ಹಕ್ಕಿ ಜ್ವರದ ಹಿನ್ನೆಲೆ: ಅರ್ಧ ಬೇಯಿಸಿದ ಮೊಟ್ಟೆ ತಿನ್ನಬೇಡಿ ಎಂದ ಆಹಾರ ಪ್ರಾಧಿಕಾರ
Team Udayavani, Jan 21, 2021, 9:19 PM IST
ನವದೆಹಲಿ: “ಹಾಫ್ ಬಾಯ್ಲ್ಡ್ (ಅರ್ಧ ಬೇಯಿಸಿದ) ಮೊಟ್ಟೆ, ಸರಿಯಾಗಿ ಬೇಯಿಸದ ಕೋಳಿ ಮಾಂಸ ಸೇವನೆ ಬೇಡ’ ಹೀಗೆಂದು ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಗುರುವಾರ ಸುತ್ತೋಲೆ ಹೊರಡಿಸಿದೆ. ದೇಶದ ಹತ್ತು ರಾಜ್ಯಗಳಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರ ಆಹಾರ ಸೇವನೆಯ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಕಟಿಸಿದೆ. ಸರಿಯಾದ ರೀತಿಯಲ್ಲಿ ಬೇಯಿಸಿದ ಮೊಟ್ಟೆ, ಮಾಂಸವನ್ನು ಸೇವಿಸುವುದರಲ್ಲಿ ಯಾವುದೇ ಆತಂಕ ಇಲ್ಲ ಎಂದಿದೆ ಪ್ರಾಧಿಕಾರ. ಹೀಗಾಗಿ ಗೊಂದಲ ಮತ್ತು ಭೀತಿಗೆ ಒಳಗಾಗುವ ಅಗತ್ಯವಿಲ್ಲ ಎಂದು ಸಲಹೆ ನೀಡಿದೆ. ಹಕ್ಕಿ ಜ್ವರಕ್ಕೆ ತುತ್ತಾಗಿರುವ ಪಕ್ಷಿಗಳು ಮೊಟ್ಟೆ ಇಡುವುದಿಲ್ಲ. ಹಕ್ಕಿ ಜ್ವರದ ಆರಂಭಿಕ ಹಂತದಲ್ಲಿ ಮೊಟ್ಟೆಗಳನ್ನಿರಿಸಿದ್ದರೆ, ಅವುಗಳಲ್ಲಿ ವೈರಸ್ ಇರುವ ಸಾಧ್ಯತೆ ಇದೆ.
ಇದರ ಜತೆಗೆ ಮಾಂಸ ಮಾರಾಟದ ಸ್ಥಳದಲ್ಲಿಯೂ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮುಕ್ತವಾಗಿ ಮಾಂಸ ಮಾರಾಟಕ್ಕೆ ಇಡುವುದೂ ಸೂಕ್ತವಲ್ಲ ಎಂದಿದೆ. ಮಳಿಗೆಗಳಿಗೆ ಹಕ್ಕಿ ಜ್ವರ ಪೀಡಿತ ಪ್ರದೇಶದಿಂದ ಜೀವಂತ ಅಥವಾ ಸತ್ತು ಹೋಗಿರುವ ಪಕ್ಷಿಗಳನ್ನು ತರಬಾರದು ಎಂದಿದೆ ಪ್ರಾಧಿಕಾರ.
ಇದನ್ನೂ ಓದಿ:ಗ್ರಾಹಕರ ಬರ್ಗರನ್ನೇ ಸ್ವಾಹಾ ಮಾಡಿದ ಡೆಲಿವರಿ ಬಾಯ್!
ಮಾಂಸ ಮಾರಾಟ ಮಾಡುವವರು ಕೈಗಳಿಗೆ ಗ್ಲೌಸ್, ಮಾಸ್ಕ್ ಧರಿಸಿರಬೇಕು ಮತ್ತು ಆಗಾಗ ಕೈಗಳನ್ನು ತೊಳೆದು ಸ್ವತ್ಛಗೊಳಿಸಬೇಕು ಎಂದು ಸೂಚನೆಯಲ್ಲಿ ಉಲ್ಲೇಖೀಸಲಾಗಿದೆ. ಒಂದು ಬಾರಿ ಮಾಂಸ ಕತ್ತರಿಸಲು ಉಪಯೋಗಿಸಿದ ಸಾಧನಗಳನ್ನು ಶುಚಿಗೊಳಿಸಿ ಬಳಕೆ ಮಾಡಬೇಕೆಂದೂ ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ