ನೇಕಾರರಿಗೆ ಸರ್ಕಾರ ನೆರವು ನೀಡಲಿ

ನೇಕಾರ ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಸಿಎಂಗೆ ಪತ್ರ

Team Udayavani, Jan 13, 2021, 5:34 PM IST

Let the government help the weavers

ಚಳ್ಳಕೆರೆ: ಜಿಲ್ಲೆಯಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಕೈಮಗ್ಗ ನೇಕಾರರು ಉಣ್ಣೆ ಕೈಮಗ್ಗ ನೇಕಾರಿಯಿಂದಲೇ ತಮ್ಮ ಬದುಕನ್ನು ಕಂಡುಕೊಂಡಿದ್ದಾರೆ. ಕೋವಿಡ್‌ -19 ಹಿನ್ನೆಲೆಯಲ್ಲಿ ಹೆಚ್ಚಿನ ವಹಿವಾಟು ಇಲ್ಲದೆ ಎಲ್ಲಾ ಕುಟುಂಬಗಳು ಬಡತನದಿಂದ ನರಳುತ್ತಿದ್ದು, ನೇಕಾರ ಕುಟುಂಬಗಳಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಜಿಲ್ಲೆಯ ಸಮಸ್ತ ನೇಕಾರರ  ಪರವಾಗಿ ಪತ್ರಬರೆಯುವುದಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.

ಮಂಗಳವಾರ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ ಇರುವ ರಾಜ್ಯ ಉಣ್ಣೆ ಕೈಮಗ್ಗ ನೇಕಾರರ ಸಹಕಾರಿ ಸಂಘದ ಕಾರ್ಯಾಲಯದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉಣ್ಣೆ ಕೈಮಗ್ಗ ನೇಕಾರರ ಅಹವಾಲು, ಪರಿಹಾರ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯೂ ಸೇರಿದಂತೆ ರಾಜ್ಯದ ಉಣ್ಣೆ ಕೈಮಗ್ಗ ನಿಗಮ ಸೂಕ್ತ ಸೌಲಭ್ಯಗಳಿಲ್ಲದೆ ಸೊರಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಣ್ಣೆ ಕೈಮಗ್ಗ ನೇಕಾರಿಕೆಗೆ ಹೆಚ್ಚು ಉತ್ತೇಜನ ನೀಡುವ ಭರವಸೆ ನೀಡಿ ಕಾರ್ಯೋನ್ಮುಖರಾಗಿದ್ದರು. ಅಷ್ಟರಲ್ಲಿ ಸರ್ಕಾರ ಇಲ್ಲದ ಪ್ರಯುಕ್ತ ಹೆಚ್ಚು ಸೌಲಭ್ಯ ಪಡೆಯಲು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಮೊಳಕಾಲ್ಮೂರು ರೇಷ್ಮೆ ಸೀರೆ ವಿಶ್ವದ ಗಮನ ಸೆಳೆದಿದೆ. ಅದನ್ನು ಸಹ ಮಗ್ಗದಲ್ಲೇ ಹೆಣೆಯಲಾಗುತ್ತದೆ. ಅದೇ ರೀತಿ ಉಣ್ಣೆ ಕಂಬಳಿಯನ್ನು ಸಹ ಇಲ್ಲಿನ ಸಾವಿರಾರು ನೇಕಾರರು ಹೆಣೆದು ಮಾರುಕಟ್ಟೆಗೆ ತರುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಅದನ್ನು ಖರೀದಿಸುವವರ ಸಂಖ್ಯೆ ಅತ್ಯಂತ ಕಡಿಮೆ. ಹಾಗಾಗಿ ಕೈಮಗ್ಗ ನೇಕಾರರ ಬದುಕು ಕಷ್ಟದ ಸ್ಥಿತಿಯಲ್ಲಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹೆಚ್ಚಿನ ಆರ್ಥಿಕ ನೆರವು ನೀಡುವ ಮೂಲಕ ಲಕ್ಷಾಂತರ ಕೈಮಗ್ಗ ನೇಕಾರರಿಗೆ ಸಹಾಯಕ್ಕೆ ಬರಬೇಕು ಎಂದರು.

ಇದನ್ನೂ ಓದಿ:ಮಂಡಲ ಪಂಚಾಯತ್‌ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ್ದೇ ಕಾಂಗ್ರೆಸ್‌; ಕಾರಜೋಳ

ಪ್ರಾಸ್ತಾವಿಕವಾಗಿ ಮಾತನಾಡಿದ ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಉಪನಿರ್ದೇಶಕ ನೆಗಳೂರ್‌ ಮಾತನಾಡಿ, ರಾಜ್ಯ ಸರ್ಕಾರ ನೇಕಾರ ಕುಟುಂಬಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಕಳೆದ ವರ್ಷ ಉಣ್ಣೆ ಕೈಮಗ್ಗ ನೇಕಾರರ ಸಾಲವನ್ನು ಸರ್ಕಾರ ಮನ್ನಾ ಮಾಡಿತ್ತು. ನೇಕಾರಿಕೆಯಲ್ಲೂ ಸಹ ನೂತನ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವ ಹಿನ್ನೆಲೆಯಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಕೈಮಗ್ಗ ಮತ್ತು ಜವಳಿ ನಿಗಮದ ವತಿಯಿಂದ ನೇಕಾರರಿಗೆ ಇನ್ನೂ ಹಲವಾರು ಸವಲತ್ತು ಕಲ್ಪಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ಹಿರಿಯ ಸಹಕಾರಿ ಧುರೀಣ ಆರ್‌. ಮಲ್ಲೇಶಪ್ಪ ಮಾತನಾಡಿ, ಕೈಮಗ್ಗ ನೇಕಾರರ ಹಲವಾರು ಸಮಸ್ಯೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಉಣ್ಣೆ ಖರೀದಿಸಿ ಕಂಬಳಿ ತಯಾರಿಸಿ ಮಾರುಕಟ್ಟೆಗೆ ತಂದರೆ ಅದನ್ನು ಕೊಳ್ಳುವ ಸ್ಥಿತಿಯಲ್ಲಿ ಯಾರೂ ಇಲ್ಲ.

ನೇಕಾರರ ಸ್ಥಿತಿ ಅತ್ಯಂತ ಹೀನಾಯವಾಗಿದೆ. ರಾಜ್ಯ ಸರ್ಕಾರ ಕೈಮಗ್ಗ ನೇಕಾರಿಕೆ ಬಗ್ಗೆ ನಿರ್ಲಕ್ಷé ವಹಿಸಿದರೆ ಲಕ್ಷಾಂತರ ನೇಕಾರರ ಬಡಕುಟುಂಬಗಳು ಬೀದಿಪಾಲಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು. ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ರವೀಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆ ತಿಪ್ಪೇಸ್ವಾಮಿ, ಉಣ್ಣೆ ಕೈಮಗ್ಗ ನಿಗಮದ ಮಾಜಿ ಅಧ್ಯಕ್ಷ ಟಿ. ಮಲ್ಲಿಕಾರ್ಜುನ್‌, ಸಹಕಾರ್ಯದರ್ಶಿ ಗಂಗಾಧರ, ಕಂದಿಕೆರೆ ಸುರೇಶ್‌ಬಾಬು ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.