ಸೈನಾ ನೆಹ್ವಾಲ್‌ ಪಾಸಿಟಿವ್‌ ವರದಿ ಸುಳ್ಳು! : ಥಾಯ್ಲೆಂಡ್‌ ಕೂಟದಲ್ಲೊಂದು ಕೋವಿಡ್ ನಾಟಕ


Team Udayavani, Jan 12, 2021, 11:20 PM IST

ಸೈನಾ ನೆಹ್ವಾಲ್‌ ಪಾಸಿಟಿವ್‌ ವರದಿ ಸುಳ್ಳು! : ಥಾಯ್ಲೆಂಡ್‌ ಕೂಟದಲ್ಲೊಂದು ಕೋವಿಡ್ ನಾಟಕ

ಬ್ಯಾಂಕಾಕ್‌: ಭಾರತದ ಬ್ಯಾಡ್ಮಿಂಟನ್‌ ಆಟಗಾರರೀಗ ಕೋವಿಡ್ ಆಘಾತಕ್ಕೆ ಸಿಲುಕಿರುವ ಸುದ್ದಿ ಮಂಗಳವಾರ ಸಂಜೆ ವೇಳೆ ಭಾರೀ ತಿರುವು ಪಡೆದುಕೊಂಡಿದೆ. ಥಾಯ್ಲೆಂಡ್‌ ಕೂಟದಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್‌ಗೆ ಆಗಮಿಸಿರುವ ಸೈನಾ ನೆಹ್ವಾಲ್‌ ಮತ್ತು ಎಚ್‌.ಎಸ್‌. ಪ್ರಣಯ್‌ ಅವರಿಗೆ 3ನೇ ಪರೀಕ್ಷೆ ವೇಳೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದ್ದಾಗಿ ವರದಿಯಾಗಿತ್ತು. ಈ ಕಾರಣದಿಂದ ಸೈನಾ ಅವರ ಪತಿ ಪಾರುಪಳ್ಳಿ ಕಶ್ಯಪ್‌ ಅವರನ್ನೂ ಸಂಘಟಕರು ಕೂಟದಿಂದ ಹೊರಗಿರಿಸಿದ್ದಾರೆ ಎಂದು ತಿಳಿದು ಬಂದಿತ್ತು. ಇದೀಗ ಸೈನಾ ಮತ್ತು  ಪ್ರಣಯ್‌ ಅವರ ಪಾಸಿಟಿವ್‌ ವರದಿ ಸುಳ್ಳು ಎಂಬುದಾಗಿ ದೃಢಪಟ್ಟಿದೆ.

ವಿಶ್ವ ಬ್ಯಾಡ್ಮಿಂಟನ್‌ ಫೆಡರೇಶನ್‌ ಮೊದಲು ಇಂಥದೊಂದು ಆಘಾತಕಾರಿ ಸುದ್ದಿಯನ್ನು ಮಾಧ್ಯಮಗಳಿಗೆ ತಿಳಿಸಿತ್ತು. ಬಳಿಕ ಭಾರತೀಯ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌, ಈ ಪಾಸಿಟಿವ್‌ ಸುದ್ದಿ ಸುಳ್ಳು ಎಂಬುದಾಗಿ ಸ್ಪಷ್ಟನೆ ನೀಡಿದೆ. ಸೈನಾಗೆ ಮೊದಲ ಸುತ್ತಿನ ವಾಕ್‌ ಓವರ್‌ ಲಭಿಸಿದ್ದು, ಅವರು ಬುಧವಾರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದೆ. ಇದೇ ವೇಳೆ ಸೈನಾ ಅವರ ಪತಿ ಪಿ. ಕಶ್ಯಪ್‌ ಕೂಡ ಬುಧವಾರ ಸ್ಪರ್ಧೆ ಆರಂಭಿಸಲಿದ್ದಾರೆ. ಸೆಲ್ಫ್ ಕ್ವಾರಂಟೈನ್‌ಗೆ ಸೂಚಿಸಲಾಗಿದ್ದ ಕಶ್ಯಪ್‌ ಅವರಿಗೂ ಮೊದಲ ಸುತ್ತಿನ ವಾಕ್‌ ಓವರ್‌ ನೀಡಲಾಗಿದೆ. ಕೋವಿಡ್ ನಿಯಮಾವಳಿ ಪ್ರಕಾರ ಸೈನಾ ಮತ್ತು ಪ್ರಣಯ್‌ ಬ್ಯಾಂಕಾಕ್‌ ಆಸ್ಪತ್ರೆಯಲ್ಲಿ 10 ದಿನಗಳ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ವರದಿಯಾಗಿತ್ತು.

2ನೇ ಸಲ ಪಾಸಿಟಿವ್‌: ಸೈನಾ ನೆಹ್ವಾಲ್‌ ಮತ್ತು ಎಚ್‌.ಎಸ್‌. ಪ್ರಣಯ್‌ ಅವರಲ್ಲಿ ಕೋವಿಡ್ ಪಾಸಿಟಿವ್‌ ಕಂಡುಬಂದದ್ದು ಇದು ಎರಡನೇ ಸಲ ಎಂಬುದು ಆತಂಕಕ್ಕೆ ಕಾರಣವಾಗಿತ್ತು. ಇದಕ್ಕೂ ಮೊದಲು, ಕಳೆದ ತಿಂಗಳು ಶಟ್ಲರ್‌ ಗುರುಸಾಯಿದತ್‌ ಅವರ ವಿವಾಹದಲ್ಲಿ ಪಾಲ್ಗೊಂಡ ವೇಳೆ ಪಾಸಿಟಿವ್‌ ಕಂಡುಬಂದಿತ್ತು.

ಕೆ. ಶ್ರೀಕಾಂತ್‌ ಅಸಮಾಧಾನ: ಇದೇ ವೇಳೆ ಭಾರತದ ಸ್ಟಾರ್‌ ಆಟಗಾರ ಕೆ. ಶ್ರೀಕಾಂತ್‌ ಇಲ್ಲಿನ ಕೋವಿಡ್ ಟೆಸ್ಟ್‌ ಹಾಗೂ ವೈದ್ಯಕೀಯ ಸಿಬ್ಬಂದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು 4 ಸಲ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ಏನೂ ಸ್ಪಷ್ಟವಾಗಿ ತಿಳಿಸಿಲ್ಲ. ಇಲ್ಲಿನ ವ್ಯವಸ್ಥೆಯೇ ಸರಿ ಇಲ್ಲ ಎಂದಿದ್ದಾರೆ. ಜತೆಗೆ ಮೂಗಿನಿಂದ ರಕ್ತಸ್ರಾವ ಆಗುತ್ತಿರುವ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.