ಯರಮರಸ್‌ ಬೈಪಾಸ್‌ನಲ್ಲಿ ಟೌನ್‌ಶಿಪ್‌ ನಿರ್ಮಾಣ

ವೈಟಿಪಿಎಸ್‌ ಸಮೀಪ ಏರ್‌ಪೋರ್ಟ್‌ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ 49 ಕೋಟಿ ರೂ.ಮಂಜೂರಾಗಿದೆ.

Team Udayavani, Jan 11, 2021, 5:12 PM IST

ಯರಮರಸ್‌ ಬೈಪಾಸ್‌ನಲ್ಲಿ ಟೌನ್‌ಶಿಪ್‌ ನಿರ್ಮಾಣ

ರಾಯಚೂರು: ಸಮೀಪದ ಯರಮರಸ್‌ ಬೈಪಾಸ್‌ನಲ್ಲಿ ಹೊಸ ಟೌನ್‌ಶಿಪ್‌ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಡಾ| ಶಿವರಾಜ ಪಾಟೀಲ್‌ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ರವಿವಾರ ಮಾತನಾಡಿದ ಅವರು, ರಾಷ್ಟ್ರೀಯ ರಾಜೀವ್‌ಗಾಂಧಿ ವಸತಿಯ ಜಿಪ್ಲೆಸ್‌ ಟ್ಯೂ ಯೋಜನೆಯಡಿ ಈ ಟೌನ್‌ಶಿಪ್‌ ಯೋಜನೆ ಜಾರಿಗೊಳಿಸುತ್ತಿದ್ದು, ಅದಕ್ಕಾಗಿ 43 ಎಕರೆ ಪ್ರದೇಶವನ್ನು ಇಲಾಖೆಗೆ ನೀಡಲಾಗಿದೆ. ಇದರಲ್ಲಿ 2,740
ಮನೆಗಳನ್ನು ನಿರ್ಮಿಸುತ್ತಿದ್ದು, ಅದಕ್ಕಾಗಿ ಸಾಮಾನ್ಯ ಜನರಿಂದ 4 ಲಕ್ಷ ಹಾಗೂ ಎಸ್ಸಿ-ಎಸ್ಟಿಯಿಂದ 2.50 ಲಕ್ಷ ರೂ. ಕಂತಿನ ಮೂಲಕ ಪಡೆಯಲು ಸಹ ಅವಕಾಶ
ಕಲ್ಪಿಸಲಾಗಿದೆ. ಈ ಟೌನ್‌ಶಿಪ್‌ನಲ್ಲಿ ಆಸ್ಪತ್ರೆ, ರಸ್ತೆ, ಕುಡಿವ ನೀರು, ಯುಜಿಡಿ, ಬೀದಿದೀಪ, ದೇವಸ್ಥಾನ ಸೇರಿ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದು ಹೇಳಿದರು.

ಇನ್ನು ನಗರದಲ್ಲಿರುವ ಎಲ್ಲ 42 ಸ್ಲಂ ಬಡಾವಣೆಗಳ ನಿವಾಸಿಗಳಿಗೆ ಶೀಘ್ರದಲ್ಲಿಯೇ ಹಕ್ಕು ಪತ್ರ ವಿತರಿಸಲಾಗುವುದು. ಈಗಾಗಲೇ ಸ್ಲಂ ಬೋರ್ಡಿನಿಂದ 2,700 ಮನೆಗಳನ್ನು ಮಂಜೂರು ಮಾಡಲಾಗಿದೆ. ಸ್ಲಂ ಘೋಷಣೆಯಾದ ಬಡಾವಣೆಗಳಲ್ಲಿರುವ ಸ್ಥಳ ಕಂದಾಯ, ನಗರಸಭೆ ಸೇರಿದ್ದರೆ ಅವರಿಂದ ಸ್ಲಂ ಬೋಡ್‌
ಗೆ ಹಸ್ತಾಂತರಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುವುದು. ಇಂತಹ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಮಾಡುತ್ತಿದ್ದು, ಸ್ಲಂ ನಿವಾಸಿಗಳಿಗೆಲ್ಲರಿಗೂ
ಸೂರು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ ಎಂದರು.

ವೈಟಿಪಿಎಸ್‌ ಸಮೀಪ ಏರ್‌ಪೋರ್ಟ್‌ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ 49 ಕೋಟಿ ರೂ.ಮಂಜೂರಾಗಿದೆ. ಕೆಲಸ ಆರಂಭಕ್ಕೆ ಅನುಮತಿಯು ಸಿಕ್ಕಿದೆ. ಇನ್ನು ಆರ್‌ ಡಿಎಯಿಂದ 10 ಕೋಟಿ ವೆಚ್ಚದಲ್ಲಿ ಮಾವಿನ ಕೆರೆ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ. ಈಗಾಗಲೇ ನಗರದ 35 ವಾರ್ಡ್‌ಗಳಲ್ಲಿ ಬಹುತೇಕ ಎಲ್ಲಕಡೆ ರಸ್ತೆ
ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ್ದು, ಕೆಲಸವೂ ಆರಂಭಗೊಂಡಿದೆ ಇನ್ನು 13 ವಾರ್ಡ್‌ಗಳಲ್ಲಿ ಕೆಲಸ ಆರಂಭಿಸಬೇಕಿದೆ.

ನಗರದಲ್ಲಿ ನಡೆಯುತ್ತಿರುವ ಯುಜಿಡಿ ಮತ್ತು ನಿರಂತರ ಕುಡಿವ ನೀರು ಪೂರೈಕೆ ಯೋಜನೆ ಹಂತ ಹಂತವಾಗಿ ಪೂರ್ಣಗೊಳ್ಳುತ್ತಿದ್ದು, ಮುಂದಿನ ಮಾರ್ಚ್‌ ವೇಳೆಗೆ 12 ಜೋನ್‌ಗಳಿಗೆ ನೀರು ಒದಗಿಸಿಕೊಡುವ ನಿಟ್ಟಿನಲ್ಲಿ ಕೆಲಸ ನಡೆಸಲಾಗುತ್ತಿದೆ. ನಗರದ ಹೊರವಲಯದಲ್ಲಿ ರಿಂಗ್‌ ರಸ್ತೆ ನಿರ್ಮಾಣ ವಿಚಾರವಾಗಿ ಸಿಎಂ ಮುಂದಿನ ದಿನಗಳಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಇದರೊಂದಿಗೆ  ರಾಜ್ಯ ಸರ್ಕಾರ 5ಎ ನಾಲೆ ಜಾರಿಗೊಳಿಸಲು ಸೂಕ್ತ ಕ್ರಮ ಜರುಗಿಸುತ್ತಿದೆ. ಏತ ನೀರಾವರಿ ಯೋಜನೆಯಿಂದ ನೀರನ್ನು ಪಡೆದು ರೈತರಿಗೆ ಕಾಳುವೆ ಮೂಲಕ ನೀರು ಒದಗಿಸುವುದರ ಕುರಿತು ಚರ್ಚೆ ನಡೆಸಿದ್ದು ಇದರ ಬಗ್ಗೆ ಅಧಿಕಾರಿಗಳು ವರದಿ ತಯಾರಿಸುತ್ತಿದ್ದಾರೆ. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 25 ಕೋಟಿ ರೂ. ನೀಡಿದ್ದು, ಅದರ ಹಂಚಿಕೆಯನ್ನು ಇಷ್ಟರಲ್ಲಿಯೇ ಮಾಡಲಾಗುವುದು.
ಇನ್ನು ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಚಾಲನೆಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.