ಅತೃಪ್ತಿ ಮುಂದುವರಿಸಿದರೆ ಸಚಿವರ ಮನೆಮುಂದೆ ಧರಣಿ ಮಾಡುತ್ತೇವೆ: ಬಿಜೆಪಿ ಶಾಸಕರ ವಾರ್ನಿಂಗ್
Team Udayavani, Jan 22, 2021, 11:01 AM IST
ಬೆಂಗಳೂರು: ಸಚಿವ ಸ್ಥಾನ ಸಿಗುವವರೆಗೂ ಸಚಿವ ಸ್ಥಾನಕ್ಕಾಗಿ ಕೇಳುತ್ತಿದ್ದರು, ಸಚಿವ ಸ್ಥಾನ ಸಿಕ್ಕಿದಮೇಲೆ ಖಾತೆಗಾಗಿ ಅಸಮಾಧಾನ ಮಾಡುವುದು ಸರಿಯಲ್ಲ. ಇದರಿಂದ ಪಕ್ಷ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಯಾರು ಕೂಡ ಭಿನ್ನಮತೀಯ ಚಟುವಟಿಕೆ, ಅಸಮಾಧಾನ ಹೊರ ಹಾಕಬಾರದು. ಎಲ್ಲರೂ ಅನುಸರಿಸಿಕೊಂಡು ಮಾಡಿಕೊಂಡು ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.
ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಈ ರೀತಿಯ ಭಿನ್ನಮತೀಯ ಚಟುವಟಿಕೆಗಳು, ಅಸಮಾಧಾನವನ್ನು ಯಾವುದೇ ಸಚಿವರು ಹೊರ ಹಾಕಬಾರದು. ಇದೇ ರೀತಿ ಮುಂದುವರೆಸಿದರೆ ಅಂತಹ ಸಚಿವರ ಮನೆ ಮುಂದೆ ನಾವುಗಳೇ ಧರಣಿ ಮಾಡಬೇಕಾಗುತ್ತದೆ ಎಂದು ಅಸಮಾಧಾನಿತ ಶಾಸಕರಿಗೆ ವಿರೂಪಾಕ್ಷಪ್ಪ ಎಚ್ಚರಿಕೆ ನೀಡಿದರು.
ನಾನು ಭಿನ್ನಮತೀಯ ಚಟುವಟಿಕೆಗಳಲ್ಲಿ ತೊಡಗಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ನೀರಾವರಿ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ಜೊತೆ ಮಾತನಾಡಿದ್ದೇನೆ ಆದರೆ ನಾನು ಯಾವುದೇ ಭಿನ್ನಮತಿಯ ಚಟುವಟಿಕೆ ಮಾಡಿಲ್ಲ ಎಂದು ವಿರೂಪಾಕ್ಷಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ