ಹುಣಸೋಡು ದುರಂತ: ಸಿಎಂ ಸ್ಥಳ ಪರಿಶೀಲನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಬಿಎಸ್ ವೈ
Team Udayavani, Jan 23, 2021, 10:37 AM IST
ಬೆಂಗಳೂರು: ಹುಣಸೋಡು ದುರ್ಘಟನೆ ಕುರಿತು ಮಾಹಿತಿ ನೀಡಿದ ಸಿಎಂ ಬಿಎಸ್ ವೈ, ಶಿವಮೊಗ್ಗ ಪ್ರವಾಸ ಮಾಡುತ್ತೇನೆ. ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಯಾರಾದರೂ ಗಣಿಗಾರಿಕೆ ಮಾಡುತ್ತೇವೆ ಅಂದರೆ ಲೈಸೆನ್ಸ್ ಇರಬೇಕು. ಈಗಾಗಲೇ ಸಂಸದರು, ಜಿಲ್ಲಾಧಿಕಾರಿ, ಗಣಿ ಸಚಿವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿದು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ.
ಅಕ್ರಮ ಗಣಿಗಾರಿಕೆ ತಡೆಯೋಕೆ ಕ್ರಮ ವಹಿಸಲಾಗುವುದು. ಈ ಸ್ಫೋಟಕ್ಕೆ ಕಾರಣವೇನು ? ಲಾರಿಯಲ್ಲಿ ಜೆಲೆಟಿನ್ ಕಡ್ಡಿ ಮತ್ತು ಡೈನಮೈಟ್ಗಳನ್ನು ತರಲು ಅನುಮತಿ ನಿಡಿದವರಾರು ? ಹೇಗೆ ಘಟನೆ ನಡೆಯಿತು ? ಎನ್ನುವುದನ್ನು ಪರಿಶೀಲನೆ ನಡೆಸಲಾಗುವುದು. ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟ ತಪ್ಪಿತಸ್ಥರ ವಿರುದ್ಧ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಕೋವಿಡ್ ರೂಪಾಂತರಿ ವೈರಸ್ ಹೆಚ್ಚು ಅಪಾಯಕಾರಿ: ಬೋರಿಸ್ ಜಾನ್ಸನ್
ಅಕ್ರಮವಾದ ಗಣಿಗಾರಿಕೆಗೆ ನಾನು ಅವಕಾಶ ಕೊಡಲ್ಲ. ಎಲ್ಲಾದರೂ ಗಣಿಗಾರಿಕೆ ಮಾಡುವುದಾದರೆ ಲೈಸೆನ್ಸ್ ಪಡೆದು ಮಾಡಬೇಕಾಗುತ್ತದೆ. ಅಕ್ರಮ ಗಣಿಗಾರಿಕೆಯಿಂದ ಇಂತಹ ಅನಾಹುತ ಸಂಭವಿಸುತ್ತದೆ. ಅಕ್ರಮ ಗಣಿಗಾರಿಕೆಗಳನ್ನ ಬಿಗಿ ಮಾಡೋಕೆ ಕ್ರಮ ವಹಿಸಲಾಗುವುದು. 24*7 ಗಣಿಗಾರಿಕೆಗೆ ಅವಕಾಶ ನೀಡುವ ವಿಚಾರದ ಕುರಿತು ಪರಿಶೀಲಿಸುತ್ತೇನೆ ಎಂದರು.
ಪರಾಕ್ರಮ ದಿನ:
ಇನ್ಮುಂದೆ ಪ್ರತಿವರ್ಷ ಜನವರಿ 23 ರಂದು ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ. ರಕ್ತ ಕೊಡಿ, ಸ್ವಾತಂತ್ರ್ಯ ಕೊಡ್ತೀನಿ ಎಂದು ಯುವಕರನ್ನ ನೇತಾಜಿ ಸಂಘಟಿಸಿದರು. ಯುವಕರಲ್ಲಿ ಅವರ ಬದುಕಿನ ಬಗ್ಗೆ ಅರಿವು ಮೂಡಿಸುವ ಹೊಣೆ ನಮ್ಮೆಲ್ಲರ ಮೇಲೆ ಇದೆ ಎಂದು ಸುಭಾಶ್ ಚಂದ್ರ ಬೋಸ್ ಜನ್ಮದಿನದ ಪ್ರಯುಕ್ತ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ವೀರ ಹನುಮಂತನ ಚಿತ್ರದ ಜತೆ ಟ್ವೀಟ್… ಪ್ರಧಾನಿ ಮೋದಿಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಧನ್ಯವಾದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ