ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು


Team Udayavani, Jan 17, 2021, 10:34 AM IST

ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್, ಮೈಸೂರು ಟರ್ಫ್ ಕ್ಲಬ್‌ ಸೇರಿದಂತೆ ಸರ್ಕಾರಿ ಭೂಮಿಯನ್ನು ರಿಯಾಯಿತಿ ದರದಲ್ಲಿ ಗುತ್ತಿಗೆ ಪಡೆದಿರುವ ಕ್ಲಬ್‌ ಮತ್ತು ಸಂಸ್ಥೆಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡುತ್ತವೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಕ್ಲಬ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರರು ಕೋರಿರುವ ಮಾಹಿತಿ ನೀಡಲು ಆದೇಶಿಸಿದ್ದ ರಾಜ್ಯ ಮಾಹಿತಿ ಆಯೋಗದ ಕ್ರಮ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್, ಮೈಸೂರು ಟರ್ಫ್ ಕ್ಲಬ್, ಲೇಡಿಸ್‌ ಕ್ಲಬ್‌ ಮತ್ತು ಇನ್ಸ್ಟಿಟ್ಯೂಟ್‌ ಆಫ್ ಎಂಜಿನಿಯರ್‌ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಪಿ.ಬಿ ಭಜಂತ್ರಿ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಸರ್ಕಾರ ಈ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಭೂಮಿ ಗುತ್ತಿಗೆ ನೀಡಿದೆ. ಸರ್ಕಾರಿ ಭೂಮಿ ಸಾರ್ವಜನಿಕರ ಭೂಮಿ ಇದ್ದಂತೆ.
ಇಂತಹ ಭೂಮಿಯನ್ನು ಸರ್ಕಾರ ಮಾರುಕಟ್ಟೆ ಮೌಲ್ಯಕ್ಕಿಂತ ಸಾಕಷ್ಟು ಕಡಿಮೆ ಬಾಡಿಗೆಗೆ ಗುತ್ತಿಗೆ ನೀಡಿದೆ. ಈ ಮೂಲಕ
ಪರೋಕ್ಷವಾಗಿ ರಿಯಾಯಿತಿ ನೀಡಿದ್ದು, ಭೂಮಿ ಗುತ್ತಿಗೆ ಪಡೆದವರು ಜನರಿಗೆ ಉತ್ತರದಾಯಿ ಯಾಗುತ್ತಾರೆ. ಹೀಗಾಗಿ ಈ ಸಂಸ್ಥೆಗಳನ್ನು ಸಾರ್ವಜನಿಕ ಪ್ರಾಧಿಕಾರಗಳಂತೆ ಪರಿಗಣಿಸಬಹುದಾಗಿದೆ. ಅದರಂತೆ ಸಾರ್ವಜನಿಕರು ಆರ್‌ಟಿಐ ಕಾಯ್ದೆಯಡಿ ಮಾಹಿತಿ ಪಡೆಯಬಹುದು ಎಂದು ಆದೇಶಿಸಿದೆ. ಈ ಮೂಲಕ ಮಾಹಿತಿ ನೀಡುವಂತೆ ಆದೇಶಿಸಿದ್ದ ಮಾಹಿತಿ ಆಯೋಗದ ಆದೇಶವನ್ನು ಎತ್ತಿ ಹಿಡಿದಿದೆ.

ಇದನ್ನೂ ಓದಿ:ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್

ನಗರದ ವಕೀಲ ಉಮಾಪತಿ ಹಾಗೂ ಡಾ. ಕುದೂರು ವೆಂಕಟೇಶ್‌ ಎಂಬುವರು ಬೆಂಗಳೂರು ಟರ್ಫ್ ಕ್ಲಬ್, ಮೈಸೂರು
ಟರ್ಫ್ ಕ್ಲಬ್, ಲೇಡಿಸ್‌ ಕ್ಲಬ್‌ ಹಾಗೂ ಇನ್ಸ್ಟಿಟ್ಯೂಟ್‌ ಆಪ್‌ ಎಂಜಿನೀಯರ್‌ ಸಂಸ್ಥೆಗಳಿಂದ ಕೆಲ ಮಾಹಿತಿ ಕೋರಿ 2012ರಲ್ಲಿ
ಅರ್ಜಿ ಸಲ್ಲಿಸಿದ್ದರು. ಆದರೆ, ಸಂಸ್ಥೆಗಳು ಯಾವುದೇ ಮಾಹಿತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ರಾಜ್ಯ ಮಾಹಿತಿ
ಆಯೋಗಕ್ಕೆ 2013ರಲ್ಲಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ರಾಜ್ಯ ಮಾಹಿತಿ ಆಯೋಗ 2013ರ ಜುಲೈ 1ರಂದು
ಮಾಹಿತಿ ನೀಡುವಂತೆ ಸಂಸ್ಥೆಗಳಿಗೆ ಆದೇಶಿಸಿತ್ತು. ಮಾಹಿತಿ ಆಯೋಗದ ಈ ಆದೇಶ ಪ್ರಶ್ನಿಸಿ ಅರ್ಜಿದಾರ ಸಂಸ್ಥೆಗಳು ನಾವು ಸಾರ್ವಜನಿಕ ಪ್ರಾಧಿಕಾರಗಳಲ್ಲ. ಹೀಗಾಗಿ ಮಾಹಿತಿ ಹಕ್ಕು ಕಾಯ್ದೆ-2005ರ ಸೆಕ್ಷನ್‌ 2(ಎಚ್‌) ಅಡಿ ಮಾಹಿತಿ ನೀಡುವ ಭಾದ್ಯತೆ ಹೊಂದಿಲ್ಲ ಎಂದು ವಾದಿಸಿದ್ದವು. ವಾದ ಅಲ್ಲಗಳೆದಿರುವ ನ್ಯಾಯಪೀಠ, ಸಾರ್ವಜನಿಕ ಭೂಮಿಯನ್ನು ರಿಯಾಯಿತಿ ದರದಲ್ಲಿ ಪಡೆದಿರುವ ಸಂಸ್ಥೆಗಳು ಜನರಿಗೆ ಉತ್ತರದಾಯಿಗಳಾಗಿದ್ದು, ಮಾಹಿತಿ ನೀಡುವ ಉತ್ತರದಾಯಿತ್ವವನ್ನು ಹೊಂದಿವೆ. ಆದ್ದರಿಂದ ಅರ್ಜಿದಾರರು ಕೋರಿದ ಮಾಹಿತಿ ನೀಡ ಬೇಕು ಎಂದು ಆದೇಶಿಸಿ, ಅರ್ಜಿ ವಜಾ ಮಾಡಿ ಆದೇಶಿಸಿದೆ.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.