ಮೋದಿ ಮಾದರಿ ಆಡಳಿತ

ಬಿಎಸ್‌ವೈಗೆ ಶಾ ಶ್ಲಾಘನೆ ಜನಸೇವಕ ಸಮಾರೋಪ

Team Udayavani, Jan 18, 2021, 5:00 AM IST

ಮೋದಿ ಮಾದರಿ ಆಡಳಿತ

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ರವಿವಾರ ಬಿಎಸ್‌ವೈ ಅವರನ್ನು ಮೋದಿಯವರಿಗೆ ಹೋಲಿಸಿದ್ದಾರೆ. ಪ್ರಧಾನಿ ಮೋದಿ ಸ್ವತ್ಛ ಮತ್ತು ಉತ್ತಮ ಆಡಳಿತ ನೀಡುತ್ತಿದ್ದು, ಕರ್ನಾಟಕದಲ್ಲೂ ಯಡಿಯೂರಪ್ಪ ಜನಮೆಚ್ಚುವಂತೆ ಅಂಥದ್ದೇ ಆಡಳಿತ ನೀಡುತ್ತಿದ್ದಾರೆ ಎಂದು ಶ್ಲಾ ಸಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ನಡೆದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಸರಕಾರ ಉಳಿದ ರಾಜ್ಯಗಳಿಗೆ ಮಾದರಿ. ಕ್ರಾಂತಿಕಾರಕ ಕ್ರಮಗಳಿಂದ ದೇಶದ ಜನರಲ್ಲಿ ಮೋದಿ ಆಡಳಿತದ ಬಗ್ಗೆ ವಿಶ್ವಾಸ ಮೂಡಿದೆ. ಕರ್ನಾಟಕದಲ್ಲೂ ಯಡಿಯೂರಪ್ಪ ನೇತೃತ್ವದ ಸರಕಾರದಿಂದ ಪ್ರಗತಿ ಕಾಣುತ್ತಿದೆ. ಜನರಲ್ಲಿ ಹೊಸ ಭರವಸೆ ಮೂಡಿದೆ. ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಾವಿರಾರು ಸದಸ್ಯರು ಆಯ್ಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಯಡಿಯೂರಪ್ಪ ಅವರಿಗೆ ಮನಃಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಅವರ ಅನುಭವದ ನೇತೃತ್ವದಲ್ಲಿ ಕರ್ನಾಟಕವು ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಕಾಂಗ್ರೆಸ್‌ ಏನು ಮಾಡಿದೆ? :

10 ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ ಕರ್ನಾಟಕಕ್ಕೆ ಏನು ಕೊಡುಗೆ ನೀಡಿದೆ, ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬುದನ್ನು ಅಂಕಿ-ಅಂಶಗಳ ಸಮೇತ ಬಹಿರಂಗಪಡಿಸಲಿ. ಕರ್ನಾಟಕಕ್ಕೆ ನೀಡಿದ ಕೊಡುಗೆ ಬಗ್ಗೆ ಕಾಂಗ್ರೆಸ್‌ ಬಳಿ ದಾಖಲೆಗಳೇ ಇಲ್ಲ. ಆದರೆ ನಮ್ಮ ಬಳಿ ಇದೆ. ಕಾಂಗ್ರೆಸ್‌ ಕರ್ನಾಟಕಕ್ಕೆ 13ನೇ ಹಣಕಾಸು ಯೋಜನೆಯಡಿ 88,583 ಕೋ.ರೂ. ಹಣ ನೀಡಿದೆ. ಆದರೆ ಮೋದಿ ಸರಕಾರ 2014ರಿಂದ 2019ರ ವರೆಗೆ ಕರ್ನಾಟಕಕ್ಕೆ 2,19,506 ಕೋ.ರೂ. ನೀಡಿದೆ ಎಂದರು.

ಮೋದಿ ನೇತೃತ್ವದಲ್ಲಿ 7 ಕೋಟಿ ಮನೆಗಳ ಸದಸ್ಯರಿಗೆ ಬ್ಯಾಂಕ್‌ ಖಾತೆ ತೆರೆಯಲಾಯಿತು. 13 ಕೋಟಿ ಮನೆಗಳಿಗೆ ಉಜ್ವಲ ಗ್ಯಾಸ್‌ ಒದಗಿಸಲಾಯಿತು. 60 ಕೋಟಿ ಜನರಿಗೆ ಆಯುಷ್ಮಾನ್‌ ಯೋಜನೆಯಡಿ ಆರೋಗ್ಯ ಸೌಲಭ್ಯ ಒದಗಿಸಲಾಯಿತು. 2022ರ ವೇಳೆಗೆ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಮೋದಿ ಸರಕಾರ 370ನೇ ವಿಧಿಯನ್ನು ಕಿತ್ತೂಗೆಯಿತು. ಪರಿಣಾಮವಾಗಿ ಜಮ್ಮು-ಕಾಶ್ಮೀರ ದಲ್ಲಿ ಈಗ ಸಂಪೂರ್ಣ ಶಾಂತಿ ನೆಲೆಸಿದೆ. ಮೋದಿ ಎರಡನೇ ಬಾರಿಗೆ ಪ್ರಧಾನಿಯಾದಾಗ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಇದೆಲ್ಲ ಕಾಂಗ್ರೆಸ್‌ನಿಂದ ಏಕೆ ಸಾಧ್ಯವಾಗಲಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಹೆದರದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ

ಮೋದಿ ಸರಕಾರ ಕೋವಿಡ್ ಮಹಾಮಾರಿಯನ್ನು ಸಮರ್ಥವಾಗಿ ನಿಯಂತ್ರಿಸಿದೆ. ಆದರೆ ಇದನ್ನೂ ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ನಮ್ಮ ವಿಜ್ಞಾನಿಗಳು ಶ್ರಮಪಟ್ಟು ಲಸಿಕೆ ತಯಾರಿಸಿದರೆ ಅಲ್ಲೂ ಅನುಮಾನ ವ್ಯಕ್ತಪಡಿಸಿದರು. ಇದು ಕಾಂಗ್ರೆಸ್‌ ಸಂಸ್ಕೃತಿ. ಲಸಿಕೆಯ ವಿಚಾರದಲ್ಲಿ ಕಾಂಗ್ರೆಸ್‌ ಮಾತನ್ನು ನಂಬಬೇಡಿ. ಅಂಜಿಕೆಯಿಲ್ಲದೇ ಲಸಿಕೆ ಹಾಕಿಸಿಕೊಳ್ಳಿ. ಕರ್ನಾಟಕದಲ್ಲಿ ಆತ್ಮನಿರ್ಭರ ಯೋಜನೆಯಡಿ ಅನೇಕ ಘಟಕಗಳು ನಿರ್ಮಾಣವಾಗಿವೆ. ಲಕ್ಷಾಂತರ ಜನರಿಗೆ ಉದ್ಯೋಗ ಸಿಕ್ಕಿದೆ. ಕೊಪ್ಪಳದಲ್ಲಿ ನಿರ್ಮಾಣವಾಗಲಿರುವ ಆಟಿಕೆ ತಯಾರಿಕೆ ಘಟಕ ಚೀನದ ಮೇಲಿನ ಅವಲಂಬನೆಯನ್ನು ದೂರ ಮಾಡಲಿದೆ ಎಂದು ಶಾ ಹೇಳಿದರು.

ನಗು ಮುಖದ ಅಂಗಡಿ ಮರೆಯಲಾಗದು :

ಸುರೇಶ ಅಂಗಡಿ ಅವರನ್ನು ನೆನಪಿಸಿಕೊಂಡ ಅಮಿತ್‌ ಶಾ, ಸದಾ ನಗುಮುಖ ಹೊಂದಿದ್ದ ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕ್ರಿಯಾಶೀಲರಾಗಿದ್ದ ಅವರು ಮುಂದೆ ದಿಗ್ಗಜ ನಾಯಕರಾಗುವ ಎಲ್ಲ ಅವಕಾಶ ಹೊಂದಿದ್ದರು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು ಎಂದು ಭಾವುಕರಾದರು.

ಕರ್ನಾಟಕದಲ್ಲಿ ಬಿಜೆಪಿ :

ಮತ್ತಷ್ಟು ಗಟ್ಟಿಯಾಗಿದೆ. ಮುಂಬರುವ ತಾ.ಪಂ., ಜಿ.ಪಂ.ಚುನಾವಣೆ ಯಲ್ಲೂ ಬಿಜೆಪಿ ಶೇ. 75ಕ್ಕೂ ಹೆಚ್ಚು ಸ್ಥಾನಗಳಲ್ಲಿ  ಗೆಲ್ಲಲಿದೆ. ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. – ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಹಣಬಲ, ತೋಳ್ಬಲದಿಂದ ಚುನಾವಣೆ ಗೆಲ್ಲಬಹುದು ಎಂದು ಕಾಂಗ್ರೆಸ್‌ ಕನಸು ಕಾಣುತ್ತಿತ್ತು. ಆದರೆ ಇದೆಲ್ಲವನ್ನೂ ಮೆಟ್ಟಿನಿಂತು ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿದೆ.  -ಬಿ.ಎಸ್‌. ಯ ಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.