ಕ್ಯೂಆರ್‌ ಕೋಡ್‌ನಿಂದ ತೊಗರಿ ಖರೀದಿ ವಿಳಂಬ! ಮುಕ್ತ ಮಾರುಕಟ್ಟೆಯತ್ತ ಮುಖ

ಅರ್ಹ ರೈತರಿಗೆ ವಂಚನೆಯಾಗಿ ಮಧ್ಯವರ್ತಿಗಳು ಲಾಭ ಮಾಡಿಕೊಳ್ಳುತ್ತಿದ್ದರು.

Team Udayavani, Jan 12, 2021, 5:06 PM IST

ಕ್ಯೂಆರ್‌ ಕೋಡ್‌ನಿಂದ ತೊಗರಿ ಖರೀದಿ ವಿಳಂಬ! ಮುಕ್ತ ಮಾರುಕಟ್ಟೆಯತ್ತ ಮುಖ

ರಾಯಚೂರು: ತೊಗರಿ ಖರೀದಿ ಕೇಂದ್ರಗಳಲ್ಲಾಗುತ್ತಿದ್ದ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಚೀಲಕ್ಕೂ ಸರ್ಕಾರ ಕ್ಯೂಆರ್‌ ಕೋಡ್‌ ನೀಡುತ್ತಿದ್ದು, ಇದರಿಂದ ಖರೀದಿ ವಿಳಂಬವಾಗುತ್ತಿದೆ. ಈಗಾಗಲೇ ಸುಮಾರು 12,600 ಸಾವಿರಕ್ಕೂ ಅಧಿ ಕ ರೈತರು ನೋಂದಣಿ ಮಾಡಿಸಿದ್ದು, ಖರೀದಿ ಶುರುವಾಗದ ಕಾರಣ ರೈತರು ಮುಕ್ತ ಮಾರುಕಟ್ಟೆಯತ್ತ ಮುಖ ಮಾಡುತ್ತಿದ್ದಾರೆ.

ಮುಕ್ತ ಮಾರುಕಟ್ಟೆಗಿಂತ ಉತ್ತಮ ಬೆಲೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಖರೀದಿ ಕೇಂದ್ರಗಳ ಮೂಲಕ ತೊಗರಿ ಖರೀದಿಸುತ್ತಿತ್ತು. ಆದರೆ, ಎಷ್ಟೇ ನಿಯಮ ರೂಪಿಸಿದರೂ ಇಲ್ಲೂ ಸಾಕಷ್ಟು ಅಕ್ರಮ ನಡೆಯುತ್ತಿತ್ತು. ಅರ್ಹ ರೈತರಿಗೆ ವಂಚನೆಯಾಗಿ ಮಧ್ಯವರ್ತಿಗಳು ಲಾಭ ಮಾಡಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸಲೆಂದೇ ಈ ಬಾರಿ ಪ್ರತಿ ಚೀಲದ ಮೇಲೂ ಕ್ಯೂಆರ್‌ ಕೋಡ್‌ ಮುದ್ರಿಸಲಾಗುತ್ತಿದೆ. ಇದರಿಂದ ಯಾವ ರೈತರಿಂದ ಎಷ್ಟು ತೊಗರಿ ಖರೀದಿಯಾಗಿದೆ ಎಂಬ ನಿಖರ ಮಾಹಿತಿ ಸಿಗಲಿದ್ದು, ಅಕ್ರಮಕ್ಕೆ ಸಾಧ್ಯವಾದಷ್ಟು ಕಡಿವಾಣ ಬೀಳಲಿದೆ. ರೈತರ ನೋಂದಣಿ ಸಂಖ್ಯೆಯನ್ನು ಕ್ಯೂಆರ್‌ ಕೋಡ್‌ಗೆ ಹೊಂದಿಸಲಾಗುತ್ತಿದೆ. ಫ್ರೂಟ್ಸ್‌ ತಂತ್ರಾಂಶದ ಆಧಾರದಡಿ ಕೇಂದ್ರ ಸರ್ಕಾರದ ನಾಫೆಡ್‌ ಸಂಸ್ಥೆ ಖರೀದಿಗೆ ಮುಂದಾಗಿದೆ.

ಕಳೆದ ವರ್ಷ ಪ್ರತಿ ಪಹಣಿಗೆ ಕೇವಲ 10 ಕ್ವಿಂಟಲ್‌ ಮಾತ್ರ ತೊಗರಿ  ಖರೀದಿಸಲಾಗುತ್ತಿತ್ತು. ಈ ಬಾರಿ ಅದನ್ನು 20 ಕ್ವಿಂಟಲ್‌ಗೆ ಹೆಚ್ಚಿಸಲಾಗಿದೆ. ಅಲ್ಲದೇ, ಖರೀದಿ ಕೇಂದ್ರಗಳನ್ನು 35ರಿಂದ 42ಕ್ಕೆ ಹೆಚ್ಚಿಸಲಾಗಿದೆ. ಈಗಾಗಲೇ ಎಲ್ಲೆಡೆ ನೋಂದಣಿ ಕಾರ್ಯ ಶುರುವಾಗಿದೆ. ಕಳೆದ ವರ್ಷ ಇಷ್ಟೊತ್ತಿಗಾಗಲೇ
ಖರೀದಿ ಆರಂಭಿಸಲಾಗಿತ್ತು. ಕಳೆದ ವರ್ಷ ಸುಮಾರು 2.10 ಲಕ್ಷ ಕ್ವಿಂಟಲ್‌ ತೊಗರಿ ಖರೀದಿಸಲಾಗಿತ್ತು.

ಮುಕ್ತ ಮಾರುಕಟ್ಟೆಯತ್ತ ಚಿತ್ತ: ಈ ಬಾರಿ ಸರ್ಕಾರ 6 ಸಾವಿರ ರೂ. ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ಮುಕ್ತ ಮಾರುಕಟ್ಟೆಯಲ್ಲೂ ವರ್ತಕರು ಇದೇ ದರಕ್ಕೆ ಖರೀದಿ ಮಾಡುತ್ತಿದ್ದಾರೆ. ಈಗಾಗಲೇ ನೋಂದಣಿ ಮಾಡಿಸಿರುವ ರೈತರಿಂದ ಈವರೆಗೂ ತೊಗರಿ ಖರೀದಿ ಮಾಡಿರದ ಕಾರಣ ರೈತರು ಮುಕ್ತ ಮಾರುಕಟ್ಟೆಯತ್ತ ಮುಖ ಮಾಡುತ್ತಿದ್ದಾರೆ.

ವರ್ತಕರು ಕಮಿಶನ್‌ ಕಡಿತ ಮಾಡಿದರೂ ನಗದು ವ್ಯವಹಾರ ಮಾಡುವುದರಿಂದ ರೈತರಿಗೆ ನೇರ ಹಣ ಸಂದಾಯವಾಗುತ್ತಿದೆ. ಈ ಕಾರಣಕ್ಕೆ ಅವರು ಮುಕ್ತ ಮಾರುಕಟ್ಟೆಗೆ ಒಲವು ತೋರುತ್ತಿದ್ದಾರೆ. ಈಗ ನಿತ್ಯ 7-8 ಸಾವಿರ ಕ್ವಿಂಟಲ್‌ ತೊಗರಿ ಆವಕವಾಗುತ್ತಿದೆ.

ಇಳುವರಿ ಕುಂಠಿತ: ಜಿಲ್ಲೆಯಲ್ಲಿ ಈ ಬಾರಿಯೂ ಸಾಕಷ್ಟು ಪ್ರಮಾಣದಲ್ಲಿ ತೊಗರಿ ಬೆಳೆಯಲಾಗಿದೆ. ಆದರೆ, ಕಳೆದ ಮುಂಗಾರಿನಲ್ಲಿ ಸತತವಾಗಿ ಸುರಿದ ಮಳೆಯಿಂದ ಎಲ್ಲ ಬೆಳೆಗಳ ಇಳುವರಿ ಕುಂಠಿತಗೊಂಡಿದೆ. ತೊಗರಿ ಕೂಡ ನಿರೀಕ್ಷಿತ ಮಟ್ಟದಲ್ಲಿ ಬೆಳೆದಿಲ್ಲ. ಇದರಿಂದ ಈ ಬಾರಿ ಖರೀದಿ ಕೇಂದ್ರ ನೋಂದಣಿಯಲ್ಲೂ ಗಣನೀಯ ಪ್ರಮಾಣದ ಇಳಿಕೆಯಾಗಿದೆ. ಅಲ್ಲದೇ, ಕೆಲವೆಡೆ ತೊಗರಿ ಕಣಗಳು ಈಗ ನಡೆಯುತ್ತಿದ್ದು, ಮಾರುಕಟ್ಟೆಗೆ ಬರುವ ದರದಲ್ಲಿ
ಕಡಿಮೆಯಾಗಬಹುದು ಎನ್ನಲಾಗುತ್ತಿದೆ.

ಈಗಾಗಲೇ ಎಲ್ಲ ಖರೀದಿ ಕೇಂದ್ರಗಳಲ್ಲೂ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಜ.31ರವರೆಗೂ ನೋಂದಣಿಗೆ ಅವಕಾಶವಿದೆ. ಸರ್ಕಾರ ಕ್ಯೂಆರ್‌ ಕೋಡ್‌ ನೀಡುವ ಕಾರಣಕ್ಕೆ ಖರೀದಿ ಶುರುವಾಗಿಲ್ಲ. ಇನ್ನೊಂದೆರಡು ದಿನಗಳಲ್ಲಿ ಕ್ಯೂಆರ್‌ ಕೋಡ್‌ ಬರಬಹುದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೋಂದಣಿಯಲ್ಲಿ ಸ್ವಲ್ಪ ಇಳಿಕೆಯಾಗಿದೆ.
*ನಾಗರಾಜ್‌,
ಮಾರ್ಕೆಂಟಿಗ್‌ ಫೆಡರೇಶನ್‌ ರಾಯಚೂರು

ವರದಿ:ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.