ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ
demand fulfillment
Team Udayavani, Jan 13, 2021, 8:54 PM IST
ಭದ್ರಾವತಿ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯವರು ಮಿನಿ ವಿಧಾನ ಸೌಧದ ಮುಂದೆ ಸೋಮವಾರ ಪ್ರತಿಭಟನಾ ಧರಣಿ ಸತ್ಯಾಗ್ರಹ ಆರಂಭಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ 5.50 ಕೋಟಿ ಹಣವನ್ನು ಮುಖ್ಯಮಂತ್ರಿಗಳು ಶೀಘ್ರವಾಗಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಂಡು ಭವನವನ್ನು ಮುಖ್ಯಮಂತ್ರಿ ಯಡಿಯುರಪ್ಪನವರೇ ಉದ್ಘಾಟಿಸಬೇಕು. ಹೊಳೆಹೊನ್ನೂರಿನ ಕಲ್ಲಾಪುರ ಗ್ರಾಮ, ರಂಗಾಪುರ ಗ್ರಾಮಗಳಲ್ಲಿ ನವೆಂಬರ್ 1ರಲ್ಲಿನ 74 ಎಕರೆ 14 ಗುಂಟೆ ಕಂದಾಯ ಜಮೀನನ್ನು ಸಾಗುವಳಿ ಮಾಡಿದ ಕಾರಣಕ್ಕೆ ಜೈಲಿಗೆ ಹೋದ 24 ಕುಟುಂಬಗಳಿಗೆ ಆ ಜಮೀನನ್ನು ರಾಜ್ಯ ಸರ್ಕಾರ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:
ಪ್ರತಿಭಟನೆಯಲ್ಲಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಕರ್ ,ಬ್ರಹ್ಮಲಿಂಗಯ್ಯ, ಸುಬ್ಬೇಗೌಡ ಹಾಗೂ ರೈತಸಂಘದ ಮುಖಂಡರಾದ ಯಶವಂತರಾವ್ ಘೋರ್ಪಡೆ,ವೀರೇಶ್, ಕರವೇ ಅಧ್ಯಕ್ಷ ಗಿರೀಶ್ ಲತಾ, ಗಂಗಾಧರ, ಲಕ್ಷಿ¾àಕಾಂತ, ಹನುಮಮ್ಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !