ಗಮನ ಸೆಳೆಯುತ್ತಿರುವ ಗ್ರಾಮೀಣ ಕರಕುಶಲ ಮೇಳ


Team Udayavani, Jan 16, 2021, 9:16 PM IST

ಗಮನ ಸೆಳೆಯುತ್ತಿರುವ ಗ್ರಾಮೀಣ ಕರಕುಶಲ ಮೇಳ

ಉಡುಪಿ:  ಶ್ರೀಕೃಷ್ಣಮಠದ ದೈವಾರ್ಷಿಕ ಪರ್ಯಾಯ ಪೂಜಾ ಪದ್ಧತಿಗೆ 500ನೇ ವರ್ಷಕ್ಕೆ ಕಾಲಿಡುವ ಸಂದರ್ಭ ಆಯೋಜಿಸಲಾದ ಗ್ರಾಮೀಣ ಉತ್ಪನ್ನಗಳ ಮೇಳ ಜ. 16ರಂದು ಆರಂಭಗೊಂಡಿದ್ದು 23ರ ವರೆಗೆ ನಡೆಯಲಿದೆ.

ರಾಜಾಂಗಣ ಸಭಾಭವನದಲ್ಲಿ ಪಶ್ಚಿಮ ಬಂಗಾಲ, ಒಡಿಶಾ, ತೆಲಂಗಾಣ, ಛತ್ತೀಸ್‌ಗಢ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರದ ವಿವಿಧ ಕಲಾಪ್ರಕಾರಗಳು, ಮಧುಬನಿ, ಮಿಥಿಲಾ ಚಿತ್ರ, ಮಂಜುಷಾ ಚಿತ್ರ, ಗೋದ್ನ ಚಿತ್ರ, ಕಾಲಿಘಟ್‌ ಪೈಂಟಿಂಗ್‌, ಪಟಚಿತ್ರ, ಲೋಹಶಿಲ್ಪ, ಎರಕಶಿಲ್ಪ, ಗೋಂದು ಕಲಾಕೃತಿ, ಮಣ್ಣಿನ, ಹುಲ್ಲಿನ ಕಲಾಕೃತಿಗಳು, ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ, ಬಿಜಾಪುರ, ಧಾರವಾಡ, ಶಿರಸಿ, ಕುಂದಾಪುರ, ಬೆಂಗಳೂರು, ಉಡುಪಿ ಭಾಗದ ಗ್ರಾಮೀಣ ಉತ್ಪನ್ನಗಳಾದ ಸೀರೆ, ಹುಲ್ಲಿನ, ಮರದ ಕಲಾಕೃತಿಗಳು, ಸಾವಯವ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ವಿವಿಧ ಕಲಾ ಪ್ರಕಾರಗಳಾದ ಮಣ್ಣಿನ ಕಲಾಕೃತಿ ರಚನೆ, ಬುಟ್ಟಿ ರಚನೆ, ಸಹಜ ಬಣ್ಣದಲ್ಲಿ ಚಿತ್ರ ರಚನೆ ಮುಂತಾದ ಕಲಾ ಪ್ರಾತ್ಯಕ್ಷಿಕೆ ನಡೆಯುತ್ತಿವೆ.

ಲಂಬಾಣಿ ಕಸೂತಿ, ಹಿಡಿಕಡ್ಡಿ ಉತ್ಪನ್ನ :

ಇಳಕಲ್‌ ಸೀರೆ, ಪಟ್ಟದ ಸೀರೆಗಳಿಗೆ ಲಂಬಾಣಿ ಕಸೂತಿಯನ್ನು (ಎಂಬ್ರಾಯxರಿ) ಬಳ್ಳಾರಿ ಹೂವಿನಹಡಗಲಿಯ ರವಿಕಿರಣ್‌ ಪ್ರದರ್ಶಿಸುತ್ತಿದ್ದಾರೆ. ಗದಗ ಜಿಲ್ಲೆಯಿಂದ ಬಂದ ವಿವಿಧ ಬಗೆಯ ಲೆದರ್‌ ಬ್ಯಾಗ್‌, ಚಾ ಇಡುವ ಮ್ಯಾಟ್‌, ಬಟ್ಟೆಯ ಬುಟ್ಟಿಗಳು, ತೆಂಗಿನ ಗರಿಯಿಂದ (ಹಿಡಿಕಡ್ಡಿ) ತಯಾರಿಸಿದ ಬಾಸ್ಕೆಟ್‌, ಟ್ರೇ, ಜೊಂಡುಹುಲ್ಲಿನಿಂದ ತಯಾರಿಸಿದ ಬುಟ್ಟಿ, ಗುಳೇದಗುಡ್ಡ, ಇಳಕಲ್‌, ಉಡುಪಿ ಸೀರೆಗಳ ಮಳಿಗೆಗಳು ನೋಡುಗರ ಮನ ತಣಿಸುತ್ತಿವೆ. ಮಹಾರಾಷ್ಟ್ರದ ಕಸೂತಿ ಕೆಲಸಗಳು (ಬೆಡ್‌, ಸೋಫಾ ಕವರ್‌, ಮ್ಯಾಟ್‌ ಇತ್ಯಾದಿ), ಬೆಳಗಾವಿಯ ಅಗಸ್ತ್ಯ ಪ್ರತಿಷ್ಠಾನದವರ ಕಾಟನ್‌ ತ್ರೆಡ್‌, ಸೆಣಬಿನಿಂದ ತಯಾರಿಸಿದ ಅಲಂಕಾರಿಕ ಸಾಮಗ್ರಿಗಳು, ಟೇಬಲ್‌ ಮ್ಯಾಟ್‌, ಕುಂದಾಪುರ ಆಲೂರಿನ ರಘುರಾಮ ಕುಲಾಲರ ಮಣ್ಣಿನ ತರಹೇವಾರಿ ಸಾಮಗ್ರಿಗಳು ಪ್ರದರ್ಶನದಲ್ಲಿವೆ.

ಬೆಳಗಾವಿಯ ಸಿದ್ದವ್ವ ಜೊಂಡುಹುಲ್ಲಿನ ವಿವಿಧ ಆಕಾರದ ಬುಟ್ಟಿಗಳನ್ನು ಇರಿಸಿಕೊಂಡಿದ್ದಾರೆ. ಛತ್ತೀಸ್‌ಗಢದ ಕಬ್ಬಿಣದ ವಿವಿಧ ಅಲಂಕೃತ ಆಟಿಕೆಗಳು ಇವೆ. ಇವರು ವೆಲ್ಡಿಂಗ್‌ ಇಲ್ಲದೆ ಸಾಂಪ್ರದಾಯಿಕ ರೀತಿಯಲ್ಲಿ ಕಬ್ಬಿಣವನ್ನು ಕಾಯಿಸಿ ಆಟಿಕೆಗಳನ್ನು ತಯಾರಿಸುವುದು ವೈಶಿಷ್ಟ್ಯ. ಕೊಳಲು (ಬಾನ್ಸುರಿ), ಖಡ್ಗ, ಕೊಡಲಿ, ಬಿಲ್ಲುಬಾಣಗಳನ್ನು ಬಿದಿರಿನಿಂದ ತಯಾರಿಸುವವರು ಮಧ್ಯಪ್ರದೇಶದ ಕಲಾವಿದರು.

ಬಂಗಾಳದ ಚಿತ್ರಕಾರ, ಆಶುಕವಿ :

ಪಶ್ಚಿಮ ಬಂಗಾಲದ ಪ್ರವೀರ್‌ ಚಿತ್ರಕಾರ್‌ ಅವರು ಚಿತ್ರಕಲೆಗಳು ಆಕರ್ಷಕ. ಇವರು ಚಿತ್ರಗಳಿಗೆ ತಕ್ಕುದಾದ ಹಾಡುಗಳನ್ನು ಹಾಡುತ್ತಾರೆ. ಇದು ಕವಿ ರವೀಂದ್ರನಾಥ ಠಾಕೂರ್‌ ಅವರ ಪರಿಶ್ರಮದಿಂದ ಪಶ್ಚಿಮಬಂಗಾಲದಲ್ಲಿ ಉತ್ತೇಜನಗೊಂಡ ಕಲೆಯಾಗಿದೆ. ಪ್ರವೀರ್‌ ಅಂತಹವರು ಆಶುಕವಿಗಳು. ಇವರು ಕೋವಿಡ್ ಕುರಿತೂ ಹಾಡು ರಚಿಸಿ ಚಿತ್ರಕಲೆಯನ್ನು ನಿರ್ಮಿಸಿ ಪ್ರದರ್ಶಿಸುತ್ತಿದ್ದಾರೆ.

ಗ್ರಾಮೀಣ ಶ್ರಮಿಕ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಷ್ಟ್ರಮಟ್ಟದ ಗ್ರಾಮೀಣ ಉತ್ಪನ್ನಗಳ ಮೇಳ, ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ ಎಂದು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮತ್ತು ಸಂಘಟಕ ಪುರುಷೋತ್ತಮ ಅಡ್ವೆ ತಿಳಿಸಿದ್ದಾರೆ.

ಪುರಾತನ ಉಪಕರಣಗಳು :

ಹಿಂದಿನ ಕಾಲದ ಮನೆಗಳಲ್ಲಿ ಬಳಸುವ ಕೊಡಪಾನ, ಬ್ಯಾಟ್‌, ಗುಂಡುಕಲ್ಲು, ಲೋಟಗಳು, ಚೆನ್ನೆಮಣೆ, ಡೋಲು, ಶ್ಯಾವಿಗೆ ಮಾಡುವ ಮರದ ಯಂತ್ರ ಮೊದಲಾದ ತುಳುನಾಡ ಪಾರಂಪರಿಕ ಪರಿಕರಗಳ ಪ್ರದರ್ಶನಗಳೂ ಇಲ್ಲಿವೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.