ಸಚಿವರಾಗಿ ಅಂಗಾರ ಇದು ಮೊದಲ ಬಾರಿ ಜಿಲ್ಲೆಗೆ


Team Udayavani, Jan 15, 2021, 2:12 AM IST

ಸಚಿವರಾಗಿ ಅಂಗಾರ ಇದು ಮೊದಲ ಬಾರಿ ಜಿಲ್ಲೆಗೆ

ಮಂಗಳೂರು: 27 ವರ್ಷಗಳಿಂದ ಶಾಸಕರಾಗಿ ಸುದೀರ್ಘ‌ ರಾಜಕೀಯ ಅನುಭವ ಪಡೆದಿರುವ ಸುಳ್ಳಿ ಅಂಗಾರ ಅವರು ಸಚಿವರಾಗುವದರೊಂದಿಗೆ ದ.ಕ. ಜಿಲ್ಲೆ ಹಾಗೂ ಸುಳ್ಯ ಕ್ಷೇತ್ರದಲ್ಲಿ ಎರಡು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ದಲಿತ ಸಮುದಾಯಕ್ಕೆ ಸಚಿವ ಸ್ಥಾನ ದೊರಕಿರುವುದು ಒಂದೆಡೆಯಾದರೆ, ಇನ್ನೊಂದಡೆ  ಸುಳ್ಯ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸಚಿವ ಸ್ಥಾನ ಲಭ್ಯವಾಗಿದೆ.

1952ರಿಂದ 2018ರ ವರೆಗಿನ ವಿಧಾನಸಭೆ ಚುನಾವಣೆಗಳ ಇತಿಹಾಸವನ್ನು ಅವಲೋಕಿಸಿದರೆ ಜಿಲ್ಲೆಯಲ್ಲಿ ಈವರೆಗೆ ದಲಿತ ಸಮುದಾಯಕ್ಕೆ ಸಚಿವ ಸ್ಥಾನದ ಅವಕಾಶ ಲಭಿಸಿರಲಿಲ್ಲ. ಇದೀಗ ಅಂಗಾರ ಅವರು ಸಚಿವರಾಗುವುದರೊಂದಿಗೆ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೂ ಪ್ರಥಮ ಬಾರಿಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಲಭಿಸಿದೆ.ಮೂಲತಃ ಸುಳ್ಯದ ರಾಜಕಾರಣಿಗಳು ಇತರ ಕ್ಷೇತ್ರಗಳಿಂದ ಸ್ಪರ್ಧಿಸಿ ಮುಖ್ಯಮಂತ್ರಿ, ಸಚಿವರು, ಸಂಸದರು ಆಗಿದ್ದಾರೆ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಅದೇ ರೀತಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕೂಡ ಸುಳ್ಯದವರು. ಆದರೆ, ವಿಧಾನಸಭೆ ಚುನಾವಣೆಯಲ್ಲಿ 1962ರಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ರಚನೆಯಾದಂದಿನಿಂದ ಈವರೆಗೆ ಆ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಇದೀಗ, ಅಂಗಾರ ಸಚಿವ ಸ್ಥಾನ ಪಡೆದ ದಾಖಲೆಯನ್ನು ಬರೆದಿದ್ದಾರೆ.

ಕಡೆಗೂ ಜಿಲ್ಲೆಗೆ ದೊರತ ಸಚಿವ ಸ್ಥಾನ :

ಬಿಜೆಪಿ ಮಾತ್ರವಲ್ಲದೆ ದ.ಕ. ಜಿಲ್ಲೆಯ ಪ್ರಸ್ತುತ ಶಾಸಕ ರನ್ನು ಪರಿಗಣಿಸಿದರೆ ಅತ್ಯಂತ ಹಿರಿಯ ಶಾಸಕರಾಗಿ ರುವ ಎಸ್‌.ಅಂಗಾರ  ಅವರು ವಿವಾದಾತೀತ ರಾಜಕಾರಣಿ

ಯಾಗಿ ಗುರುತಿಸಿಕೊಂಡವರು. 2013ರ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 8 ಶಾಸಕ ಸ್ಥಾನಗಳ ಪೈಕಿ  7 ಸ್ಥಾನಗಳು  ಕಾಂಗ್ರೆಸ್‌ ಪಾಲಾಗಿದ್ದ ಸಂದರ್ಭದಲ್ಲಿ ಬಿಜೆಪಿಗೆ  ದೊರತ ಏಕೈಕ ಸಾœನ ಸುಳ್ಯ ಕ್ಷೇತ್ರವಾಗಿತ್ತು.

ಉಸ್ತುವಾರಿ ಸಚಿವ ಸ್ಥಾನದ ಲೆಕ್ಕಾಚಾರ :

ಸಚಿವ ಅಂಗಾರ ಅವರಿಗೆ ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡುವ ಬಗ್ಗೆಯೂ ರಾಜಕೀಯ ಲೆಕ್ಕಚಾರ ನಡೆಯುತ್ತಿದೆ. ಶ್ರೀನಿವಾಸ ಪೂಜಾರಿಯವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಹೊಣೆಗಾರಿಕೆಯನ್ನು ನೀಡಿ, ದ.ಕ. ಜಿಲ್ಲೆಯ ಹೊಣೆಗಾರಿಕೆಯನ್ನು ಅಂಗಾರ ಅವರಿಗೆ ವಹಿಸಿ ಕೊಡುವ ಸಾಧ್ಯತೆಗಳಿವೆ.

 

ಸಚಿವ ಅಂಗಾರ ಕಾರ್ಯಕ್ರಮ ಪಟ್ಟಿ  :

ಜ. 15ರಂದು

ಬೆ. 11.30: ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ

12.00 : ಕದ್ರಿ  ದೇವರ ದರ್ಶನ

12.15 : ಸಂಘನಿಕೇತನಕ್ಕೆ ಭೇಟಿ

12.30 : ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ

2.30 : ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರ

3.00 : ಪುತ್ತೂರು ಮಹಾಲಿಂಗೇಶ್ವರ ದೇವರ ದರ್ಶನ

4.00 : ಜಾಲೂÕರಿನಲ್ಲಿ ಸ್ವಾಗತ ವಾಹನ ಜಾಥಾ

4.30 : ಸುಳ್ಯ ಶ್ರೀ ಚೆನ್ನಕೇಶವ

ದೇವರ ದರ್ಶನ

5.00 : ಸುಳ್ಯ ಬಿಜೆಪಿ ಕಚೇರಿಗೆ ಭೇಟಿ

ಜ. 16 ರಂದು

ಬೆ. 7: ಕುಕ್ಕೆ ಸುಬ್ರಹ್ಮಣ್ಯ ದರ್ಶನ

9.15: ಧರ್ಮಸ್ಥಳ  ಕ್ಷೇತ್ರ

11.15: ಮಂಗಳೂರಿಗೆ ಆಗಮನ

1.15 : ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮನ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.