ಸೇವಾಭಾವದಿಂದ ಕಾರ್ಯನಿರ್ವಹಿಸಿ
Team Udayavani, Jan 21, 2021, 3:29 PM IST
ಕಲಘಟಗಿ: ಹಿರಿಯರ ಸೇವಾ ಕೈಂಕರ್ಯದ ಫಲವಾಗಿ ದೊರಕಿರುವ ಸರಕಾರಿ ನೌಕರಿಯನ್ನು ಸುವ್ಯವಸ್ಥಿತವಾಗಿ ಸೇವಾ ಮನೋಭಾವದಿಂದ ನಿರ್ವಹಿಸಿದಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಆರೋಪ ಬಾರದಂತೆ ತಡೆಯಲು ಸಾಧ್ಯವೆಂದು ಶಾಸಕ ಸಿ.ಎಂ.ನಿಂಬಣ್ಣವರ ಹೇಳಿದರು. ಇಲ್ಲಿನ ತಹಸೀಲ್ದಾರ್ ಕಚೇರಿಗೆ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಅನಿರೀಕ್ಷಿತ ಭೇಟಿ ನೀಡಿ ಕಚೇರಿಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಹಾಗೂ ಚಲನವಲನ ಪುಸ್ತಕದ ಪರಿಶೀಲನೆ ನಡೆಸಿ ಮಾತನಾಡಿದರು.
ತಾಲೂಕಿನ ವಿವಿಧ ಕಚೇರಿಗಳಲ್ಲಿನ ಹೆಚ್ಚಿನ ಸಂಖ್ಯೆಯ ನೌಕರರು ನಿಗದಿತ ಸಮಯಕ್ಕೆ ಕಚೇರಿಗೆ ಬಾರದೇ ಸಾರ್ವಜನಿಕರ ದೂರು ದುಮ್ಮಾನಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬುದರ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಅನೇಕರು ಸೇವಾ ಸಮಯದಲ್ಲಿ ತಮ್ಮ ಸ್ಥಾನದಲ್ಲಿರದೇ ಸಾರ್ವಜನಿಕರಿಗೆ ಸಮರ್ಪಕವಾಗಿ ಸೇವೆ ಒದಗಿಸುತ್ತಿಲ್ಲ ಎಂಬ ಆಪಾದನೆಗಳೂ ಕೇಳಿ ಬರುತ್ತಲಿದೆ. ಕಂದಾಯ ಇಲಾಖೆ ಸೇರಿದಂತೆ ಬಹುತೇಕ ಕಚೇರಿಗಳಲ್ಲಿ ಏಜಂಟರ ಹಾವಳಿ, ಭ್ರಷ್ಟಚಾರ, ನೌಕರರ ಅನ ಧಿಕೃತ ಗೈರುಗಳ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ತಾವು ಈ ಕುರಿತು ಈಗಾಗಲೇ ಸಭೆ ನಡೆಸುವ ಮೂಲಕ ಎಚ್ಚರಿಕೆಯನ್ನೂ ನೀಡಲಾಗಿದೆ. ಹೀಗಿದ್ದಾಗ್ಯೂ ಎಚ್ಚೆತ್ತುಕೊಳ್ಳದೇ ಇದೇ ಪ್ರವೃತ್ತಿ ಮುಂದುವರಿಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಹಿರಿಯ ಅಧಿಕಾರಿಗಳಿಗೆ ಲಿಖೀತ ನಿರ್ದೇಶನ ನೀಡಬೇಕಾದೀತೆಂದು ಹೇಳಿದರು.
ಇದನ್ನೂ ಓದಿ:ನಾಳೆ ಕಲಬುರಗಿಯಲ್ಲಿ ಶಿವಾಚಾರ್ಯರ ಸಮಾವೇಶ
ಪ್ರತಿಯೊಬ್ಬರೂ ಸೇವಾ ಮನೋಭಾವ ರೂಢಿಸಿಕೊಳ್ಳುವಂತೆ ಸೂಚಿಸಿದರಲ್ಲದೇ ತಪ್ಪೆಸಗುವವರ ಮೇಲೆ ಕ್ರಮ ಜರುಗಿಸಿ ಮಾಹಿತಿ ನೀಡುವಂತೆ ತಹಸೀಲ್ದಾರ್ಗೆ ಸೂಚಿಸಿದರು. ತಪ್ಪಿತಸ್ಥ ಹಲವರಿಗೆ ಈಗಾಗಲೇ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಮುಂದಿನ ಕ್ರಮಕ್ಕೆ ಹಿರಿಯ ಅಧಿ ಕಾರಿಗಳ ಮಾರ್ಗದರ್ಶನ ಪಡೆಯಲಾಗುವುದೆಂದು ತಹಸೀಲ್ದಾರ್ ಅಶೋಕ ಶಿಗ್ಗಾವಿ ತಿಳಿಸಿದರು. ಶಿರಸ್ತೇದಾರರಾದ ಬಸವರಾಜ ಅಂಗಡಿ, ಸುರೇಶ ಅಡವಿ, ಬಸವರಾಜ ತಾಮರೆ ಸೇರಿದಂತೆ ಬಹುತೇಕ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ