400 ಕೋಟಿ ರೂ. ಅನುದಾನಕ್ಕೆ ಮನವಿ
ಜಿಲ್ಲೆಯ ವಿವಿಧ ಸಮಸ್ಯೆಗಳ ನಿವಾರಣೆಗೆ ಮಂಡಳಿ ಆದ್ಯತೆ: ಗುರುಮೂರ್ತಿ
Team Udayavani, Jan 23, 2021, 6:16 PM IST
ಚಿಕ್ಕಮಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ 400 ಕೋಟಿ ರೂ. ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡಳಿ ವ್ಯಾಪ್ತಿಗೆ 13 ಜಿಲ್ಲೆ ಒಳಗೊಂಡಿದ್ದು, ವಿಧಾನಸಭೆ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿ 136 ಜನ ಸದಸ್ಯರನ್ನು ಮಂಡಳಿ ಹೊಂದಿದೆ ಎಂದರು.
ಇದನ್ನೂ ಓದಿ: ರೈತರಿಗೆ ಬೆಳೆ ಉಳಿಸಿಕೊಳ್ಳುವ ಸವಾಲು; ಪಂಪ್ಸೆಟ್ಗಳಿಗೆ ಕರೆಂಟ್ ಶಾಕ್
ಮಂಡಳಿಯ ಪ್ರಮುಖ ಉದ್ದೇಶವೇ ಮಲೆನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ನೀಡಬೇಕು ಮತ್ತು ಮಲೆನಾಡು ಭಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಬೇಕೆಂಬುದಾಗಿದೆ. ಇಲ್ಲಿಯವರೆಗೂ ಮಂಡಳಿಗೆ ಸರ್ಕಾರ ನೀಡುವ ಅನುದಾನ ಕಡಿಮೆ ಇದೆ. ಪ್ರತೀ ವರ್ಷ 40 ಕೋಟಿ, 30 ಕೋಟಿ ಅನುದಾನ ನೀಡುತ್ತಿದೆ ಎಂದರು.
ಶಾಸಕರಿಂದ ಕ್ರಿಯಾಯೋಜನೆ ಪಡೆದು ಆ ಯೋಜನೆಗಳನ್ನು ಮಂಡಳಿಯಿಂದ ಅನುಷ್ಠಾನ ಮಾಡಲಾಗುವುದು ಎಂದ ಅವರು, ಮಲೆನಾಡು ಭಾಗದಲ್ಲಿ ರಸ್ತೆ, ಚರಂಡಿ ಮಾಡುವುದೇ ಮಂಡಳಿಯ ಕೆಲಸವಾಗಬಾರದು. ಮಲೆನಾಡಿನ ಸಮಸ್ಯೆಗಳ ಬಗ್ಗೆಯೂ ಮಂಡಳಿ ಗಮನ ಹರಿಸಬೇಕೆನ್ನುವ ಉದ್ದೇಶವನ್ನು ಇರಿಸಿಕೊಂಡಿದ್ದೇವೆ ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರ ಸಮಸ್ಯೆ, ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ರೀತಿಯ ಸಮಸ್ಯೆಗಳಿವೆ. ಈ ಸಮಸ್ಯೆಗಳ ನಿವಾರಣೆಗೆ ಮಂಡಳಿ ಗಮನಹರಿಸಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕೃಷಿ ವಿವಿ ಹಾಗೂ ತೋಟಗಾರಿಕೆ ವಿವಿ, ಪಶುವೈದ್ಯ ಕಾಲೇಜು ಹೊಂದಿದ್ದು, ಇವುಗಳ ಜೊತೆಗೂಡಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಕೃಷಿ ಕಾರ್ಯಾಗಾರವನ್ನು ಮುಂದಿನ ದಿನಗಳಲ್ಲಿ ನಡೆಸಲು ಚಿಂತನೆ ನಡೆಸಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕಾಲುಸಂಕ ಮತ್ತು ತೂಗುಸೇತುವೆ ಅಗತ್ಯವಿದ್ದು ಕಾಲುಸಂಕ ಮತ್ತು ತೂಗುಸೇತುವೆ ನಿರ್ಮಾಣಕ್ಕೆ 21-22ನೇ ಸಾಲಿನ ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
1016-17ನೇ ಸಾಲಿನಿಂದ ಇಲ್ಲಿಯವರೆಗೂ 1,354 ಹಳೇ ಕಾಮಗಾರಿಗಳು ಇದ್ದು, ಈ ಕಾಮಗಾರಿಗಳನ್ನು ಮುಗಿಸಬೇಕಿದೆ. ಜಿಲ್ಲೆಯಲ್ಲಿ 10 ಕೋಟಿ ರೂ. ವೆಚ್ಚದ 113 ಕಾಮಗಾರಿ ಮಂಜೂರಾಗಿದ್ದು, 6 ಕೋಟಿ ರೂ. ವೆಚ್ಚದ 59 ಕಾಮಗಾರಿ ಮುಕ್ತಾಯವಾಗಿದೆ. 79 ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಮುಗಿಸುವುದಾಗಿ ತಿಳಿಸಿದರು.
ಕಾರ್ಯಪಾಲಕ ಇಂಜಿನಿಯರ್ ಎಚ್.ವಿ. ವಿಜಯ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಉಪ ನಿರ್ದೇಶಕ ಶಿವಾನಂದ್ ಎಚ್. ಕುದರಿ, ಶ್ರೀನಿವಾಸ್ ಇದ್ದರು.
ಇದನ್ನೂ ಓದಿ ; ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ