ಜಿಯೋ ಟಿವಿಯಲ್ಲೂ ವಿದ್ಯಾರ್ಥಿಗಳಿಗೆ ಪಾಠ


Team Udayavani, Jan 18, 2021, 7:25 AM IST

ಜಿಯೋ ಟಿವಿಯಲ್ಲೂ  ವಿದ್ಯಾರ್ಥಿಗಳಿಗೆ ಪಾಠ

ಬೆಂಗಳೂರು: ಆನ್‌ಲೈನ್‌, ಆಫ್ಲೈನ್‌ ತರಗತಿಗಳ ಜತೆಗೆ ಇನ್ನು ಮುಂದೆ  ವಿದ್ಯಾರ್ಥಿಗಳಿಗೆ ಜಿಯೋ ಟೀವಿ ಮೂಲಕವೂ ಪಾಠ ಸಿಗಲಿದೆ.

ಐದರಿಂದ ಎಸೆಸೆಲ್ಸಿ ತರಗತಿವರೆಗಿನ ರಾಜ್ಯ  ಪಠ್ಯ ಕ್ರಮದ ವಿದ್ಯಾರ್ಥಿಗಳಿಗೆ ಇನ್ನಷ್ಟು ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ಜಿಯೋ ಟಿವಿಯಲ್ಲೂ  ಶೀಘ್ರ ಪಾಠ ಪ್ರಸಾರವಾಗಲಿದೆ. ಈಗಾಗಲೇ ಸಂವೇದಾ  ಮೂಲಕ  ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಜಿಯೋ ಟಿ.ವಿ. ಮೂಲಕವೂ  ತರಗತಿಗಳು ಲಭ್ಯವಾಗಲಿವೆ .

ಈಗಾಗಲೇ, ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿದ್ದರೂ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ಸಂವೇದಾ ತರಗತಿಗಳು ನಿರಂತರವಾಗಿ ಸಾಗುತ್ತಿವೆ. ಹಾಗೆಯೇ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮವೂ ನಡೆಯುತ್ತಿದೆ.  ಈ ವಿದ್ಯಾರ್ಥಿಗಳಿಗೂ ಸಂವೇದಾ ಪಾಠ ಯಥಾಪ್ರಕಾರ (ಸಮಯದಲ್ಲಿ ಬದಲಾವಣೆಯಾಗಿದೆ) ಮುಂದುವರಿದಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ ರೇಡಿಯೋ ಪಾಠವೂ ನಡೆಯುತ್ತಿದೆ.

ಹಿಂದೆಯೇ ಇತ್ತು ಚಿಂತನೆ :

ಲಾಕ್‌ಡೌನ್‌ ಅವಧಿಯಲ್ಲಿ   ಸರಕಾರಿ ಶಾಲಾ ಮಕ್ಕಳ ಕಲಿಕೆ ಮುಂದುವರಿಸಲು ವಿವಿಧ ಮಾರ್ಗ ಅನುಸರಿಸಲಾಗಿತ್ತು. ವಿದ್ಯಾಗಮ ಅನುಷ್ಠಾನ, ದೂರದರ್ಶನದ ಸಂವೇದಾ ಪಾಠ, ವಾಟ್ಸ್‌ ಆ್ಯಪ್‌ ಗ್ರೂಪ್‌ ಮೂಲಕ ಕಲಿಕಾ ಸಾಮಗ್ರಿ ಒದಗಿಸುವುದು  ಮುಂತಾದವುಗಳನ್ನು ಸ್ಥಳೀಯ ಆವಶ್ಯಕತೆ, ತಂತ್ರಾಂಶ ಲಭ್ಯತೆ ಆಧಾರದಲ್ಲಿ ಅನುಷ್ಠಾನ ಮಾಡಿಕೊಳ್ಳಲಾಗಿತ್ತು. ಇದೇ ವೇಳೆ ಸ್ಥಳೀಯ ಕೇಬಲ್‌ ಚಾಲನ್‌ಗಳಲ್ಲೂ ಪಾಠ ಪ್ರಸಾರಕ್ಕೆ ಶಿಕ್ಷಣ ಇಲಾಖೆ  ಪ್ರಯತ್ನಿಸಿತ್ತು. ಅಲ್ಲದೆ, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಸ್ಥಳೀಯ ಕೇಬಲ್‌ ಆಪರೇಟರ್ ಜತೆಗೂ  ಚರ್ಚಿಸಿದ್ದರು.  ಆದರೆ,  ಆ ಕಾರ್ಯ ಸಾಕಾರವಾಗಿರಲಿಲ್ಲ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ(ಡಿಎಸ್‌ಇಆರ್‌ಟಿ) ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಜಿಯೋ ಆ್ಯಪ್‌ ಬೇಕು :

ಡಿಎಸ್‌ಇಆರ್‌ಟಿ ಎಲ್ಲ ಸಿದ್ಧತೆಯಾಗಿ ಜಿಯೋ ಟಿವಿಯಲ್ಲಿ ಪಾಠ ಪ್ರಸಾರ ಮಾಡಲು ಆರಂಭಿಸಿದ ಬಳಿಕ ಆ ಪಾಠಗಳನ್ನು ನಿತ್ಯವೂ ವಿದ್ಯಾರ್ಥಿಗಳು ತಮ್ಮ ಪಾಲಕ, ಪೋಷಕರ ಮೊಬೈಲ್‌ ಮೂಲಕ ಅಥವಾ ಸ್ಮಾರ್ಟ್‌ ಟಿ.ವಿ. (ಇಂಟರ್‌ನೆಟ್‌ ಸಂಪರ್ಕ ನೀಡಬಲ್ಲ ಅಥವಾ ಆ್ಯಂಡ್ರಾಯಿಡ್‌ ಆಪ್‌ ಬಳಸಲು ಸಾಧ್ಯವಿರುವ)ಗಳ ಮೂಲಕ  ಆಲಿಸಬಹುದು. ಇದಕ್ಕಾಗಿ ಜಿಯೋ ಟಿವಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು, ನೋಂದಣಿ ಮಾಡಿದ ಬಳಿಕ ನಿತ್ಯದ ತರಗತಿಗಳನ್ನು ಆಯಾ ಸಮಯದ ಆಧಾರದಲ್ಲಿ ನೋಡಬಹುದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಿಯೋ ಟಿವಿಯಲ್ಲಿ ಉಚಿತವಾಗಿ ಪಾಠ ಪ್ರಸಾರ ಮಾಡುವ ಸಂಬಂಧ ಡಿಎಸ್‌ಇಆರ್‌ಟಿ ಹಾಗೂ ಜಿಯೋ ಟಿವಿಯೊಂದಿಗೆ  ಒಡಂಬಡಿಕೆ  ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಜಿಯೋ ಟಿವಿ ಲಭ್ಯತೆ ಹಾಗೂ ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಜಿಯೋ ಟಿವಿ ಮೂಲಕ ಹೇಗೆ ತಲುಪಬಹುದು. ಇದರಿಂದ ಎದುರಾಗಬಹುದಾದ ತಾಂತ್ರಿಕ ಸಮಸ್ಯೆ ಇತ್ಯಾದಿಗಳ ಮಾಹಿತಿ ಸಂಗ್ರಹಿಸು ತ್ತಿದ್ದೇವೆ. ಸಂವೇದಾ ತರಗತಿಗಳ ಜತೆಗೆ ಜಿಯೋ ಟಿವಿ ಯಲ್ಲೂ ತರಗತಿ ಪ್ರಸಾರ ಮಾಡುವುದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಒಪ್ಪಂದ  ಮಾಡಿಕೊಂಡಿದ್ದೇವೆ.  -ಎಂ.ಆರ್‌. ಮಾರುತಿ  ನಿರ್ದೇಶಕ , ಡಿಎಸ್‌ಇಆರ್‌ಟಿ

 

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.