ಅಮಾನತ್ತಿನಲ್ಲಿ ಇಡಲು ಸಾಧ್ಯವೇ?
Team Udayavani, Jan 23, 2021, 6:20 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಮೂರು ಕೃಷಿ ಕಾಯ್ದೆಗಳ ಬಗ್ಗೆ ಕೇಂದ್ರ ಸರಕಾರ ಮತ್ತು ರೈತ ಮುಖಂಡರ ನಡುವೆ ಹಗ್ಗಜಗ್ಗಾಟದ ನಡುವೆಯೇ ಕಾನೂನಾತ್ಮಕ ಜಿಜ್ಞಾಸೆಯೊಂದು ತಲೆದೋರಿದೆ. ನಿಜಕ್ಕೂ ಕೇಂದ್ರ ಸರಕಾರಕ್ಕೆ ತನ್ನ ಮೂರು ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷ ಅಮಾನತಿನಲ್ಲಿ ಇಡಲು ಅಧಿಕಾರವಿದೆಯೇ ಎಂಬ ಪ್ರಶ್ನೆ ಎದ್ದಿದೆ.
ಸಂಸದೀಯ ತಜ್ಞರ ಪ್ರಕಾರ, ಕೇಂದ್ರ ಸರಕಾರಕ್ಕೆ ಒಮ್ಮೆ ಸಂಸತ್ನಲ್ಲಿ ಪಾಸಾದ ಯಾವುದೇ ಕಾಯ್ದೆಗಳನ್ನು ಅಮಾನತಿನಲ್ಲಿ ಇಡಲು ಅಥವಾ ರದ್ದುಗೊಳಿಸಲು ಅಧಿಕಾರವಿಲ್ಲ. ಇಂಥ ಅಧಿಕಾರವಿರುವುದು ಸಂಸತ್ ಮತ್ತು ಸುಪ್ರೀಂ ಕೋರ್ಟ್ಗೆ ಮಾತ್ರ. ಈಗಾಗಲೇ ಸುಪ್ರೀಂ ಕೋರ್ಟ್ ಮೂರು ಕಾಯ್ದೆಗಳನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇರಿಸಿದೆ. ಆದರೆ ಕೇಂದ್ರ ಸರಕಾರ ರೈತರ ಮುಂದೆ ಒಂದೂವರೆ ವರ್ಷಗಳ ಕಾಲ ಅಮಾನತಿನಲ್ಲಿ ಇಡುತ್ತೇವೆ ಎಂದು ಹೇಳಿದೆ. ಈ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆಯೇ ಎಂದು ಬಿಜೆಪಿಯಿಂದ ಬಂಡಾಯವೆದ್ದು ಹೊರಹೋಗಿರುವ ಯಶವಂತ ಸಿನ್ಹಾ ಪ್ರಶ್ನಿಸಿದ್ದಾರೆ.
ಸಂವಿಧಾನದಲ್ಲೇ ಪ್ರಸ್ತಾವವಿಲ್ಲ: ವಿಶೇಷವೆಂದರೆ ಒಮ್ಮೆ ಸಂಸತ್ನಲ್ಲಿ ಅಂಗೀಕಾರಕೊಂಡ ಕಾಯ್ದೆಯನ್ನು ಅಮಾನತಿನಲ್ಲಿ ಇಡುವುದು ಅಥವಾ ರದ್ದು ಮಾಡುವ ಬಗ್ಗೆ ಪ್ರಸ್ತಾವವೇ ಇಲ್ಲ. ಆದರೆ ಸಚಿವರೊಬ್ಬರು ಹೇಳುವ ಪ್ರಕಾರ, ಕಾಯ್ದೆಗಳ ಕುರಿತಾಗಿ ಹೊರಡಿಸಲಾಗಿರುವ ಗೆಜೆಟ್ ನೋಟಿಫಿಕೇಶನ್ ಅನ್ನು ರದ್ದು ಮಾಡಬಹುದು. ಇದಕ್ಕಾಗಿ ಹೊಸ ನೋಟಿಫಿಕೇಶನ್ ಹೊರಡಿಸಬೇಕು ಅಷ್ಟೇ. ಇದಕ್ಕಾಗಿ ಸಂಸತ್ಗೆ ಮತ್ತೆ ಹೋಗಬೇಕಾಗಿಲ್ಲ ಎಂದು ಹೇಳಿದ್ದಾರೆ.
ಆದರೆ ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಡಿ.ಟಿ. ಆಚಾರಿ ಅವರು ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯ ಹೇಳುತ್ತಾರೆ. ಸರಕಾರಕ್ಕೆ ಕೇವಲ ಜಾರಿ ಮಾಡುವ ಅಧಿಕಾರವಿದೆ. ವಾಪಸ್ ತೆಗೆದುಕೊಳ್ಳುವ ಅಥವಾ ಅಮಾನತಿನಲ್ಲಿ ಇಡುವ ಅಧಿಕಾರವಿಲ್ಲ ಎಂದಿದ್ದಾರೆ. ಇದನ್ನೇ ಲೋಕಸಭೆಯ ಮತ್ತೂಬ್ಬ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಕೂಡ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ