ತೊಗರಿ ಖರೀದಿಗೆ ಸಹಕರಿಸಲು ಅನ್ನದಾತರಿಗೆ ಸ್ವಾಮೀಜಿ ಸಲಹೆ
ಈ ಭಾಗದ ಪ್ರತಿಯೊಬ್ಬ ರೈತರ ತೊಗರಿ ಖರೀದಿಯಾಗುವವರೆಗೂ ಎಲ್ಲವನ್ನು ಪ್ರಾಮಾಣಿಕವಾಗಿ ಖರೀದಿ ಮಾಡಲಾಗುವುದು
Team Udayavani, Jan 21, 2021, 5:33 PM IST
ದೇವರಹಿಪ್ಪರಗಿ: ದೇವರಹಿಪ್ಪರಗಿ ವ್ಯಾಪ್ತಿಯ ಎಲ್ಲ ರೈತ ಸಮುದಾಯದ ಅನುಕೂಲಕ್ಕಾಗಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದ್ದು ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸದಯ್ಯನಮಠದ ವೀರ ಗಂಗಾಧರ ಸ್ವಾಮೀಜಿ ಹೇಳಿದರು. ಪಟ್ಟಣದ ಸಿಂದಗಿ ರಸ್ತೆಯಲ್ಲಿನ ತೊಗರಿ ಖರೀದಿ ಕೇಂದ್ರದಲ್ಲಿ ತೂಕದ ಯಂತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರೈತರ ಶ್ರಮಕ್ಕೆ ಖರೀದಿ ಕೇಂದ್ರಗಳು ಯೋಗ್ಯ ದರ ನೀಡಿ ಸಹಕಾರ ನೀಡುತ್ತಿವೆ. ರೈತರು ಸಹ ಶಾಂತಿ, ಸಹನೆಯಿಂದ ಸರದಿ ಪ್ರಕಾರ ಬೆಳೆ ನೀಡಲು ಮುಂದಾಗಬೇಕು ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕಾಶೀನಾಥ ಮಸಬಿನಾಳ ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ಕ್ವಿಂಟಲ್ಗೆ ಆರು ಸಾವಿರ ರೂ. ದರದಂತೆ ಪ್ರತಿ ರೈತನಿಂದ 20 ಕ್ವಿಂಟಲ್ ತೊಗರಿ ಖರೀದಿಸಲಾಗುವುದು. ಈ ಭಾಗದ ಪ್ರತಿಯೊಬ್ಬ ರೈತರ ತೊಗರಿ ಖರೀದಿಯಾಗುವವರೆಗೂ ಎಲ್ಲವನ್ನು ಪ್ರಾಮಾಣಿಕವಾಗಿ ಖರೀದಿ ಮಾಡಲಾಗುವುದು ಎಂದು ಹೇಳಿ ರೈತರ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಪಿಕೆಪಿಎಸ್ ಕಾರ್ಯದರ್ಶಿ ನಿಂಗು ಜಡಗೊಂಡ, ಬಂಡೆಪ್ಪ ದಿಂಡವಾರ, ಬಾಬುಗೌಡ ಪಾಟೀಲ, ಕಾಸು ಜಲಕತ್ತಿ, ಬಸಪ್ಪ ಮಸಬಿನಾಳ, ಶ್ರೀಧರ ನಾಡಗೌಡ, ಬಸಯ್ಯ ಮಲ್ಲಿಕಾರ್ಜುನಮಠ, ಜಯರಾಮ್ ನಾಡಗೌಡ, ವಿನೋದ ಪಾಟೀಲ, ಯಮನೂರಿ ಸಣ್ಣಕ್ಕಿ, ಕಾಶೀನಾಥ ರಾಮಗೊಂಡ, ನಿಂಗನಗೌಡ ಬಿರಾದಾರ, ರಮೇಶ ಮ್ಯಾಕೇರಿ, ವೀರೇಶ ಕುದರಿ,ಸುರೇಶ ಒಂಟೆತ್ತಿನ, ಬಸವರಾಜ ಹಳಿಮನಿ, ದಯಾನಂದ ರಾಠೊಡ, ಶಿವಯ್ಯ ಸದಯ್ಯನಮಠ, ನಿಂಗು ನಾಗರಾಳ, ಪಿಂಟು ಭಾಸುತ್ಕರ್, ಗೌಡು ಯಾಳಗಿ, ಸಾಹೇಬಗೌಡ ಮದ್ದರಕಿ ಸೇರಿದಂತೆ ಸಿಬ್ಬಂದಿ, ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ