ಉಸ್ತುವಾರಿ ಸಚಿವರ ಸಿಟಿ ರೌಂಡ್ಸ್
Team Udayavani, Jan 12, 2021, 3:07 PM IST
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಸೋಮವಾರ ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಬನಶಂಕರಿ ಬಡಾವಣೆ, ವಿದ್ಯಾನಗರ, ಬಾಪೂಜಿ ಪಾಲಿಟೆಕ್ನಿಕ್ ರಸ್ತೆ, ಶಾರದಾಂಬ ಸರ್ಕಲ್, ಎಸ್ಎಸ್ ಲೇಔಟ್, ಡಬಲ್ ರೋಡ್, ಹೊಂಡದ ಸರ್ಕಲ್ ಬಳಿಯ ಕಲ್ಯಾಣಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ತ್ವರಿತ ಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರಪಾಲಿಕೆ, ಸ್ಮಾರ್ಟ್ಸಿಟಿ ಹಾಗೂ ದೂಡಾ ವತಿಯಿಂದ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದಾವಣಗೆರೆ ನಗರ ಸ್ಮಾರ್ಟ್ಸಿಟಿ ಹೆಸರಿಗೆ ತಕ್ಕಂತೆ ಸುಂದರ ಹಾಗೂ ಸುಸಜ್ಜಿತವಾಗಿ ರೂಪುಗೊಳ್ಳಲು ಎಲ್ಲರ ಸಹಕಾರದ ಅಗತ್ಯವಿದೆ. ಅದಕ್ಕಾಗಿ ಉತ್ತಮ ಕಾಮಗಾರಿಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಇದನ್ನೂ ಓದಿ:ಕುರುಬರ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ಆರ್ ಎಸ್ಎಸ್ ಕೈವಾಡ: ಸಿದ್ದರಾಮಯ್ಯ
ವೀಕ್ಷಣೆ ವೇಳೆ ಕೆಲವೆಡೆ ಸಾರ್ವಜನಿಕರು ಕಾಮಗಾರಿಗಳ ಬಗೆಗೆ ದೂರಿದಾಗ, ಆದಷ್ಟು ಕೆಲಸಗಳನ್ನು ಕಡಿಮೆ ಮಾಡಿದರೂ ಪರವಾಗಿಲ್ಲ. ಆದರೆ ಗುಣಮಟ್ಟ ಹಾಗೂ ಯೋಜನಾಬದ್ಧವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು