ಕೊರೊನಾ, ಹಳದಿ ನೊಣಕ್ಕೆ ನಲುಗಿದ ಅಲ್ಫೋನ್ಸೋ: ಧೈರ್ಯ ಕಳೆದುಕೊಂಡ ದಲ್ಲಾಳಿಗಳು


Team Udayavani, Jan 17, 2021, 1:55 PM IST

ಕೊರೊನಾ, ಹಳದಿ ನೊಣಕ್ಕೆ ನಲುಗಿದ ಅಲ್ಫೋನ್ಸೋ: ಧೈರ್ಯ ಕಳೆದುಕೊಂಡ ದಲ್ಲಾಳಿಗಳು

ಧಾರವಾಡ: ಸೀಮೆಗೆಲ್ಲ ಹರಡಿದ ಮಾವಿನ ಹೂ ಬಾಣದ ಕಂಪು, ಎಲೆಗಳು ಕಾಣದಷ್ಟು ಚಿಗಿರೊಡೆದ ಮಾವಿನ ಹೂವು ಮತ್ತು ಹೀಚು, ಸಂಕ್ರಾಂತಿ ಸಂಭ್ರಮಕ್ಕೆ ಭೂತಾಯಿ ಸೊಬಗು ಹೆಚ್ಚಿಸಿ ನಿಂತ ಮಾವಿನ ತೋಟಗಳು, 1.5 ಲಕ್ಷ ಟನ್‌ ಮಾವು ಉತ್ಪಾದನೆ
ನಿರೀಕ್ಷೆ. ಆದರೆ ಕೊರೊನಾ ಮಹಾಮಾರಿ ಮಾಡಿದ ಆಘಾತ ಮತ್ತು ಹಳದಿ ನೋಣದ ಕಾಟಕ್ಕೆ ಹೆದರಿದ ಮಾವು ದಲ್ಲಾಳಿಗಳು.

ಹೌದು, ರಾಜ್ಯದಲ್ಲಿಯೇ ಅತೀ ಹೆಚ್ಚು ಅಲ್ಫೋನ್ಸೋ ಮಾವು ಬೆಳೆಯುವ ಜಿಲ್ಲೆ ಎಂದೇ ಖ್ಯಾತಿ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ಮಾವು ಬೆಳೆ ಹುಲುಸಾಗಿ ಹೂವು ಹೀಚು ಬಿಡುತ್ತಿದ್ದು, ಬೆಳೆಗಾರರು ಸಂತಸದಲ್ಲಿದ್ದಾರೆ. ಸಂಕ್ರಾಂತಿ ಸಮಯಕ್ಕಾಗಲೇ ಎಲ್ಲಾ ತೋಟಗಳು ಹೂ ಬಿಟ್ಟಿದ್ದು, ಈ ವರ್ಷ ಪ್ರೋಲಾಂಗ್‌ ಪ್ರೊಸೆಸ್‌ ಅಂದರೆ ಸುದೀರ್ಘ‌ ಸುಗ್ಗಿಯ ಕಾಟ
ಮಾವಿನ ತೋಪುಗಳಿಗೆ ಇಲ್ಲವಾಗಿದೆ. ಹಿಂದಾಗಿ ಹೂ ಬಿಡುವ ತೋಟಗಳು ಸಹ ಈ ವರ್ಷ ಈಗಲೇ ಹೂ ಹಿಡಿದಿದ್ದು, ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳಲ್ಲಿಯೇ ಉತ್ತಮ ಫಸಲಿನೊಂದಿಗೆ ರೈತರ ಕೈಗೆ ಲಭಿಸುವ ವಿಶ್ವಾಸ ಮೂಡಿದೆ.

ಆದರೆ ಕಳೆದ ವರ್ಷ ಮಾವಿನ ಹಣ್ಣುಗಳನ್ನು ಕೊಳೆಯುವಂತೆ ಮಾಡಿದ ಹಳದಿ ನೊಣ ಮತ್ತು ಕೊರೊನಾ ಮಹಾಮಾರಿ ಲಾಕ್‌ಡೌನ್‌ನಿಂದಾಗಿ ಮಾವು ದಲ್ಲಾಳಿಗಳು ಸಂಪೂರ್ಣ ಸುಸ್ತಾಗಿ ಹೋಗಿದ್ದು, ಈ ವರ್ಷ ಮುಂಗಡವಾಗಿ ಹಣ ಬಿಚ್ಚಿ ಧೈರ್ಯದಿಂದ ಮಾವಿನ ತೋಪುಗಳನ್ನು ಗುತ್ತಿಗೆಗೆ ಕೊಳ್ಳಲು ಮಾತ್ರ ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ:ಕಾಡಿನಿಂದ ಹಿಡಿದ ಮೊಲವನ್ನು ಮತ್ತೆ ಕಾಡಿಗೆ ಬಿಟ್ಟು ಸಂಕ್ರಾಂತಿ ಹಬ್ಬ ಆಚರಿಸಿದ ಗ್ರಾಮಸ್ಥರು

ಧೈರ್ಯ ಮಾಡದ ಗುತ್ತಿಗೆದಾರರು: ಈ ಭಾಗದ ಮಾವಿನ ತೋಪುಗಳನ್ನು ಗೋವಾ, ಮುಂಬೈ, ಅಹ್ಮದಾಬಾದ್‌ ಗಳಿಂದ ಬಂದ ಮಾವು ವ್ಯಾಪಾರಿ ಗುತ್ತಿಗೆದಾರರು ಪ್ರತಿವರ್ಷ ಕೊಳ್ಳುತ್ತಾರೆ. ಸಂಕ್ರಾಂತಿ ಸಮಯಕ್ಕೆ ಗಿಡಗಳು ಹಿಡಿದ ಹೂವು ಮತ್ತು ಹೀಚಿನ ಮೇಲೆ ತೋಟಕ್ಕೆ ಬೆಲೆಕಟ್ಟುವ ವ್ಯಾಪಾರಿಗಳು ಅರ್ಧದಷ್ಟು ಮಾತ್ರ ಹಣ ಕೊಟ್ಟು, ಇನ್ನುಳಿದದ್ದನ್ನು ಮಾವಿನ ಫಸಲನ್ನು ಕೀಳುವಾಗ ಬೆಳೆಗಾರರಿಗೆ ಕೊಡುತ್ತಾರೆ. ಆದರೆ ಕೊರೊನಾ ಮಹಾಮಾರಿ ಮಾಡಿದ ಆಘಾತದಿಂದಾಗಿ ಈ ವರ್ಷ ಹೆಚ್ಚು ತೋಟಗಳಿಗೆ ಮುಂಗಡ ಹಣ ಕೊಡುವ ದಲ್ಲಾಳಿಗೇ ಬರುತ್ತಿಲ್ಲ. ಬಂದರೂ, ಮುಂದೆ ಮಾರುಕಟ್ಟೆ ನೋಡಿಕೊಂಡು ಎಲ್ಲರೂ ಸರಿ ಇದ್ದರೆ ಮಾತ್ರವೇ ಹೆಚ್ಚಿನ ಹಣ ನೀಡುತ್ತೇವೆ ಎನ್ನುವ ಷರತ್ತುಗಳನ್ನು ಹಾಕಿ ತೋಟಗಳಿಗೆ ಮುಂಗಡ ಹಣ ಕೊಡುತ್ತಿದ್ದಾರೆ. ಪ್ರತಿವರ್ಷ ಇಷ್ಟೊತ್ತಿಗಾಗಲೇ ಶೇ.70 ರಷ್ಟು ತೋಟಗಳನ್ನು ದಲ್ಲಾಳಿಗಳು ಬುಕ್‌ ಮಾಡಿ ಬಿಡುತ್ತಿದ್ದರು. ಆದರೆ ಈ ವರ್ಷ ಮಾವಿಗೆ ಹಣ ಹಾಕಲು ದಲ್ಲಾಳಿಗಳು ಹಿಂದೇಟು ಹಾಕುತ್ತಿದ್ದಾರೆ.

ಕಳೆದ ವರ್ಷಗಳಿಗೆ ಹೊಲಿಸಿದರೆ ಈ ವರ್ಷ ಚೆನ್ನಾಗಿ ಬೆಳೆ ಬರುವ ನಿರೀಕ್ಷೆ ಈಗಲೂ ಇದೆ. ಆದರೆ ಜಿಗಿರೋಗ ಮತ್ತು ಇಬ್ಬನಿ ಕಾಟ ಹೆಚ್ಚಾಗಿರುವುದು ರೈತರಲ್ಲೂ ಆತಂಕ ಮೂಡಿಸಿದೆ.ಮೂಡಣ ಗಾಳಿ ಚೆನ್ನಾಗಿ ಬೀಸಿದರೆ, ಯಾವುದೇ ದೊಡ್ಡ ಗಾಳಿ ಮಳೆ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕಾಣಿಸಿಕೊಳ್ಳದೆ ಹೋದರೆ ಸಾಕು ಎನ್ನುತ್ತಿದ್ದಾರೆ ತೋಟಗಾರಿಕೆ ಇಲಾಖೆ ಮಾವು ತಜ್ಞರು.

ಹೊರ ರಾಜ್ಯ, ದೇಶಕ್ಕೂ ಸೈ: ಉತ್ತರ ಕರ್ನಾಟಕ ಸೇರಿದಂತೆ, ಗೋವಾ, ಮಹಾರಾಷ್ಟ್ರ, ಗುಜರಾತ್‌, ಆಂಧ್ರಪ್ರದೇಶಗಳಲ್ಲಿ ಸಾಕಷ್ಟು ಬೇಡಿಕೆ ಹೊಂದಿರುವ ಅಲ್ಫೋನ್ಸೋ ಮಾವಿನ ಹಣ್ಣಿನ ಖಣಜಗಳೇ ಧಾರವಾಡ ಮತ್ತು ಬೆಳಗಾವಿ ಜಿಲ್ಲೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಒಂದು ಜಿಲ್ಲೆ ಒಂದು ಉತ್ಪನ್ನದಡಿ ಧಾರವಾಡ ಜಿಲ್ಲೆಯ ಅಲ್ಫೋನ್ಸೋ ಮಾವು ಸ್ಥಾನ
ಪಡೆದುಕೊಂಡಿದೆ. ಸರ್ಕಾರ ಇದರ ಮೌಲ್ಯವರ್ಧನೆಗೆ ಶ್ರಮಿಸುತ್ತಿದೆಯಾದರೂ ಇನ್ನೂ ಅಚ್ಚುಕಟ್ಟು ವ್ಯವಸ್ಥೆ ಜಾರಿಯಾಗಿಲ್ಲ. ಮಾವು ಬೆಳೆಗಾರರು ಅಲ್ಫೋನ್ಸೋ ಮಾವು ರಫ್ತಿಗೆ ಬೇಕಾಗುವ ತಂತ್ರಜ್ಞಾನ, ಪ್ಯಾಕಿಂಗ್‌, ಸಂಸ್ಕರಣೆಗೆ ಆದ್ಯತೆ ಸಿಗಬೇಕು ಎನ್ನುತ್ತಲೇ ಇದ್ದಾರೆ. ಆದರೆ ಅದಕ್ಕೆ ಪೂರಕವಾದ ವಾತಾವರಣ ಸದ್ಯಕ್ಕೆ ಜಿಲ್ಲೆಯಲ್ಲಿ ಕಾಣಿಸುತ್ತಲೇ ಇಲ್ಲ.

ಟಾಪ್ ನ್ಯೂಸ್

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.