ಅನುದಾನ ಮಂಜೂರಾದರೂ ಕಾಮಗಾರಿಗೆ “ಡೀಮ್ಡ್’ ತೊಡಕು

ಆಜ್ರಿ - ಬಡಬಾಳು - ಜಡ್ಡಿಮೂಲೆ ಮಣ್ಣಿನ ರಸ್ತೆ ,ಎರಡು ದಶಕಗಳಿಂದ ಈಡೇರದ ಬೇಡಿಕೆ

Team Udayavani, Jan 12, 2021, 11:07 PM IST

tyd-2

ಕುಂದಾಪುರ: ಆಜ್ರಿಯಿಂದ ಬಡಬಾಳುವಿಗೆ ಸಂಪರ್ಕ ಕಲ್ಪಿಸುವ 8 ಕಿ.ಮೀ. ದೂರದ ಮಣ್ಣಿನ ರಸ್ತೆಗೆ ಇನ್ನೂ ಡಾಮರು ಭಾಗ್ಯ ಮಾತ್ರ ಒದಗಿ ಬಂದಿಲ್ಲ. ಈ ರಸ್ತೆಯ 1.7 ಕಿ.ಮೀ. ವರೆಗಿನ ಕಾಂಕ್ರೀಟ್‌ ಕಾಮಗಾರಿಗೆ ವಾರಾಹಿ ಯೋಜನೆಯಡಿ ಅನುದಾನ ಮಂಜೂರಾಗಿದ್ದರೂ, ಮೀಸಲು ಅರಣ್ಯ ಪ್ರದೇಶದಲ್ಲಿ ಕೆಲವು ಭಾಗಗಳಿಗೆ ರಸ್ತೆ ಹಾದು ಹೋಗುವುದರಿಂದ ಕಾಮಗಾರಿ ಆರಂಭಕ್ಕೆ ತೊಡಕಾಗಿ ಪರಿಣಮಿಸಿದೆ.

ಈ ರಸ್ತೆಯನ್ನೇ ಅವಲಂಬಿಸಿಕೊಂಡಿರುವ ಈ ಭಾಗದ ಜನ ಧೂಳಿನಿಂದಾಗಿ ನಿತ್ಯ ಹೈರಾಣಾಗಿದ್ದಾರೆ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಮುಂದಾಗಲಿ ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿದೆ.

200 ಮೀ. ಮಾತ್ರ  :

ಆಜ್ರಿಯಿಂದ ಜಡ್ಡಿನಮೂಲೆ, ಯಡೂರು, ಯಡ್ನಾಳಿಯಾಗಿ ಬಡಬಾಳುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಮಳೆಗಾಲದಲ್ಲಿ ಕೆಸರುಮಯ ರಸ್ತೆಯಾದರೆ, ಬೇಸಿಗೆಯಲ್ಲಿ ಧೂಳುಮಯ ರಸ್ತೆಯಿಂದಾಗಿ ಇಲ್ಲಿನ ಜನ ವರ್ಷವಿಡೀ ಸಂಕಷ್ಟಪಡುವಂತಾಗಿದೆ. 200 ಮೀಟರ್‌ ಡಾಮರು ಆಜ್ರಿಯಿಂದ ಆರಂಭಗೊಳ್ಳುವ ಈ ರಸ್ತೆಯ ಸುಮಾರು 200 ಮೀಟರ್‌ ಮಾತ್ರ ಡಾಮರು ಕಾಮ ಗಾರಿ ಆಗಿದೆ. ಬಾಕಿ ಉಳಿದ ಸುಮಾರು 8 ಕಿ.ಮೀ. ದೂರದ ರಸ್ತೆಗೆ ಇನ್ನೂ ಡಾಮರು ಆಗಿಲ್ಲ.

ದಶಕದಿಂದಲೂ ಬೇಡಿಕೆ :

ಈ ಮಣ್ಣಿನ ರಸ್ತೆಗೆ ಡಾಮರು ಆಗಬೇಕು ಎನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. ಬರೋಬ್ಬರಿ 20 ವರ್ಷಗಳಿಗೂ ಹಿಂದಿನಿಂದಲೂ ಈ ರಸ್ತೆಗೆ ಡಾಮರು ಕಾಮಗಾರಿ ಆಗಬೇಕು ಎನ್ನುವುದು ಇಲ್ಲಿನ ಜನರ ಬೇಡಿಕೆಯಾಗಿದೆ. ಈ ಮಾರ್ಗವಾಗಿ ಆಜ್ರಿಯಿಂದ ಬಡಬಾಳು ಮೂಲಕವಾಗಿ ಜನ್ಸಾಲೆ, ಅಂಪಾರು, ಕುಂದಾಪುರಕ್ಕೂ ಸಂಚರಿಸಲು ಹತ್ತಿರದ ಮಾರ್ಗವಾಗಿದೆ. ಡಾಮರು ಕಾಮಗಾರಿ ಯಾದರೆ ಸಾವಿರಾರು ಮಂದಿಗೆ ಪ್ರಯೋಜನವಾಗಲಿದೆ. ಈ ಮಾರ್ಗದಲ್ಲಿ 3-4 ಶಾಲಾ ಬಸ್‌ಗಳು, ನೂರಾರು ಬೇರೆ ಬೇರೆ ವಾಹನಗಳು ಸಂಚರಿಸುತ್ತವೆ. ಸಾವಿರಾರು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಕಾಮಗಾರಿ ಆರಂಭಕ್ಕೆ ತೊಡಕು  :

ಈ ಆಜ್ರಿ- ಬಡಬಾಳು- ಜಡ್ಡಿಮೂಲೆವರೆಗಿನ 8 ಕಿ.ಮೀ. ರಸ್ತೆಯ ಪೈಕಿ 1.7 ಕಿ.ಮೀ.ವರೆಗಿನ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಗೆ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮುತುವರ್ಜಿಯಲ್ಲಿ ವಾರಾಹಿ ಯೋಜನೆಯಡಿ ಅನುದಾನ ಮಂಜೂರಾಗಿದೆ. ಈ ರಸ್ತೆ ಜತೆಗೆ ಇನ್ನು 3 ಕಡೆಗಳ ರಸ್ತೆ ಅಭಿವದ್ಧಿಗೆ ಒಟ್ಟಾರೆ 4 ಕೋ.ರೂ. ಅನುದಾನ ಮಂಜೂರಾಗಿತ್ತು. ಆದರೆ ಈ 1.7 ಕಿ.ಮೀ. ಪ್ರದೇಶದಲ್ಲಿ ಕೆಲವೆಡೆ ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ಹಾದು ಹೋಗುವುದರಿಂದ ತೊಡಕಾಗಿದೆ.

1.7 ಕಿ.ಮೀ.ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು. ಮೀಸಲು ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಲು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವ  ಕಳುಹಿಸಲಾಗಿದೆ. ಅಲ್ಲಿಂದ ಇನ್ನೂ ಅನುಮೋದನೆ ಸಿಗಬೇಕಿದೆ. ಅದುಸಿಗದಿದ್ದರೂ, ಆ ಪ್ರದೇಶ ಹೊರತುಪಡಿಸಿ ಉಳಿದೆಡೆ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ಮಾಡಲಾಗುವುದು. ಕಿರಣ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ವಾರಾಹಿ ನೀರಾವರಿ ನಿಗಮ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.