ದಿಲ್ಲಿಯಲ್ಲಿ ವಿಜಯನಗರ ವೈಭವ
Team Udayavani, Jan 23, 2021, 7:05 AM IST
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ದಿಲ್ಲಿಯಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಹಂಪಿಯ ವಿಜಯನಗರ ಸಾಮ್ರಾಜ್ಯದ ವೈಭವ ಅನಾವರಣಗೊಳ್ಳಲಿದೆ. ಹಂಪಿಯ ಕೇಂದ್ರಬಿಂದುವಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಭಗವಾನ್ ಹನುಮನ ಜನ್ಮ ಸ್ಥಳವೆನ್ನಲಾದ ಅಂಜನಾದ್ರಿ ಬೆಟ್ಟ, ಅದರ ಮಗ್ಗುಲಿಗೆ ಸಾಮ್ರಾಟ ಕೃಷ್ಣದೇವರಾಯನಿಗೆ 1509ರಲ್ಲಿ ನಡೆದ ಪಟ್ಟಾಭಿಷೇಕ ಸಮಾರಂಭದ ಶ್ರೀಮಂತಿಕೆ ಸ್ತಬ್ಧಚಿತ್ರದಲ್ಲಿ ಮೈದಳೆದಿದೆ.
ಸಾಮಾನ್ಯವಾಗಿ ಸ್ತಬ್ಧಚಿತ್ರದೊಂದಿಗೆ 30 ಕಲಾವಿದರು ನೇರ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಕೋವಿಡ್ ಕಾರಣಕ್ಕೆ ಈ ಬಾರಿ 12 ಮಂದಿಗೆ ಸೀಮಿತಗೊಳಿಸಲಾಗಿದೆ. ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು (8 ಕಲಾವಿದರು, 4 ಕಲಾವಿದೆಯರು) ಸ್ತಬ್ಧಚಿತ್ರ ಮೆರವಣಿಗೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಾ ನಿರ್ದೇಶಕ ಶಶಿಧರ ಅಡಪ ನೇತೃತ್ವದ ತಂಡ ಸ್ತಬ್ಧಚಿತ್ರದ ವಿನ್ಯಾಸ ರೂಪಿಸಿದ್ದು, 100ಕ್ಕೂ ಹೆಚ್ಚು ಕುಶಲಕರ್ಮಿಗಳು, ಸಹಾಯಕರು, ತಂತ್ರಜ್ಞರು 40 ದಿನ ನಿರಂತರವಾಗಿ ಕಾರ್ಯನಿರ್ವಹಿಸಿ ಅಂತಿಮ ರೂಪ ನೀಡಿದ್ದಾರೆ.
ವಿಶೇಷಗಳೇನು? :
ಸ್ತಬ್ಧಚಿತ್ರದಲ್ಲಿ ಕತ್ತಿ- ಗುರಾಣಿ ಹಿಡಿದ ಮಹಿಳಾ ಯೋಧರಿಗೆ ಅವಕಾಶ ನೀಡಲಾಗಿದೆ. ಜತೆಗೆ ಚಾಮರ ಹಿಡಿದ ಪುರುಷರಿರಲಿದ್ದಾರೆ. ವಿಜಯನಗರ ಸಾಮ್ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಯೋಧರಿದ್ದರೆಂಬ ಕಾರಣಕ್ಕೆ ಮಹಿಳಾ ಯೋಧರಿಗೆ ಮಹತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್