ಟ್ರ್ಯಾಕ್ಟರ್‌ ಪರೇಡ್‌ಗೆ ಹೊರಟ ರೈತರು


Team Udayavani, Jan 21, 2021, 8:09 PM IST

Farmers out for the Tractor Parade

ಮೈಸೂರು: ದೆಹಲಿಯಲ್ಲಿ ಜ.26ರಂದು ನಡೆಯುವ ಪ್ರತಿಭಟನಾಕಾರರ ಟ್ರ್ಯಾಕ್ಟರ್‌ ಪರೇಡ್‌ನ‌ಲ್ಲಿ ಭಾಗವಹಿಸಲು ಮೈಸೂರಿನಿಂದ ಹೊರಟ ರೈತರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಐಕ್ಯ ಹೋರಾಟ ಸಮಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ನಗರದ ಗನ್‌ಹೌಸ್‌ ಬಳಿ ಇರುವ ಕುವೆಂಪು ವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹಾಸನದ ರೈತ ಮುಖಂಡ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಭಾಗದಿಂದ ಹೊರಟ ರೈತರಿಗೆ ಬೀಳ್ಕೊಡುಗೆ ನೀಡಲಾಯಿತು. ಮೈಸೂರಿನಿಂದ ಹೊರಟ ರೈತರು ಚಾಮರಾಜನಗರದ ಅಮೃತಭೂಮಿಯಲ್ಲಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಮಾಧಿಗೆ ನಮಸ್ಕರಿಸಿ ದೆಹಲಿ ಕಡೆಗೆ ತೆರಳಿದರು. ರೈತರಿಗೆ ಊಟೋಪಚಾರದ ವ್ಯವಸ್ಥೆ ಮಾಡಿ, ಆತ್ಮಸ್ಥೆçರ್ಯ ತುಂಬಿ, ದಿನಸಿ, ಅವಶ್ಯಕ ವಸ್ತುಗಳನ್ನು ನೀಡಿ ಕಳುಹಿಸಿಕೊಡಲಾಯಿತು.

ಈ ವೇಳೆ ರೈತ ಮುಖಂಡ ಅರಳಾಪುರ ಮಂಜೇಗೌಡ ಮಾತನಾಡಿ, ಕೊರೆಯುವ ಚಳಿಯಲ್ಲೂ ಎರಡು ತಿಂಗಳಿಂದ ಪಂಜಾಬ್‌ ಮತ್ತು ಹರಿಯಾಣ ರೈತರು ಧರಣಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸೂಕ್ತ ಸ್ಪಂದನೆ ದೊರೆಯದ ಕಾರಣ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಕರ್ನಾಟಕದಿಂದ ನೂರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುತ್ತಿದ್ದಾರೆ. ಬುಧವಾರ ಚನ್ನರಾಯಪಟ್ಟಣಕ್ಕೆ ತೆರಳಿ, ಅಲ್ಲಿರುವ ರೈತರ ಜೊತೆಗೂಡಿ ಗುರುವಾರ ದೆಹಲಿಗೆ ಪ್ರಯಾಣ ಆರಂಭಿಸಲಾಗುವುದು ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಜನವರಿ ಬಳಿಕ ಚಳಿ ಕಡಿಮೆಯಾಗಲಿದ್ದು, ಆಗ ರಾಜ್ಯದಿಂದಲೂ ಇನ್ನಷ್ಟು ರೈತರು ದೆಹಲಿಗೆ ತೆರಳಿದ್ದಾರೆ. ಈಗಾಗಲೇ ತಮಿಳುನಾಡು ಮತ್ತು ಕೇರಳದಿಂದ ರೈತರು ಹೊರಡುತ್ತಿದ್ದಾರೆ. ಅದೇ ರೀತಿ ಫೆಬ್ರವರಿಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರೈತ ಮುಖಂಡ ಪ್ರಸನ್ನ ಗೌಡ, ಅತ್ತಹಳ್ಳಿ ದೇವರಾಜು, ಪಿ.ಮರಂಕಯ್ಯ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ:ಆಲೂಗಡ್ಡೆ ಅಂಗಾಂಶ ಕೃಷಿ ಕ್ಷೇತ್ರೋತ್ಸವ

ನಾಲ್ಕು ಟೆಂಪೋದಲ್ಲಿ 100 ಮಂದಿ ಪಯಣ

100 ಮಂದಿ ರೈತರು ನಾಲ್ಕು ಟೆಂಪೋಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದೇವೆ. ಟೆಂಪೋದಲ್ಲಿ ಮಲಗಲು ಹಾಸಿಗೆ, ಸೇರಿದಂತೆ ಅವಶ್ಯ ವಸ್ತುಗಳನ್ನು

ಶೇಖರಿಸಿಕೊಂಡಿದ್ದೇವೆ. ಐದು ದಿನಗಳ ಕಾಲ ಪ್ರಯಾಣಿಸಿ ಜ.25ಕ್ಕೆ ದೆಹಲಿ ತಲುಪಲಿದ್ದೇವೆ. ಇವೆರಡು ಟೆಂಪೋದೊಂದಿಗೆ ಮೂರು ಕಾರು ಸಹ ದೆಹಲಿಗೆ ತೆರಳಲಿದೆ. 2ನೇ ಹಂತದಲ್ಲಿ ರಾಜ್ಯದ ವಿವಿಧ ಭಾಗದ 300 ರೈತರು ಜ.23ಕ್ಕೆ ಹೊರಟು ರೈಲಿನ ಮೂಲಕ ದೆಹಲಿಗೆ ಆಗಮಿಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರ್ಯಾಲಿ ಪ್ರಯುಕ್ತ ಐಕ್ಯ ಹೋರಾಟದಿಂದ ಬೈಕ್‌ ರ್ಯಾಲಿ ಪರೇಡ್‌ ನಡೆಸಲಾಗುವುದು ಎಂದು ರೈತ ಮುಖಂಡ ಅರಳಾಪುರ ಮಂಜೇಗೌಡ ತಿಳಿಸಿದರು.

ಅಗತ್ಯ ವಸ್ತುಗಳ ವಿತರಣೆ

ಬೀಳ್ಕೊಡುಗೆ ವೇಳೆ ರೈತರಿಗೆ 50 ಲೀಟರ್‌ ಡೀಸೆಲ್‌, 50 ಕೆ.ಜಿ. ಅಕ್ಕಿ, ತೆಂಗಿನಕಾಯಿ ಮತ್ತು ತರಕಾರಿ 25 ಕೆ.ಜಿ.ಗೂ ಅಧಿಕ, 5 ಸಾವಿರ ರೂ. ನಗದು ಹಾಗೂ ಅಕ್ಷರ ದಾಸೋಹ ಸಂಸ್ಥೆಯ ರಾಜೇಂದ್ರ ಅವರಿಂದ ನೂರು ಮಂದಿಗೆ ಆಗುವಷ್ಟು ಸೋಪು, ಬ್ರಶ್‌ ಇತ್ಯಾದಿ ವಸ್ತುಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.