ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ: ಶಿಲ್ಪಾ
ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ: ಶಿಲ್ಪಾ
Team Udayavani, Jan 16, 2021, 6:45 PM IST
ಯಾದಗಿರಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುರುಷರಷ್ಟೇ ಮಹಿಳೆಯರಿಗೆ ಕೂಲಿ ದೊರೆಯುತ್ತದೆ. ಹಾಗಾಗಿ ಮಹಿಳೆಯರೂ ಕೆಲಸ ಮಾಡಿ ಆರ್ಥಿಕವಾಗಿ ಸಬಲರಾಗಲು ಜಿಪಂ ಸಿಇಒ ಶಿಲ್ಪಾ ಶರ್ಮಾ ಹೇಳಿದರು. ಬಳಿಚಕ್ರ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಕಾಯಕೋತ್ಸವಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಜಿಲ್ಲೆಯಲ್ಲಿ ಮಹಿಳೆ ಪಾಲ್ಗೊಳ್ಳುವಿಕೆ ಶೇ.49ರಷ್ಟಿದ್ದು ಪ್ರಮಾಣವನ್ನು ಕನಿಷ್ಟ 60ಕ್ಕೆ ಏರಿಸುವ ಗುರಿಯಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಕಾಯಕೋತ್ಸವ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಯೋಜನೆಯಡಿ ಕೂಲಿ ಹಣ ನೇರವಾಗಿ ಫಲಾನುಭವಿ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ. ಹಳ್ಳಿಗಳಲ್ಲಿ ದಿನಕ್ಕೆ 275 ರೂ. ಕೂಲಿ ಸಿಗುವುದು ಕಷ್ಟ. ಮಹಿಳಾ ಸಬಲೀಕರಣಕ್ಕಾಗಿ ಅನುಷ್ಠಾನ ಗೊಳಿಸುತ್ತಿರುವ ಕಾರ್ಯಕ್ರಮದ ಉಪಯೋಗ ಜಿಲ್ಲೆಯ ಎಲ್ಲ ಗ್ರಾಮೀಣ ಮಹಿಳೆಯರು ಪಡೆಯಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ಮತ್ತು ನರೇಗಾ ನೋಡಲ್ ಅ ಧಿಕಾರಿ ಮುಕ್ಕಣ್ಣ ಕರಿಗಾರ ಪ್ರಾಸ್ತಾವಿಕ ಮಾತನಾಡಿ, ಮಹಿಳಾ ಕಾಯಕೋತ್ಸವದ ಉದ್ದೇಶ ವಿವರಿಸಿದರು. ಜಿಲ್ಲೆಯ 122 ಗ್ರಾಪಂಗಳಲ್ಲಿ 60ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬರುತ್ತಿರುವ ಮಹಿಳೆಯರ
ಪ್ರಮಾಣ ಶೇ.50ಕ್ಕಿಂತ ಕಡಿಮೆ ಇದೆ. ಮಹಿಳಾ ಕೂಲಿಕಾರರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲಾಗುತ್ತದೆ
ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ಕಾಯಕೋತ್ಸವದ ಲೋಗೋ ಮತ್ತು ಸಮೀಕ್ಷಾ ನಮೂನೆ ಬಿಡುಗಡೆ ಮಾಡಿ, ಉದ್ಯೋಗ ಚೀಟಿ ವಿತರಿಸಿದರು. ಈ ವೇಳೆ ಯಾದಗಿರಿ ತಾಪಂ ಇಒ ಬಸವರಾಜ, ಗುರುಮಠಕಲ್ ತಾಪಂ ಇಒ ಬಸವರಾಜ ಎಚ್. ಸೇರಿದಂತೆ ಹಲವು ಅಧಿ ಧಿಕಾರಿಗಳು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?