ಶ್ರೀಕೃಷ್ಣಮಠ: ದರ್ಶನ ಮಾರ್ಗದಲ್ಲಿ ಇನ್ನಷ್ಟು ನಾವೀನ್ಯ


Team Udayavani, Jan 9, 2021, 9:45 PM IST

ಶ್ರೀಕೃಷ್ಣಮಠ: ದರ್ಶನ ಮಾರ್ಗದಲ್ಲಿ  ಇನ್ನಷ್ಟು ನಾವೀನ್ಯ

ಉಡುಪಿ: ಶ್ರೀಕೃಷ್ಣಮಠದಲ್ಲಿ ಈ ಹಿಂದೆ ದರ್ಶನಕ್ಕೆ ತೆರಳುವ ಮಾರ್ಗವನ್ನು ಮಾರ್ಪಡಿಸಲಾಗಿತ್ತು. ಈಗ ಅದಕ್ಕೆ ಇನ್ನಷ್ಟು ನಾವೀನ್ಯವನ್ನು ಕೊಡಲಾಗಿದೆ.

ಈ ಹಿಂದೆ ರಾಜಾಂಗಣ ಬಳಿಯ ಉತ್ತರ ದ್ವಾರದಿಂದ ಭೋಜನಶಾಲೆಗೆ ಹೋಗಿ ಅಲ್ಲಿಂದ ಶ್ರೀಕೃಷ್ಣಮಠದ ಒಳಪ್ರಾಂಗಣಕ್ಕೆ ತಲುಪಿ ದರ್ಶನ ಮಾಡುವ ಮತ್ತು ಅಲ್ಲಿಂದಲೇ ಹಿಂದಿರುಗುವ ವ್ಯವಸ್ಥೆ  ಕಲ್ಪಿಸಲಾಗಿತ್ತು. ಈಗ ಇದರ ಅರ್ಧ ಭಾಗದ ಮಾರ್ಗ ಅದೇ ರೀತಿ ಇರಲಿದ್ದು ಇನ್ನರ್ಧ ಭಾಗದ ಮಾರ್ಗ ಬದಲಾಯಿಸಲಾಗಿದೆ.  ಹೊಸ ವ್ಯವಸ್ಥೆಯಂತೆ ಮಧ್ವ ಸರೋವರದ ಪೂರ್ವದಲ್ಲಿ 1986-88ರ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರ  ಪ್ರಥಮ ಪರ್ಯಾಯ ಕಾಲದಲ್ಲಿ ಶ್ರೀವಿಬುಧೇಶತೀರ್ಥ ಶ್ರೀಪಾದರು ಕಟ್ಟಿಸಿದ ಬಾತ್‌ರೂಮ್‌ ಸಂಕೀರ್ಣವನ್ನು ಈಗ ಯಾತ್ರಾರ್ಥಿಗಳು ಕುಳಿತುಕೊಳ್ಳಲು ಮತ್ತು ಸರತಿಸಾಲಿನಲ್ಲಿ ನಿಲ್ಲಲು ಬಳಸಲಾಗಿದೆ.

ಹೊಸ ವ್ಯವಸ್ಥೆಯಲ್ಲಿ  ಯಾತ್ರಾರ್ಥಿಗಳ ತುರ್ತು ಅಗತ್ಯಕ್ಕಾಗಿ ಒಂದೆರಡು ಸ್ನಾನಗೃಹ ವನ್ನು ಇರಿಸಿಕೊಳ್ಳಲಾಗುತ್ತದೆ. ಇದನ್ನು  ಕ್ಯೂ ಕಾಂಪ್ಲೆಕ್ಸ್‌ ಎಂದು ಕರೆಯಲಾಗುತ್ತದೆ. ಇಲ್ಲಿಂದ ಯಾತ್ರಾರ್ಥಿಗಳು ಮೊದಲ ಮಹಡಿಗೆ ಬಂದು ಅಲ್ಲಿಂದ ಮಧ್ವ ಸರೋವರದ ಬದಿಯಿಂದ ಭೋಜನಶಾಲೆಯ ಪಾರ್ಶ್ವದಲ್ಲಿ ಮುಂದುವರಿದು ಕೃಷ್ಣಮಠದ ಗರ್ಭಗುಡಿ ಮೇಲ್ಭಾಗಕ್ಕೆ ತಲುಪುತ್ತಾರೆ. ಉಳಿದಂತೆ ಹಿಂದಿನಂತೆ ಇರುತ್ತದೆ. ವಾಪಸ್‌ ಬರುವಾಗ ಭೋಜನ ಪ್ರಸಾದಕ್ಕೆ ಹೋಗಬಹುದು ಅಥವಾ ಕೆಳಗಿಳಿದು ಹೊರಗೆ ಬರಬಹುದು. ಇದರಿಂದ ಕ್ಯೂ ಕಾಂಪ್ಲೆಕ್ಸ್‌ ಏರಿದತತ್‌ಕ್ಷಣ ಮಧ್ವಸರೋವರ, ರಥಬೀದಿ, ಸ್ವರ್ಣ ಗೋಪುರ, ಕಂಡುಬರುತ್ತದೆ. ಭೋಜನಶಾಲೆಯ ಪಾರ್ಶ್ವದಲ್ಲಿ ಯಾತ್ರಾರ್ಥಿಗಳಿಗೆ ಕಷ್ಟವಾದರೆ ಕುಳಿತು ಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪಾಸ್‌ ಹೊಂದಿದವರು ಈ ಹಿಂದಿನಂತೆ ಮಹಾದ್ವಾರದ ಕಡೆಯಿಂದ ಯಾವುದೇ ಅಡೆತಡೆಗಳಿಲ್ಲದೆ ಭೇಟಿ ನೀಡಬಹುದು.

ಪರಸ್ಥಳದಿಂದ ಬಂದವರಿಗೆ ಉಡುಪಿಯ ಮಾಹಿತಿ ಸಿಗಬೇಕು, ಭಕ್ತರಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂಬ ಉದ್ದೇಶವಿರಿಸಿಕೊಂಡು ಮಾರ್ಗದಲ್ಲಿ ಸ್ವಲ್ಪ ಬದಲಾವಣೆ ತಂದಿದ್ದೇವೆ. ಹಿಂದೆ ಇದ್ದ ವ್ಯವಸ್ಥೆಯಲ್ಲಿ ಅರ್ಧಾಂಶವನ್ನು ಹಾಗೇ ಉಳಿಸಿಕೊಂಡಿದ್ದೇವೆ ಮತ್ತು ಉಳಿದ ಅಂಶವನ್ನು ಯಾತ್ರಿಗಳ ಭೋಜನಕ್ಕೆ ಹೋಗುವ ಮಾರ್ಗಕ್ಕೆ ಮತ್ತು ನಿರ್ಗಮನಕ್ಕೆ ಬಳಸಿಕೊಳ್ಳುತ್ತಿದ್ದೇವೆ. ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರ್ಯಾಯ ಅದಮಾರು ಮಠ, ಶ್ರೀಕೃಷ್ಣಮಠ, ಉಡುಪಿ.

ನಾನು ದೈನಂದಿನ ಭೇಟಿಯಂತೆ ಹೋಗಿ ನೋಡಿದ್ದೇನೆ. ಮುಂದಿನ ದಿನಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಹೇಗೆ ಬಲಪಡಿಸಬಹುದು ಎಂದು ನಮ್ಮ ಪೊಲೀಸ್‌ ತಂಡ ಭೇಟಿ ನೀಡಿ ಸಲಹೆ  ನೀಡಬಹುದು.  –ವಿಷ್ಣುವರ್ಧನ್‌, ಎಸ್‌ಪಿ, ಉಡುಪಿ.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.