ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ


Team Udayavani, Jan 19, 2021, 2:00 AM IST

ಗುಡ್ಡ ಕುಸಿತದ ಭೀತಿ; ಅಪಾಯಕ್ಕೆ ಮೊದಲು ಬೇಕಿದೆ ಕ್ರಮ

ಬಂಟ್ವಾಳ: ಹಲವು ಕಡೆ ಗುಡ್ಡ ಕುಸಿತದ ಘಟನೆಗಳು ನಡೆದು ಜೀವ ಹಾನಿ, ಆಸ್ತಿಪಾಸ್ತಿ ಹಾನಿಯ ಘಟನೆಗಳು ನಮ್ಮ ಕಣ್ಣ ಮುಂದಿದೆ. ಕೆಲವೊಂದಕ್ಕೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದೆ ಹಾಗಾಗುತ್ತದೆ. ಬಂಟ್ವಾಳ ಪುರಸಭೆ ವ್ಯಾಪ್ತಿಯ ಗೂಡಿನಬಳಿಯಲ್ಲೂ ಇಂತಹ ಗುಡ್ಡವೊಂದು ಅಪಾಯದ ಸ್ಥಿತಿಯ ಲ್ಲಿದ್ದು, ಸಂಬಂಧಪಟ್ಟವರು ಈಗಲೇ ಎಚ್ಚೆತ್ತು ಕೊಳ್ಳಬೇಕಿದೆ.

ಗೂಡಿನಬಳಿಯ ಈ ಪ್ರದೇಶದಲ್ಲಿ ಗುಡ್ಡ ಕುಸಿತ ಉಂಟಾದಲ್ಲಿ ಸ್ಥಳೀಯ ಮನೆಗಳಿಗೆ ಹಾನಿಯಾಗುವ ಜತೆಗೆ ರಸ್ತೆ ಸಂಪರ್ಕವೂ ಕಡಿತಗೊಳ್ಳುತ್ತದೆ. ಜತೆಗೆ ಪುರಸಭೆ ಹಲವು ವಾರ್ಡ್‌ಗಳ ನೂರಾರು ಮನೆಗಳಿಗೆ ನೀರಿನ ಸಂಪರ್ಕವೂ ಕಡಿತಗೊಳ್ಳುತ್ತದೆ. ಹೀಗಾಗಿ ಅಪಾಯ ಸಂಭವಿಸುವ ಮೊದಲು ಬೃಹತ್‌ ತಡೆಗೋಡೆ ನಿರ್ಮಾಣದ ಅಗತ್ಯವಿದೆ.

ಗುರುಪುರ ಘಟನೆ ನೆನಪು :

ಗೂಡಿನಬಳಿಯ ಅಪಾಯದ ಸ್ಥಿತಿ ಕಳೆದ ಮಳೆಗಾಲದಲ್ಲಿ ಗುರುಪುರ ಮಠದಗುಡ್ಡೆ (ಬಂಗ್ಲೆಗುಡ್ಡೆ)ಯಲ್ಲಿ ನಡೆದ ಘಟನೆಯನ್ನು ನೆನಪಿಸುತ್ತದೆ. ಗೂಡಿನ ಬಳಿಯ ಪ್ರದೇಶವೂ ಅದೇ ರೀತಿಯ ಜನ ವಸತಿಯ ಪ್ರದೇಶವಾಗಿದ್ದು, ಗುಡ್ಡದ ತಳಭಾಗದಲ್ಲಿ ಹಲವಾರು ಮನೆಗಳಿವೆ.

ಗುಡ್ಡೆ ಕುಸಿತ-ಗೋಣಿಚೀಲ ಪರಿಹಾರ :

ಗೂಡಿನಬಳಿಯಿಂದ ಎತ್ತರ ಪ್ರದೇಶ ದಲ್ಲಿರುವ ಮನೆಗಳು ಹಾಗೂ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪಕ್ಕದಲ್ಲೇ ಹತ್ತಾರು ಮನೆಗಳಿದ್ದು, ಒಂದು ವೇಳೆ ಈ ಗುಡ್ಡ ಕುಸಿದಲ್ಲಿ ಹತ್ತಾರು ಮನೆಗಳಿಗೆ ಹಾನಿಯಾಗಲಿದೆ. ಕಳೆದ ಕೆಲವು ತಿಂಗಳ ಹಿಂದೆ ಇಲ್ಲಿ ಗುಡ್ಡ ಕುಸಿತ ಉಂಟಾದಾಗ ತಹಶೀಲ್ದಾರ್‌ ಸೂಚನೆಯಂತೆ ಎಂಜಿನಿಯರ್‌ ಪರಿಶೀಲನೆ ನಡೆಸಿ ಮರಳು ತುಂಬಿದ ಗೋಣಿ ಚೀಲಗಳನ್ನು ಇರಿಸಲಾಗಿತ್ತು. ನೂರಾರು ಗೋಣಿಗಳನ್ನು ಒಂದರ ಮೇಲೊಂದರಂತೆ ಇಡಲಾಗಿದೆ. ಆದರೆ ಇದೀಗ ಬಿಸಿಲಿನ ತೀವ್ರತೆಗೆ ಗೋಣಿಗಳು ಹರಿದು ಮರಳು ಕೆಳಗೆ ಬೀಳುತ್ತಿದೆ. ಒಂದು ವೇಳೆ ಜೋರಾಗಿ ಮಳೆ ಬಂದು ನೀರು ಒಳ ನುಗ್ಗಿದರೆ ಗೋಣಿ ಚೀಲಗಳು ಕೂಡ ಕೆಳಗೆ ಬೀಳುವ ಸ್ಥಿತಿ ಇದೆ. ರಸ್ತೆಗೆ ತಾಗಿಕೊಂಡೇ ಗುಡ್ಡ ಕುಸಿದಿದ್ದು, ಇನ್ನು ಸ್ಪಲ್ಪ ಕುಸಿದರೂ, ಈ ಭಾಗಕ್ಕೆ ರಸ್ತೆ ಸಂಪರ್ಕ ಕಡಿತಗೊಳ್ಳಲಿದೆ. ಇಲ್ಲಿ 2 ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಎರಡೂ ಕಡೆಯೂ ಗೋಣಿ ಚೀಲಗಳನ್ನು ಇಡಲಾಗಿದೆ.

ಗುಡ್ಡ ಜರಿದರೆ ರಸ್ತೆ ಸಂಪರ್ಕ ಕಡಿತ :ವಾರ್ಡ್‌ಗಳಿಗೆ ನೀರು ಪೂರೈಸುವ ಟ್ಯಾಂಕ್‌ :

ಗೂಡಿನಬಳಿಯಲ್ಲಿ ಗುಡ್ಡದ ಮೇಲ್ಭಾಗದಲ್ಲಿ ಪುರಸಭೆಯ ಹಲವು ವಾರ್ಡ್‌ಗಳಿಗೆ ನೀರು ಪೂರೈಕೆ ಮಾಡುವ ಟ್ಯಾಂಕ್‌ ಇದ್ದು, ಟ್ಯಾಂಕ್‌ಗೆ ನೀರು ಪೂರೈಕೆ ಮಾಡುವ ಪೈಪ್‌ ಹಾಗೂ ಅದರಿಂದ ನೀರು ಪೂರೈಕೆಯಾಗುವ ಟ್ಯಾಂಕ್‌ ಇದೇ ರಸ್ತೆಯ ತಳಭಾಗದಲ್ಲಿದೆ. ಹೀಗಾಗಿ ಗುಡ್ಡ ಕುಸಿಯುವ ವೇಳೆ ಪೈಪ್‌ಲೈನ್‌ ಸಂಪರ್ಕ ಕಡಿತಗೊಂಡರೆ ಭಾರೀ ನಷ್ಟವಾಗಲಿದೆ. ಜತೆಗೆ ಹಲವು ತಿಂಗಳುಗಳ ಕಾಲ ನೀರು ಪೂರೈಕೆಗೂ ತೊಂದರೆ ಎದುರಾಗುವ ಆತಂಕವಿದೆ.

ದ.ಕ. ಜಿಲ್ಲಾಧಿಕಾರಿಗಳಿಂದ ಸಮಸ್ಯೆ ಕುರಿತು ಪರಿಶೀಲನೆಗೆ ಪುರಸಭೆಗೆ ಬಂದಿದೆ. ಅದಕ್ಕೆ ತಡೆಗೋಡೆ ಅಗತ್ಯವಾಗಿದ್ದು, ಹೆಚ್ಚಿನ ಅನುದಾನ ಬೇಕಾಗುತ್ತದೆ. ಆದರೆ ಪುರಸಭೆಯ ಅನುದಾನದಿಂದ ಅದು ಅಸಾಧ್ಯವಾಗಿದೆ. ಹೀಗಾಗಿ ಶಾಸಕರ ಮೂಲಕ ಸರಕಾರದಿಂದ ಅನುದಾನಕ್ಕಾಗಿ ಮನವಿ ಮಾಡಲಾಗುವುದು. ಸಾಮಾನ್ಯ ತಡೆಗೋಡೆಗಿಂತಲೂ ಹೆಚ್ಚು ಬಲಿಷ್ಠ ಇರುವ ತಡೆಗೋಡೆ ಬೇಕಾಗುತ್ತದೆ.-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಪುರಸಭೆ, ಬಂಟ್ವಾಳ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.