ಚೇಳೂರು ತಾಲೂಕು ರಚನೆ ಬಳಿಕ ಭುಗಿಲೆದ್ದ ಅಸಮಾಧಾನ: ಪ್ರತಿಭಟನೆ


Team Udayavani, Jan 11, 2021, 3:56 PM IST

ಚೇಳೂರು ತಾಲೂಕು ರಚನೆ ಬಳಿಕ ಭುಗಿಲೆದ್ದ ಅಸಮಾಧಾನ: ಪ್ರತಿಭಟನೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೆಲವೊಂದು ಹೋಬಳಿಗಳನ್ನು ಪ್ರತ್ಯೇಕಗೊಳಿಸಿ ನೂತನವಾಗಿ ಚೇಳೂರು ತಾಲೂಕು ರಚನೆಯಾಗಿರುವ ಬೆನ್ನಲ್ಲೆ ಅಪಸ್ವರ ಶುರುವಾಗಿದೆ.

ಬಾಗೇಪಲ್ಲಿ ತಾಲೂಕಿನಲ್ಲಿದ್ದ ನಾರೇಮುದ್ದೇಪಲ್ಲಿ ಗ್ರಾಮ ಪಂಚಾಯಿತಿಯನ್ನು ಚೇಳೂರು ತಾಲೂಕಿನಲ್ಲಿ ಸೇರಿಸಿರುವ ಕ್ರಮವನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುಧ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಾರೇಮುದ್ದೇಪಲ್ಲಿ ಗ್ರಾಪಂ ವ್ಯಾಪ್ತಿಗೆ ಬರುವ 13 ಹಳ್ಳಿಗಳನ್ನು ಚೇಳೂರು ತಾಲೂಕಿಗೆ ಸೇರಿಸಿದ್ದಾರೆ ಇದರಿಂದ ಈ ಭಾಗದ ರೈತರು, ವಿದ್ಯಾರ್ಥಿಗಳು, ವಯೋವೃದ್ಧರು ಹಾಗೂ ನಾಗರಿಕರಿಗೆ ತೊಂದರೆಯಾಗಲಿದ್ದು ಕೂಡಲೇ ಜಿಲ್ಲಾಡಳಿತ ನಾರೇಮುದ್ದೆಪಲ್ಲಿ ಗ್ರಾಮ ಪಂಚಾಯಿತಿಯನ್ನು ಬಾಗೇಪಲ್ಲಿ ತಾಲೂಕಿನಲ್ಲಿ ಮುಂದುವರೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ನಾರೇಮುದ್ದೇಪಲ್ಲಿಯಿಂದ ಬಾಗೇಪಲ್ಲಿಗೆ ತೆರಳಲು ಉತ್ತಮವಾಗಿ ಸಾರಿಗೆ ಮತ್ತು ಸಂಚರಿಸಲು ಒಳ್ಳೆಯ ರಸ್ತೆಯ ಸೌಲಭ್ಯವಿದೆ. ಆದರೆ ನೂತನವಾಗಿ ರಚನೆ ಮಾಡಿರುವ ಚೇಳೂರು ತಾಲೂಕಿಗೆ ತೆರಳಲು 35 ಕಿ.ಮೀ ಕ್ರಮಿಸಬೇಕಾಗಿದೆ. ಜೊತೆಗೆ ಭೌಗೋಳಿಕವಾಗಿ ಅವೈಜ್ಞಾನಿಕವಾಗಿದೆ. ಸರ್ಕಾರ ಕೂಡಲೇ ನಾರೇಮುದ್ದೇಪಲ್ಲಿ ಗ್ರಾಮ ಪಂಚಾಯಿತಿಯನ್ನು ಬಾಗೇಪಲ್ಲಿ ತಾಲೂಕಿನಲ್ಲಿ ಮುಂದುವರೆಸಬೇಕೆಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಅವರಿಗೆ ಮನವಿ ಸಲ್ಲಿಸಿದರು.

ಕಂದಾಯ ಇಲಾಖೆಯ ವಿರುದ್ಧ ಕಿಡಿ: ಬಾಗೇಪಲ್ಲಿ ತಾಲೂಕಿನಲ್ಲಿರುವ ನಾರೇಮುದ್ದೇಪಲ್ಲಿ ಗ್ರಾಮ ಪಂಚಾಯಿತಿಯನ್ನು ನೂತನವಾಗಿ ರಚನೆಯಾಗಿರುವ ಚೇಳೂರು ತಾಲೂಕಿನಲ್ಲಿ ಸೇರಿಸುವ ವಿಚಾರದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಈ ಭಾಗದ ಜನರು ಮತ್ತು ಚುನಾಯಿತಿ ಪ್ರತಿನಿಧಿಗಳ ಗಮನಕ್ಕೆ ತಂದಿಲ್ಲ ಜೊತೆಗೆ ಚರ್ಚೆ ಸಹ ಮಾಡಿಲ್ಲ ಆದರೆ ಗ್ರಾಮಸ್ಥರ ಒಪ್ಪಿಗೆ ಪಡೆದಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಕಾರಜೋಳ ಸ್ಪಷ್ಟನೆ

ಜಿ.ಪಂ ಅಧ್ಯಕ್ಷ ಬೆಂಬಲ: ಜಿಲ್ಲಾಡಳಿತ ಮುಂದೆ ಧರಣಿ ನಡೆಸುತ್ತಿದ್ದ ನಾರೇಮುದ್ದೇಪಲ್ಲಿ ಗ್ರಾಪಂ ಜನರನ್ನು ಭೇಟಿ ಮಾಡಿದ ಜಿ.ಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ (ಚಿನ್ನಿ) ಚೇಳೂರು ತಾಲೂಕು ರಚನೆಯಾದ ಬಳಿಕ ತಾವು ಹೋರಾಟದ ಹಾದಿಯನ್ನು ಹಿಡಿದಿದ್ದೀರಿ. ಯಾರಾದರೂ ನಾರೇಮುದ್ದೇಪಲ್ಲಿ ಗ್ರಾಪಂ ಚೇಳೂರು ತಾಲೂಕಿಗೆ ಸೇರಿಸಬೇಡಿ ಎಂದು ಹೇಳಿದರೇ ನಾನೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡುತ್ತಿದ್ದೆ. ಆದರೂ ಸಹ ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ನಾರೇಮುದ್ದೇಪಲ್ಲಿಯನ್ನು ಬಾಗೇಪಲ್ಲಿ ತಾಲೂಕಿನಲ್ಲಿ ಮುಂದುವರೆಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ನಾರೇಮುದ್ದೇಪಲ್ಲಿಯ ಮುಖಂಡ ಪ್ರೋ.ಎನ್.ವಿ.ನರಸಿಂಹಯ್ಯ ,ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.