ಸಿಟಿ ಬಸ್‌: ವಿದ್ಯಾರ್ಥಿಗಳಿಗೆ ಟಿಕೆಟ್‌ ರಹಿತ ಸ್ಮಾರ್ಟ್‌ ಬಸ್‌ ಪಾಸ್‌ !


Team Udayavani, Jan 23, 2021, 7:00 AM IST

ಸಿಟಿ ಬಸ್‌: ವಿದ್ಯಾರ್ಥಿಗಳಿಗೆ ಟಿಕೆಟ್‌ ರಹಿತ ಸ್ಮಾರ್ಟ್‌ ಬಸ್‌ ಪಾಸ್‌ !

ಮಹಾನಗರ: ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿ ಪ್ರಯಾಣಿಸುವ ಶಾಲಾ -ಕಾಲೇಜು ವಿದ್ಯಾರ್ಥಿಗಳಿಗೆ ಟಿಕೆಟ್‌ ರಹಿತ ಸೇವೆ ಒದಗಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಸಿಟಿ ಬಸ್‌ ಮಾಲಕರ ಸಂಘವು ಸ್ಮಾರ್ಟ್‌ ಬಸ್‌ ಪಾಸ್‌ ವ್ಯವಸ್ಥೆಯನ್ನು ಪರಿಚಯಿಸಿದೆ.

ಈ ನೂತನ ಯೋಜನೆಯಿಂದಾಗಿ ಓರ್ವ ವಿದ್ಯಾರ್ಥಿಗೆ 3.47 ರೂ.ರಷ್ಟು ಕಡಿಮೆ ದರದಲ್ಲಿ ಬಸ್‌ ಪ್ರಯಾಣ ಮಾಡುವಂತಹ ಅವಕಾಶ ನೀಡಲಾಗಿದೆ. ಈ ಬಸ್‌ ಪಾಸ್‌ ಅನ್ನು ಚಲೋ ಕಾರ್ಡ್‌ನಲ್ಲಿ ಖರೀದಿಸಬಹುದಾಗಿದ್ದು, ಖರೀದಿಸಿದ ದಿನದಿಂದ 30 ದಿನಗಳವರೆಗೆ ಚಾಲ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳು ತಮ್ಮ ಏಕಮುಖ ಪ್ರಯಾಣದ ದರ ಮತ್ತು ದಿನದಲ್ಲಿ ಕೈಗೊಳ್ಳುವ ಪ್ರಯಾಣದ ಸಂಖ್ಯೆಗೆ ಅನುಗುಣವಾಗಿ ಪ್ಲಾನ್‌ ಅನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಸಾಮಾನ್ಯವಾಗಿ ಒಂದು ಪ್ರಯಾಣಕ್ಕೆ 10 ರೂ. ನೀಡುವ ವಿದ್ಯಾರ್ಥಿಯು 434 ರೂ.ನ ಬಸ್‌ ಪಾಸ್‌ ಪಡೆದರೆ, ಆತ 30 ದಿನಗಳಲ್ಲಿ 104 ಪ್ರಯಾಣಗಳನ್ನು ಕೈಗೊಂಡರೆ, ಆಗ ತಲಾ ಒಂದು ಪ್ರಯಾಣದ ದರ ಕೇವಲ 3.47 ರೂ.ಗೆ ಆಗುತ್ತದೆ.

ಬಸ್‌ ಪಾಸ್‌ ಪಡೆಯುವುದು ಹೇಗೆ? :

ವಿದ್ಯಾರ್ಥಿಗಳು ಬಸ್‌ ಪಾಸ್‌ ಅನ್ನು ಹಂಪನಕಟ್ಟೆಯ ಮಿಲಾಗ್ರಿಸ್‌ ಕಟ್ಟದಲ್ಲಿರುವ ದ.ಕ. ಬಸ್‌ ಮಾಲಕರ ಸಂಘದ ಕಚೇರಿ, ಸ್ಟೇಟ್‌ಬ್ಯಾಂಕ್‌ ಬಳಿಯ ಸಿಟಿ ಟವರ್‌ 2ನೇ ಮಹಡಿಯಲ್ಲಿರುವ ಚಲೋ ಕಚೇರಿ, ಬಲ್ಮಠರಸ್ತೆಯ ಹಂಪನಕಟ್ಟೆಯಲ್ಲಿರುವ ಮಾಂಡವಿ ಮೋಟರ್ಸ್‌ ಎದುರಿನ ಸಾಗರ್‌ ಟೂರಿಸ್ಟ್‌ನಲ್ಲಿ ಪಡೆಯಬಹುದಾಗಿದೆ.

ವಿದ್ಯಾರ್ಥಿ ಬಸ್‌ ಪಾಸ್‌ಗೆ ಒಂದಿ ಬಾರಿ 50 ರೂ. ಪಾವತಿಸಿ ನೋಂದಣಿ ಮಾಡಬೇಕು. ವಿದ್ಯಾರ್ಥಿಗಳು ಅರ್ಜಿ ಫಾರಂ ಅನ್ನು ಭರ್ತಿ ಮಾಡಿ, ಅದರಲ್ಲಿ ಆಯಾ ಕಾಲೇಜು/ಶಾಲೆಗಳ ಮುಖ್ಯಸ್ಥರಿಂದ ಸಹಿ ಮಾಡಿಸಿ ಮೊಹರು (ಸೀಲ್‌) ಹಾಕಿಸಿಕೊಂಡು ಮೇಲೆ ಈ ಮೇಲಿನ ಯಾವುದೇ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಬಳಿಕ ತಮ್ಮ ಆಯ್ಕೆಯ ಪ್ಲ್ರಾನ್‌ ಅನ್ನು ಆಯ್ಕೆ ಮಾಡಿ ಅದನ್ನು ಚಲೋ ಕಾರ್ಡ್‌ಗೆ ಲೋಡ್‌ ಮಾಡಬೇಕು. ವಿದ್ಯಾರ್ಥಿ ಪಾಸ್‌ಗಳನ್ನು ಜ. 22ರಿಂದ ನೀಡಲಾಗುತ್ತಿದೆ.

ಸಿಟಿ ಬಸ್‌ ಮಾಲಕರ ಸಂಘದಿಂದ ವಿದ್ಯಾರ್ಥಿಗಳಿಗೆ ವಿಶೇಷ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಸ್ಮಾರ್ಟ್‌ ಬಸ್‌ ಪಾಸ್‌ಗಳನ್ನು ಉಪಯೋಗಿಸುವುದರಿಂದ ಬಸ್‌ ಪ್ರಯಾಣವು ನಗದು ರಹಿತವಾಗಿರುತ್ತದೆ. ಕೊರೊನಾ ಸಮಯದಲ್ಲಿ ನಗದು ನಿಯಮಯದಿಂದಾಗುವ ಸಂಪರ್ಕ ಇಲ್ಲವಾಗಿಸಿ ಸುರಕ್ಷೆ ನೀಡುತ್ತದೆ.ದಿಲ್‌ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅದ್ಯಕ್ಷ

 

ಟಾಪ್ ನ್ಯೂಸ್

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.