ತೆರವುಗೊಳ್ಳದ ಪಾಳು ಬಿದ್ದ ಕಟ್ಟಡ


Team Udayavani, Jan 20, 2021, 2:00 AM IST

ತೆರವುಗೊಳ್ಳದ ಪಾಳು ಬಿದ್ದ ಕಟ್ಟಡ

ಬಂಟ್ವಾಳ: ಸರಕಾರವು ವಿವಿಧ ಇಲಾಖೆಗಳಿಗೆ ಹೊಸ ಕಟ್ಟಡಕ್ಕೆ ಅನುದಾನ ನೀಡಿ ಕಟ್ಟಡ ನಿರ್ಮಾಣ ಮಾಡುತ್ತಿದೆ. ಆದರೆ ಹಳೆ ಕಟ್ಟಡವನ್ನು ಹಾಗೇ ಬಿಟ್ಟು ಪಾಳು ಬೀಳುವಂತೆ ಮಾಡುತ್ತಿದೆ. ಇಂತದ್ದೇ ಕಟ್ಟಡ ಪಾಣೆಮಂಗಳೂರಿನ ಗೂಡಿನ ಬಳಿಯಲ್ಲೊಂದಿದೆ. ಪಶು ಪಾಲನಾ ಇಲಾಖೆಯ ಹಳೆ ಕಟ್ಟಡ ಇದಾಗಿದ್ದು, ಜಾಗ ಪೊಲೀಸ್‌ ಇಲಾಖೆಗೆ ಹಸ್ತಾಂತ ರವಾದರೂ ಹಳೆ ಕಟ್ಟಡ ಹಾಗೇ ಇದೆ.

ಗೂಡಿನಬಳಿಯಲ್ಲಿ ಪಾಣೆ ಮಂಗಳೂರು ಹಳೆ ಸೇತುವೆಯ ಪಕ್ಕದಲ್ಲಿ ಈ ಕಟ್ಟಡವಿದ್ದು, ಗೋಡೆಗಳು ಸುಸ್ಥಿತಿಯಲ್ಲಿದ್ದರೂ, ಅರ್ಧಂಬರ್ಧ ಮೇಲ್ಛಾವಣಿ ಇದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಬಂಟ್ವಾಳದ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಗೂಡಿನಬಳಿಯ ಇನ್ನೊಂದು ಭಾಗದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡ ಬಳಿಕ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡಿತ್ತು.

ಬಂಟ್ವಾಳ  ಸಂಚಾರ   ಪೊಲೀಸ್‌ ಠಾಣೆಗೆ ಸ್ವಂತ ಕಟ್ಟಡ ಇಲ್ಲದೇ ಇರುವು ದರಿಂದ ಪಶುಪಾಲನ ಇಲಾಖೆಯ ಈ ನಿವೇಶನವನ್ನು ಸಂಚಾರ ಠಾಣಾ ಕಟ್ಟಡ ನಿರ್ಮಾಣಕ್ಕಾಗಿ ಪೊಲೀಸ್‌ ಇಲಾಖೆಗೆ ನೀಡಲಾಗಿದೆ. ಆದರೆ ಈ ನಿವೇಶನದಲ್ಲಿ ಠಾಣೆಗೆ ಬೇಕಾದಷ್ಟು ಸ್ಥಳಾವಕಾಶ ಇಲ್ಲದೇ ಇರುವುದರಿಂದ ಠಾಣಾ ಕಟ್ಟಡ ನಿರ್ಮಾಣವಾಗಿಲ್ಲ.

ಜತೆಗೆ ಬೇರೆ ಕಡೆಯೂ ಠಾಣೆಗೆ ಸೂಕ್ತ ಸ್ಥಳಾವಕಾಶ ಸಿಗದೇ ಇರುವುದರಿಂದ ಹುಡುಕಾಟ ಇನ್ನೂ ಮುಂದುವರಿದಿದೆ.

ಪಾಳು ಬಿದ್ದಿದೆ ಕಟ್ಟಡ :

ಪಶುಪಾಲನ ಇಲಾಖೆಯ ಹಳೆ ಕಟ್ಟಡವು ಪಾಳು ಬಿದ್ದುಕೊಂಡಿದ್ದು, ಮೇಲ್ಛಾವಣಿಯ ಮರಮಟ್ಟು ಸಂಪೂರ್ಣ ಅವ್ಯಸ್ಥೆಯಲ್ಲಿದೆ. ಹೀಗಾಗಿ ಹಂಚು ಉದುರುತ್ತಿದ್ದು, ಸುತ್ತಮುತ್ತಲೂ ಮನೆಗಳಿರುವುದರಿಂದ ಯಾರಾದರೂ ಕಟ್ಟಡದ ಒಳಗೆ ಹೋಗಿ ಅಪಾಯ ಸಂಭವಿಸಿದಲ್ಲಿ ಯಾರು ಹೊಣೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ಈ ರೀತಿ ಕಟ್ಟಡಗಳು ಪಾಳು ಬಿದ್ದಾಗ ಅಪಾಯಕಾರಿಯಾಗುವ ಜತೆಗೆ ಅನ್ಯ ಕಾರ್ಯಗಳಿಗೂ ಬಳಕೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆ ಕಟ್ಟಡ ವನ್ನು ತೆರವುಗೊಳಿಸಿದರೆ ಉತ್ತಮ.

ಮತ್ತೂಂದೆಡೆ ಕಟ್ಟಡವಿರುವ ನಿವೇಶನಕ್ಕೆ ಯಾವುದೇ ತಡೆಬೇಲಿ ಇಲ್ಲದೇ ಇರುವುದರಿಂದ ಯಾರಿಗೂ ಪ್ರವೇಶಕ್ಕೆ ಅವಕಾಶವಿದೆ. ಈ ನಿವೇಶನದ ಒಂದಷ್ಟು ಜಾಗ ಈಗಾಗಲೇ ಒತ್ತುವರಿಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಹೀಗಾಗಿ ಸಂಬಂಧಪಟ್ಟ ಜಾಗವನ್ನು ಅಳತೆ ಮಾಡಿ ಸೂಕ್ತ ತಡೆಬೇಲಿ ಹಾಕುವಂತೆ ಆಗ್ರಹಗಳು ಕೇಳಿಬರುತ್ತಿದೆ. ಸಂಬಂಧಪಟ್ಟ ಅಧಿಕಾರಿ ಈ ಕುರಿತು ಯೋಚಿಸಿ ಕ್ರಮ ತೆಗೆದುಕೊಳ್ಳಬೇಕಿದೆ. ಸಂಚಾರ ಪೊಲೀಸ್‌ ಠಾಣೆ ನಿರ್ಮಾಣಕ್ಕೆ ಇಲ್ಲಿ ಸ್ಥಳಾವಕಾಶದ ಕೊರತೆ ಇದ್ದರೆ ಬೇರೆ ಯಾವುದಾದರೂ ಉದ್ದೇಶಗಳಿಗೆ ಬಳಕೆ ಮಾಡುವ ಕುರಿತು ಸರಕಾರಿ ವ್ಯವಸ್ಥೆ ಚಿಂತಿಸಬೇಕಿದೆ.

ಇಲಾಖೆಗೆ ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಹಳೆ ಕಟ್ಟಡದ ನಿವೇಶನವನ್ನು ಕಾನೂನು ಪ್ರಕಾರ ಬಂಟ್ವಾಳ ಸಂಚಾರ ಠಾಣೆಗೆ ಹಸ್ತಾಂತರಿಸಲಾಗಿದೆ. ಹೀಗಾಗಿ ಪ್ರಸ್ತುತ ಆ ನಿವೇಶನವು ನಮ್ಮ ಇಲಾಖೆಯಲ್ಲಿಲ್ಲ.-ಡಾ| ಅವಿನಾಶ್‌,ಮುಖ್ಯ ಪಶುವೈದ್ಯಾಧಿಕಾರಿ, ಬಂಟ್ವಾಳ ಪಶು ಇಲಾಖೆ.

ಗೂಡಿನಬಳಿಯಲ್ಲಿ ಸಂಚಾರ ಠಾಣೆಗೆ ನಿವೇಶನ ಹಂಚಿಕೆಯಾದರೂ, ಅಲ್ಲಿ ಠಾಣೆಗೆ ಬೇಕಾದಷ್ಟು ಸ್ಥಳಾವಕಾಶವಿಲ್ಲ. ಹೀಗಾಗಿ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ಹುಡುಕಲಾಗುತ್ತಿದೆ.-ರಾಜೇಶ್‌ ಕೆ.ವಿ.ಪಿಎಸ್‌ಐ, ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.