ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್
Team Udayavani, Jan 17, 2021, 9:30 PM IST
ನವದೆಹಲಿ: ಕೆಲದಿನಗಳ ಹಿಂದೆ ಬಳಕೆದಾರರ ಮಾಹಿತಿಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳಲಿದೆ ಎಂಬ ಆರೋಪವನ್ನು ಎದುರಿಸಿದ್ದ ವಾಟ್ಸಾಪ್ , ಇದೀಗ ತನ್ನ ಸ್ಟೇಟಸ್ ಅಪ್ ಡೇಟ್ ಮೂಲಕ ಯಾವುದೇ ಬಳಕೆದಾರರ ಮಾಹಿತಿಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
ತನ್ನ ಮೇಲೆ ಬಂದಿರುವ ಆರೋಪದಿಂದ ಮುಕ್ತವಾಗಲು ಹಲವಾರು ಮಾಧ್ಯಮಗಳ ಮೂಲಕ ತನ್ನ ಬಳಕೆದಾರರಿಗೆ ಮಾಹಿತಿ ನೀಡಿರುವ ವಾಟ್ಸಾಪ್, ಇದೀಗ ತನ್ನ ಸ್ಟೇಟಸ್ ಮೂಲಕವೂ ಬಳಕೆದಾರರನ್ನು ತಲುಪಲು ಮುಂದಾಗಿದೆ.
ಒಟ್ಟು ನಾಲ್ಕು ಸ್ಟೇಟಸ್ ಪೋಸ್ಟ್ ಮಾಡಿರುವ ವಾಟ್ಸಾಪ್, ನಾವು ನಿಮ್ಮ ಖಾಸಗಿತನವನ್ನು ರಕ್ಷಿಸಲು ಬದ್ಧರಾಗಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಅಥವಾ ಚಾಟ್ ಗಳನ್ನು ಯಾರಿಂದಲೂ ಓದಲು ಸಾಧ್ಯವಿಲ್ಲ. ಎಲ್ಲಾ ವೈಯಕ್ತಿಕ ಮಾಹಿತಿಗಳು ಎಂಡ್ ಟು ಎಂಡ್ ಎನ್ ಕ್ರಿಪ್ಷನ್ ಆಗಿವೆ ಎಂದಿದ್ದು, ಜೊತೆಗೆ ನೀವು ಶೇರ್ ಮಾಡಿರುವ ಯಾವುದೇ ಲೊಕೇಷನ್ ಅನ್ನು ವಾಟ್ಸಾಪ್ ಸಂಸ್ಥೆ ಕೂಡಾ ನೋಡಲು ಸಾಧ್ಯವಿಲ್ಲ ಮತ್ತು ನಾವು ನಿಮ್ಮ ಕಾಂಟಾಕ್ಟ್ ಸಂಖ್ಯೆಗಳನ್ನು ಫೇಸ್ ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ ಎಂದಿದೆ.
ಇದನ್ನೂ ಓದಿ:ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
ಹೊಸ ಅಪ್ ಡೇಟ್ ಮುಂದೂಡಿಕೆ
ನೂತನ ಪ್ರೈವೆಸಿ ಅಪ್ ಡೇಟ್ ಗೆ ಸಂಬಂಧಿಸಿದಂತೆ ವಿವಾದಕ್ಕೆ ಒಳಗಾಗಿದ್ದ ವಾಟ್ಸಾಪ್, ತನ್ನ ಹೊಸ ಅಪ್ ಡೇಟ್ ಅನ್ನು ಮುಂದಿನ ಮೇ ತಿಂಗಳಿಗೆ ಮುಂದೂಡಿದೆ. ಅಲ್ಲದೆ ಫೆಬ್ರವರಿ 8 ರಂದು ಯಾವುದೇ ಖಾತೆಗಳನ್ನು ನಿಷ್ಕ್ರಿಯಗೊಳಿಸುವುದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ:ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
ಪ್ರಸ್ತುತ ಫೇಸ್ ಬುಕ್ ಒಡೆತನದಲ್ಲಿರುವ ವಾಟ್ಸಾಪ್ ತನ್ನ ಹೊಸ ಅಪ್ ಡೇಟ್ ಅನ್ನು ಎಲ್ಲಾ ಬಳಕೆದಾರರು ಬಳಸಲೇಬೇಕು ಎಂದು ಹೇಳಿದ್ದು ವಿವಾದಕ್ಕೆ ಎಡೆಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ