
ಈ ನಟಿ ಮಹೇಶ್ ಬಾಬು ಅವರ ಪತ್ನಿಯ ಸಹೋದರಿಯಾಗಿದ್ದು, ಹಲವು ಧಾರವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ನಂತರ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿರುವ ಇವರು ದುಬೈನಲ್ಲಿಯೇ ವಾಸವಾಗಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ