ಹೊಸ ಜೋಶ್‌ನಲ್ಲಿ ಚಿತ್ರರಂಗ ಸಾಲು ಸಾಲು ಸಿನಿಮಾಗಳಿಗೆ ಪೂಜೆ


Team Udayavani, Jan 18, 2021, 10:33 AM IST

ಲಂಕಾಸುರ

ಕೊರೊನಾ ಮಹಾಮಾರಿಯಿಂದ ನಲುಗಿ ಹೋಗಿದ್ದ ಕನ್ನಡ ಚಿತ್ರರಂಗ ಈಗ ಚೇತರಿಕೆ ಕಂಡಿದೆ. ಸಿನಿಮಾಗಳ ಬಿಡುಗಡೆ ಜೊತೆಗೆ ಸಾಕಷ್ಟು ಹೊಸ ಸಿನಿಮಾಗಳು ಕೂಡಾ ಸೆಟ್ಟೇರುತ್ತಿವೆ. ಹೊಸ ವರ್ಷ ತಮ್ಮ ಬಾಳಿನಲ್ಲಿ ಒಳ್ಳೆಯದ್ದನ್ನೇ ಮಾಡುತ್ತದೆ ಎಂಬ ನಂಬಿಕೆಯೊಂದಿಗೆ ಸಿನಿಮಾ ಮಂದಿ ಹೊಸ ಹೊಸ ಸಿನಿಮಾಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಅದರ ಪರಿಣಾಮವಾಗಿಯೇ ಸಾಕಷ್ಟು ಹೊಸಬರ, ಸ್ಟಾರ್‌ಗಳ ಸಿನಿಮಾಗಳು ಮುಹೂರ್ತ ಆಚರಿಸಿಕೊಂಡಿವೆ. ಅದರಲ್ಲೂ ಸಂಕ್ರಾಂತಿಯ ನಂತರ ಸಾಕಷ್ಟು ಸಿನಿಮಾಗಳು ಸೆಟ್ಟೇರಿವೆ. ಬಹುಭಾಷಾ “ಸಲಾರ್‌’ ಹಾಗೂ ಅಭಿಷೇಕ್‌ ಅಂಬರೀಶ್‌ ಅವರ “ಬ್ಯಾಡ್‌ ಮ್ಯಾನರ್’ ಚಿತ್ರದ ಜೊತೆಗೆ ಇನ್ನೂ ಹಲವು ಚಿತ್ರಗಳು ಮುಹೂರ್ತ ಮಾಡಿಕೊಂಡು, ಚಿತ್ರೀಕರಣಕ್ಕೆ ಹೊರಟಿವೆ. ಆ ಚಿತ್ರಗಳು ಯಾವುವೆಂದು ನೋಡುವುದಾದರೆ…

ಲಂಕಾಸುರ

ವಿನೋದ್‌ ಪ್ರಭಾಕರ್‌ ನಾಯಕರಾಗಿರುವ “ಲಂಕಾಸುರ’ ಚಿತ್ರಕ್ಕೆ ದೊಡ್ಡಬಸ್ತಿಯ ಶ್ರೀಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಇತ್ತೀಚೆಗೆ ಮುಹೂರ್ತ ನಡೆಯಿತು. ಎ.ಎಂ.ಎಸ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ನಿರ್ಮಾಪಕರ ಮಕ್ಕಳಾದ ಮಾಸ್ಟರ್‌ ಮಾನಸ್‌ ಪ್ರಜ್ವಲ್‌ ಹಾಗೂ ಶ್ರೇಯಸ್‌ ಪ್ರಜ್ವಲ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕರ ಪುತ್ರ ಮಾಸ್ಟರ್‌ ಯೋಜಿತ್‌ ಆರಂಭ ಫ‌ಲಕ ತೋರಿದರು. ವಿನೋದ್‌ ಪ್ರಭಾಕರ್‌, ಲೂಸ್‌ ಮಾದ ಯೋಗಿ, ನಾಯಕಿ ಪಾರ್ವತಿ ಅರುಣ್‌, ಸಹಾನಾ ಗೌಡ ಹಾಗೂ ಅನೇಕ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಹಿಂದೆ ಮೂರ್ಕಲ್‌ ಎಸ್ಟೇಟ್‌ ಚಿತ್ರವನ್ನು ನಿರ್ದೇಶಿಸಿದ್ದ ಪ್ರಮೋದ್‌ ಕುಮಾರ್‌ ಲಂಕಾಸುರ ಚಿತ್ರದ ನಿರ್ದೇಶಕರು.

ಗಾಜನೂರು

ನವನಟ ಅವತಾರ್‌ ನಾಯಕ ನಟರಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿರುವ “ಗಾಜನೂರು’ ಚಿತ್ರ ಕೂಡಾ ಮುಹೂರ್ತ ಕಂಡಿದೆ. ಸಸ್ಪೆನ್ಸ್‌ ಕಂ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೀರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ ಎಸ್‌. ಮೋಹನ್‌, ನಂದಕಿಶೋರ್‌ ಮೊದಲಾದ ನಿರ್ದೇಶಕರ ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ವಿಜಯ್‌ ಮೊದಲ ಬಾರಿಗೆ “ಗಾಜನೂರು’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸೋನಾಲ್‌ ಮೊಂತೆರೋ ಈ ಚಿತ್ರದ ನಾಯಕಿ. ಗುಲಬರ್ಗಾ ಮೂಲದ ಅವಿನಾಶ್‌ “ಕೃತಿಕಾರಾಮ್‌ ಮೂವೀಸ್‌’ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

ಇದನ್ನೂ ಓದಿ:ಫೆಬ್ರವರಿಯಲ್ಲೇ ಬರುತ್ತಂತೆ ಪೊಗರು!

ವೇಷ

ಸಂಪೂರ್ಣ ಹೊಸಬರೇ ಸೇರಿ ಮಾಡುತ್ತಿರುವ “ವೇಷ’ ಚಿತ್ರದ ಮುಹೂರ್ತ ಭಾನುವಾರ ನಡೆದಿದೆ. ರಘು ಈ ಚಿತ್ರದ ಮೂಲಕ ನಾಯಕ ನಟರಾಗಿ ಬಣ್ಣ ಹಚ್ಚುತ್ತಿದ್ದಾರೆ. ಪವನ್‌ ಕೃಷ್ಣ ಈ ಚಿತ್ರದ ನಿರ್ದೇಶಕರು. ಹಂಸಿನಿ ಕ್ರಿಯೇಶನ್ಸ್‌ ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ರಘು, ವಾಣಿಶ್ರೀ, ಮಂಜು ಪಾವಗಡ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಓ ಮೈ ಲವ್‌

ಸ್ಮೈಲ್‌ ಶ್ರೀನು ನಿರ್ದೇಶನದ “ಓ ಮೈ ಲವ್‌’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಸಚಿವ ಶ್ರೀರಾಮುಲು ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿ, ಶುಭಕೋರಿದ್ದಾರೆ. ಈ ಚಿತ್ರವನ್ನು ರಾಮಾಂಜಿನಿ ಕಥೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ಶಶಿಕುಮಾರ್‌ ಪುತ್ರ ಅಕ್ಷಿತ್‌ ನಾಯಕರಾದರೆ, ಕೀರ್ತಿ ಈ ಚಿತ್ರದ ನಾಯಕಿ.

ಅವಸ್ಥಾಂತರ

ಸಂಚಾರಿ ವಿಜಯ್‌ ನಾಯಕರಾಗಿರುವ “ಅವಸ್ಥಾಂತರ’ ಚಿತ್ರವೂ ಸೆಟ್ಟೇರಿದೆ. ದೀಪಕ್‌ ಕುಮಾರ್‌ ಈ ಚಿತ್ರದ ನಿರ್ದೇಶಕರು. ರಂಜನಿ ರಾಘವನ್‌ ಹಾಗೂ ದಿಶಾ ಕೃಷ್ಣಯ್ಯ ಈ ಚಿತ್ರದ ನಾಯಕಿಯರು. ಇತ್ತೀಚೆಗೆ ಈ ಚಿತ್ರವೂ ಮುಹೂರ್ತ ಕಂಡಿದ್ದು, ಹೊಸ ಬಗೆಯ ಕಥೆಯನ್ನು ಹೊಂದಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.