ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು


Team Udayavani, Jan 15, 2021, 10:08 AM IST

ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು

ಆಸ್ಕರ್‌ ಕೃಷ್ಣ, ಲೋಕೇಂದ್ರ ಸೂರ್ಯ, ಸೆವೆನ್‌ ರಾಜ್‌, ಗೌರಿ ನಾಯರ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡಿಸ್ಬುಟ್ಟ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ಮಾಡಿರುವ ಚಿತ್ರತಂಡ, “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡಿಸ್ಬುಟ್ಟ’ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

“ಚಡ್ಡಿದೋಸ್ತ್ ಕಡ್ಡಿ ಅಲ್ಲಾಡಿಸ್ಬುಟ್ಟ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಟಿ ಪ್ರೇಮಾ, ನಿರ್ಮಾಪಕ ಎಸ್.ಎ ಚಿನ್ನೇಗೌಡ, ಭಾ.ಮಾ ಹರೀಶ್‌, ಭಾ.ಮಾ ಗಿರೀಶ್‌, ನಟ ರವಿಚೇತನ್‌, ನಿರ್ಮಾಪಕ ಶಿಲ್ಪಾ ಶ್ರೀನಿವಾಸ್‌, ಉಮೇಶ್‌ ಬಣಕಾರ್‌ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದು, ಹಾಡುಗಳನ್ನು ಹೊರತಂದರು

“ರೆಡ್‌ ಅಂಡ್‌ ವೈಟ್‌’ ಖ್ಯಾತಿಯ ಸೆವೆನ್‌ ರಾಜ್‌ ನಿರ್ಮಾಣದಲ್ಲಿ ಮೂಡಿಬಂದಿರುವ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡಿಸ್ಬುಟ್ಟ’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಚಿತ್ರಕಥೆ, ಸಂಭಾಷಣೆ ಇದೆ. ಚಿತ್ರಕ್ಕೆ ಆಸ್ಕರ್‌ ಕೃಷ್ಣ ನಿರ್ದೇಶನವಿದೆ. ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಆಸ್ಕರ್‌ ಕೃಷ್ಣ, “ಇದು ನನ್ನ ನಿರ್ದೇಶನದ ಐದನೇ ಸಿನಿಮಾ. ಇದೇ ಮೊದಲ ಬಾರಿಗೆ ನಿರ್ದೇಶನದ ಜೊತೆಗೆ ಚಿತ್ರದ ಮುಖ್ಯ ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ.

ಇದೊಂದು ಕ್ರೈಂ-ಥ್ರಿಲ್ಲರ್‌ ಕಥಾಹಂದರವಿರುವ ಸಿನಿಮಾ. ಲೋಕೇಂದ್ರ ಸೂರ್ಯ ಸಿನಿಮಾಕ್ಕೆ ಈ ಟೈಟಲ್‌ ಕೊಟ್ಟರು. ಸಿನಿಮಾದ ಸಬೆjಕ್ಟ್, ಕಂಟೆಂಟ್‌ ಎರಡಕ್ಕೂ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಇದನ್ನೇ ಟೈಟಲ್‌ ಆಗಿ ಇಟ್ಟುಕೊಂಡಿದ್ದೇವೆ.

ಇದನ್ನೂ ಓದಿ:ನಿಖೀಲ್‌ ಬರ್ತ್‌ಡೇಗೆ ಬರಲಿದೆ ‘ರೈಡರ್‌’ ಟೀಸರ್

ಇಬ್ಬರು ಸ್ನೇಹಿತರ ಸ್ನೇಹ-ಸಂಬಂಧ, ಅದರ ನಡುವೆ ನಡೆಯುವ ಹುಡುಗಾಟ, ತುಂಟಾಟ ಎಲ್ಲವೂ ಇದರಲ್ಲಿದೆ. ಇಲ್ಲಿ ಪೋಲಿಸ್‌, ರಾಜಕೀಯ, ವ್ಯವಸ್ಥೆ ಎಲ್ಲವೂ ಇದೆ. ಎಷ್ಟೋ ಸಲ ನಾವು ಕ್ರೈಂ ಮಾಡಿದ್ದರೂ ಅದರಿಂದ ಏನೂ ಆಗುವುದಿಲ್ಲ, ಕೆಲವೊಮ್ಮೆ ನಾವು ಏನೂ ಮಾಡದಿದ್ದರೂ ಅದು ನಮ್ಮನ್ನು ಸುತ್ತಿಕೊಂಡಿರುತ್ತೆ. ಅದೇ ಥರದಲ್ಲೇ ಈ ಸಿನಿಮಾದ ಕಥೆ ಸಾಗುತ್ತದೆ. ಸದ್ಯ ಸಿನಿಮಾದ ಬಹುತೇಕ ಕೆಲಸ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ರಿಲೀಸ್‌ ಆಗಲಿದೆ’ ಎಂದು ಮಾಹಿತಿ ನೀಡಿದರು.

ಚಿತ್ರದ ಬಗ್ಗೆ ಮಾತನಾಡಿದ ಮತ್ತೂಬ್ಬ ನಾಯಕ ನಟ ಲೋಕೇಂದ್ರ ಸೂರ್ಯ, “ಕನ್ನಡದ ಮಟ್ಟಿಗೆ ಇದೊಂದು ಹೊಸಥರದ ಸಿನಿಮಾವಾಗಲಿದೆ. ಸಿನಿಮಾದಲ್ಲಿ ಸಾಕಷ್ಟು ಕುತೂಹಲ, ತಿರುವುಗಳು ಇರುವುದರಿಂದ ಕಥೆಯ ಬಗ್ಗೆ ಹೆಚ್ಚೇನು ಹೇಳುವಂತಿಲ್ಲ. ಈ ಸಿನಿಮಾದಲ್ಲಿ ನಾನು ಗಡಾರಿ ಎನ್ನುವ ಪಾತ್ರದಲ್ಲಿ ಮತ್ತು ಆಸ್ಕರ್‌ ಕೃಷ್ಣ ಫ್ಯಾಷನ್‌ ರಾಜ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇವೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಟಿ ಗೌರಿ ನಾಯರ್‌, ನಿರ್ಮಾಪಕ ಕಂ ಖಳನಟ ಸೆವೆನ್‌ ರಾಜ್‌, ಸಂಗೀತ ನಿರ್ದೇಶಕ ಅನಂತ್‌ ಆರ್ಯನ್‌ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡಿಸ್ಬುಟ್ಟ’ ಚಿತ್ರದ ಬಗ್ಗೆ ತಮ್ಮ ಅನುಭವ, ಅಭಿಪ್ರಾಯಗಳನ್ನು ಹಂಚಿಕೊಂಡರು.

ಚಿತ್ರದ ಚಿತ್ರೀಕರಣವನ್ನು ಕುಣಿಗಲ್, ತುಮಕೂರು, ಬೆಂಗಳೂರು ಸುತ್ತಮುತ್ತ ನಡೆಸಲಾಗಿದೆ. ಚಿತ್ರದಲ್ಲಿ 2 ಹಾಡುಗಳಿವೆ. ಚಿತ್ರಕ್ಕೆ ಗಗನ್‌ ಕುಮಾರ್‌ ಛಾಯಾಗ್ರಹಣವಿದೆ. ಅಕುಲ್‌ ನೃತ್ಯ ಹಾಗೂ ವೈಲೆಂಟು ವೇಲು ಸಾಹಸ ಸಂಯೋಜಿಸಿದ್ದಾರೆ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.