ಬೀದರ್ ನಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ: ಭಯ ಪಡುವ ಅಗತ್ಯವಿಲ್ಲ ಎಂದ ಮೊದಲ ಫಲಾನುಭವಿ
Team Udayavani, Jan 16, 2021, 3:52 PM IST
ಬೀದರ್: ವಿಶ್ವಕ್ಕೆ ಕಾಡುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಕೋವಿಡ್ -19 ವ್ಯಾಕ್ಸಿನ್ ಕೊಡುವ ಅಭಿಯಾನಕ್ಕೆ ಶನಿವಾರ ಬ್ರೀಮ್ಸ್ ಆವರಣದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಲಸಿಕೆ ನೀಡುವಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಚಾಲನೆ ನೀಡಿದರು. ಬ್ರಿಮ್ಸ್ ಡಿ ದರ್ಜೆ ನೌಕರರಾದ ಇಂದುಮತಿ ಅವರು ಮೊದಲ ಫಲಾನುಭವಿಯಾಗಿ ವ್ಯಾಕ್ಸಿನ್ ಪಡೆದುಕೊಂಡರು.
ಲಸಿಕೆ ಪಡೆದ ಇಂದುಮತಿ ಅವರನ್ನು 30 ರಿಂದ 40 ನಿಮಿಷಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು. ಲಸಿಕೆ ಪಡೆಯುವ ಮುನ್ನ ಫಲಾನುಭವಿಗಳಿಗೆ ಮತ್ತು ಲಸಿಕೆ ಕೊಡುವ ತಜ್ಞರಿಗೆ ಸ್ಥಳದಲ್ಲಿದ್ದ ಡಿಸಿ ರಾಮಚಂದ್ರನ್ ಅವರು ಧ್ಯೇರ್ಯ ತುಂಬಿದರು.
ಇದನ್ನೂ ಓದಿ: ಮಂಡ್ಯ: ಡಿ ಗ್ರೂಪ್ ನೌಕರನಿಗೆ ಮೊದಲ ಲಸಿಕೆ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ವಿ ವೆoಕಟೇಶ್
ಕೋವಿಡ್-19 ಲಸಿಕೆ ನೀಡುವುದರಿಂದ ಯಾವುದೇ ಅಡ್ಡ ಪರಿಣಾಮ ಸಂಭವಿಸಿದಲ್ಲಿ, ಇದರ ನಿರ್ವಹಣೆಗಾಗಿ ಪ್ರತಿ ಲಸಿಕಾ ವಿತರಣಾ ಕೇಂದ್ರದಲ್ಲಿ ತಜ್ಞವೈದ್ಯರನ್ನೊಳಗೊಂಡ (AEFI) ನಿರ್ವಹಣಾ ಘಟಕಗಳನ್ನು ರಚಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 72 ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, ಮೊದಲನೇ ಹಂತದಲ್ಲಿ 6 ಕೇಂದ್ರಗಳಲ್ಲಿ ಪ್ರತಿ ಕೇಂದ್ರದಲ್ಲಿ ತಲಾ 100 ಜನ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದ್ದು. ಮೊದಲ ಹಂತದಲ್ಲಿ ಒಟ್ಟು 600 ಮಂದಿಗೆ ಶನಿವಾರ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ. ರೆಡ್ಡಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಇದುವರೆಗೆ 10240 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದು, ಮೊದಲು ಆರೋಗ್ಯ ಕಾರ್ಯಕರ್ತರಿಗೆ, ನಂತರ ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ನಂತರ ಸರ್ಕಾರದ ಸೂಚನೆ ನೀಡಿದ ಬಳಿಕ ಜಿಲ್ಲೆಯ ಉಳಿದ ಇತರರಿಗೆ ಲಸಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ
ಬ್ರಿಮ್ಸ್ ಸೇರಿದಂತೆ ಔರಾದ್, ಹುಮನಬಾದ್, ಭಾಲ್ಕಿ, ಬಸವಕಲ್ಯಾಣ, ಆಣದೂರ ಆಸ್ಪತ್ರೆಗಳಲ್ಲಿ ಕೂಡ ಲಸಿಕಾ ನೀಡುವ ಕಾರ್ಯ ನಡೆಯುತ್ತಿದೆ. ಲಸಿಕೆ ವಿತರಣೆಯ ನಿರ್ವಹಣೆಗಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಕಂಟ್ರೋಲ್ ರೂಮ್ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ.
ಕೋವಿಡ್ ಪ್ರಕರಣಗಳು ಪತ್ತೆಯಾದಾಗಿನಿಂದ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇನೆ. ಕೊರೊನಾ ಲಸಿಕೆ ಪಡೆಯುವ ಮುನ್ನ ಸ್ವಲ್ಪ ಹೆದರಿಕೆ ಆಗಿತ್ತು. ಆದರೆ, ಮೊದಲು ಫಲಾನುಭವಿಯಾಗಿ ಪಡೆದ ನಂತರ ಯಾವುದೇ ಆತಂಕ ಇಲ್ಲ. ಜ್ವರ, ತಲೆ ನೋವು ಇಂಥ ಯಾವುದೇ ಅಡ್ಡ ಪರಿಣಾಮವೂ ನನಗೆ ಆಗಿಲ್ಲ. ಹಾಗಾಗಿ ಜನ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಲಸಿಕೆ ಪಡೆಯಬೇಕು.
– ಇಂದುಮತಿ
ಲಸಿಕೆ ಪಡೆದ ಮೊದಲ ಡಿ ಗ್ರೂಪ್ ನೌಕರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ