ನೂತನ ವಿಮಾನ ಖರೀದಿಸ್ತೀರಿ, ನೇತಾಜಿ ಸ್ಮಾರಕ ಯಾಕೆ ನಿರ್ಮಿಸಿಲ್ಲ: ಕೇಂದ್ರಕ್ಕೆ ಮಮತಾ
ನೇತಾಜಿ ಅವರ ಕನಸಿನ ಯೋಜನಾ ಆಯೋಗವನ್ನು ರದ್ದುಗೊಳಿಸಿ, ನೀತಿ ಆಯೋಗ್ ಎಂದು ಬದಲಾಯಿಸಿದ್ದೀರಿ
Team Udayavani, Jan 23, 2021, 3:11 PM IST
ಕೋಲ್ಕತಾ: ನೇತಾಜಿ ಜನ್ಮ ದಿನಾಚರಣೆಯನ್ನು ಇನ್ನೂ ರಾಷ್ಟ್ರೀಯ ರಜಾ ದಿನವೆಂದು ಘೋಷಿಸದಿರುವ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸುವುದಾಗಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದು, ಹೊಸ ಸಂಸತ್ ಕಟ್ಟಡ ನಿರ್ಮಿಸುತ್ತಿದ್ದೀರಿ, ನೂತನ ವಿಮಾನ ಖರೀದಿಸುತ್ತಿದ್ದೀರಿ. ಆದರೆ ಇನ್ನೂ ನೇತಾಜಿ ಸ್ಮಾರಕವನ್ನು ಯಾಕೆ ನಿರ್ಮಿಸಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೇಂದ್ರಕ್ಕೆ ಶಿಫಾರಸ್ಸು : ಕಟೀಲ್ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 23, 2021) ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 124ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತಾಕ್ಕೆ ಆಗಮಿಸುವ ಮುನ್ನ ಮಮತಾ ಬ್ಯಾನರ್ಜಿ ಆರು ಕಿಲೋ ಮೀಟರ್ ಪಾದಯಾತ್ರೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ನೀವು ಯಾವುದೇ ಬಂದರು ಪ್ರದೇಶಕ್ಕೆ ಶ್ಯಾಮ್ ಪ್ರಸಾದ್ ಮುಖರ್ಜಿ ಹೆಸರನ್ನು ಕೊಡಿ, ನಮ್ಮದೇನು ಆಕ್ಷೇಪವಿಲ್ಲ, ಆದರೆ ನೇತಾಜಿಯವರ ಸ್ಮಾರಕ ಇನ್ನೂ ನಿರ್ಮಿಸಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಜೈಲುಪಾಲಾದ ಲಾಲು ಆರೋಗ್ಯ ಸ್ಥಿತಿ ಗಂಭೀರ; ದೆಹಲಿ ಏಮ್ಸ್ ಗೆ ಸ್ಥಳಾಂತರ ಸಾಧ್ಯತೆ
ಕೇಂದ್ರ ಸರ್ಕಾರ ಕಳೆದ ವರ್ಷ ಜೂನ್ ನಲ್ಲಿ ಕೋಲ್ಕತಾ ಬಂದರನ್ನು ಭಾರತೀಯ ಜನಸಂಘದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರು ಎಂದು ಮರುನಾಮಕರಣ ಮಾಡಿತ್ತು. ಅಷ್ಟೇ ಅಲ್ಲ ನೇತಾಜಿ ಅವರ ಕನಸಿನ ಯೋಜನಾ ಆಯೋಗವನ್ನು ರದ್ದುಗೊಳಿಸಿ, ನೀತಿ ಆಯೋಗ್ ಎಂದು ಬದಲಾಯಿಸಿದ್ದೀರಿ ಎಂದು ಕೇಂದ್ರದ ನಿರ್ಧಾರವನ್ನು ಟೀಕಿಸಿದ್ದು, ಯೋಜನಾ ಆಯೋಗವನ್ನು ಮರುಸ್ಥಾಪಿಸುವಂತೆ ಈ ಸಂದರ್ಭದಲ್ಲಿ ಮಮತಾ ಒತ್ತಾಯಿಸಿದರು.
“ನೇತಾಜಿ ಅವರ ಜನ್ಮ ದಿನವನ್ನು “ಪರಾಕ್ರಮ್ ದಿವಸ್ “ ಎಂದು ಕೇಂದ್ರ ಸರ್ಕಾರ ಹೆಸರಿಸಿದೆ. ಆದರೆ ಪರಾಕ್ರಮ್ ದಿವಸ್ ಅರ್ಥವೇನು? ನಮಗೆ ಇಂದು ದೇಶನಾಯಕ್ ದಿವಸವಾಗಬೇಕಾಗಿದೆ. ನಿಮ್ಮ ಕ್ರಮ ಸರಿಯಾದುದಲ್ಲ, ನಾವು ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಮಮತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ