ತಾಪಂ ರದ್ಧತಿ ಬೇಡ; ಚೈತನ್ಯ ತುಂಬಿ


Team Udayavani, Jan 23, 2021, 6:29 PM IST

taluk-panchayath-issue

ಕಾರಟಗಿ: ರಾಜ್ಯ ಬಿಜೆಪಿ ಸರ್ಕಾರ ತಾಲೂಕು ಪಂಚಾಯಿತಿಯನ್ನು ರದ್ದು ಮಾಡಲು ಸಿದ್ಧತೆ ನಡೆಸುತ್ತಿರುವುದು ಖಂಡನೀಯ. ಇದು ಒಂದು ರಾಜಕೀಯ ಹುನ್ನಾರ ಆಗಿದೆ..

ಹೀಗೆ ತಮ್ಮ ಅಸಮಾಧಾನ ಹೊರಹಾಕಿದವರು ಕಾರಟಗಿ ತಾಪಂ ಅಧ್ಯಕ್ಷ ಪ್ರಕಾಶ ಬಾವಿ ಅವರು. ತಾಲೂಕು ಪಂಚಾಯಿತಿಯನ್ನು ರದ್ದು ಪಡಿಸುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆದಿರುವ ಸಂದರ್ಭದಲ್ಲಿ “ತಾಪಂ ರದ್ಧತಿ ಆಗಬೇಕೇ ಅಥವಾ ಬೇಡವೇ?’ ಎಂಬುದರ ಬಗ್ಗೆ “ಉದಯವಾಣಿ’ ಜತೆ ಅವರು ಅಭಿಪ್ರಾಯ ಹಂಚಿಕೊಂಡರು.

ಜಿಲ್ಲಾ ಹಂತದಲ್ಲಿ ಈ ಚಿಂತನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ತಾಪಂ ಅನ್ನು ರದ್ದುಪಡಿಸಿ ತಾಲೂಕು ಬೋರ್ಡ್‌ ಮಾಡಿ ಪಕ್ಷದ ಕಾರ್ಯಕರ್ತರನ್ನು ನಾಮಕೆವಾಸ್ತೆ ನಾಮನಿರ್ದೇಶನ ಮಾಡಿ ಸಂಪೂರ್ಣ ತಾಲೂಕನ್ನು ಶಾಸಕರ ಹಿಡಿತಕ್ಕೆ ನೀಡಲು ಮಾಡುತ್ತಿರುವ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಆರೋಪಿಸಿದರು.

ತಾಪಂ ಪಾತ್ರ ಪ್ರಮುಖ: ತಾಪಂ ವ್ಯವಸ್ಥೆಯನ್ನು ರದ್ದು ಪಡಿಸುವುದರ ಬದಲಾಗಿ ಅದಕ್ಕೆ ಶಕ್ತಿ ತುಂಬಬೇಕಿದೆ. ಅಧಿ ಕಾರವನ್ನೂ ಹೆಚ್ಚಿಸಿ, ಬಲವರ್ಧನೆ ಮಾಡುವ ಕೆಲಸ ಮಾಡಬೇಕಿದೆ. ಜನರ ದೃಷ್ಟಿಯಲ್ಲಿ ಎಲ್ಲ ಪಂಚಾಯತ್‌ ವ್ಯವಸ್ಥೆಗಿಂತಲೂ ತಾಪಂ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಹಳ್ಳಿಗಳಲ್ಲಿ ಸಾಮಾನ್ಯ ಜನರು ತಾಲೂಕು ಮಟ್ಟದ ಇಲಾಖೆಗಳನ್ನು ಸಂಪರ್ಕಿಸಲು ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಗ್ರಾಪಂ ಸದಸ್ಯರ ಮೂಲಕ ಎಲ್ಲ ಸಮಸ್ಯೆಗಳು ದೂರವಾಗುತ್ತವೆ ಎಂಬುದು ಅಸಾಧ್ಯ.

ತಾಪಂಗೂ ಇದೆ ಅಧಿಕಾರ: ಜಿಪಂ ಸದಸ್ಯರನ್ನು ಸಂಪರ್ಕಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಹೀಗಾಗಿ ಜನರಿಗೆ ತಾಪಂ ಸದಸ್ಯರು ನೇರವಾಗಿ ಸಂಪರ್ಕಕ್ಕೆ ಸಿಗುತ್ತಾರೆ. ಆ ಮೂಲಕ ತಾಲೂಕು ಮಟ್ಟದ ಇಲಾಖೆ ಅ ಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಮತ್ತು ಕೆಲಸ ಕಾರ್ಯ ಪೂರೈಸಿಕೊಳ್ಳುತ್ತಾರೆ. ಹೀಗಾಗಿ ತಾಪಂ ವ್ಯವಸ್ಥೆ ಅತ್ಯಂತ ಮುಖ್ಯವಾಗಿದೆ. ತಾಪಂಗೆ ಅಧಿ  ಕಾರವಿಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ತಾಪಂಗೆ ತನ್ನದೇ ಆದ ಅಧಿ ಕಾರಗಳಿವೆ. ಜಿಲ್ಲಾ ಮಟ್ಟದಲ್ಲಿ ಜಿಪಂಗೆ ಇರುವಷ್ಟೇ ಅಧಿ ಕಾರ ತಾಲೂಕು ಮಟ್ಟದಲ್ಲಿ ತಾಪಂಗಿದೆ. ತಾಪಂಗೆ ಅನುದಾನಗಳ ಕೊರತೆಇದ್ದರೂ ಅನುಷ್ಠಾನ ಇಲಾಖೆಗಳಲ್ಲಿರುವ ಅನುದಾನ ಬಳಸಿಕೊಳ್ಳುವ ಅವಕಾಶವಿದೆ. ಆದರೆ ಅವುಗಳನ್ನು ಬಳಸಿಕೊಳ್ಳುವ ಜ್ಞಾನ ಸದಸ್ಯರಿಗೆ ಇರಬೇಕು.

ಇದನ್ನೂ ಓದಿ:400 ಕೋಟಿ ರೂ. ಅನುದಾನಕ್ಕೆ ಮನವಿ

ಸರಕಾರ ಕೂಡ ತಾಪಂಗಳಿಗೆ ನೀಡುವ ಅನುದಾನವನ್ನು ಹೆಚ್ಚಿಸಿ ಬಲವರ್ಧನೆ ಮಾಡಬೇಕಾಗಿದೆ. ತಾಲೂಕುಪಂಚಾಯತಿ ವ್ಯವಸ್ಥೆ ರದ್ಧತಿ ಮಾಡದೆ ಉಳಿಸಲೇಬೇಕು.  ನನ್ನ ಸದಸ್ಯತ್ವದ ಅಧಿ ಕಾರ ಅವಧಿಯಲ್ಲಿ ಅನುದಾನಗಳ ಜತೆಗೆ ವಿವಿಧ ಇಲಾಖೆಗಳ ಅನುದಾನ ಹಾಗೂಮಹಾತ್ಮಾ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡು ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 4 ಕೋಟಿಗೂ ಹೆಚ್ಚು ರೂ.ಗಳ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಗ್ರಾಪಂ ಅಧ್ಯಕ್ಷರಿಗೆ ನೀಡಿರುವ ಅಧಿ  ಕಾರವನ್ನು ತಾಪಂ ಸದಸ್ಯರಿಗೂ ನೀಡಿದರೆ ಅಭಿವೃದ್ಧಿ ಕಾರ್ಯಗಳಲ್ಲಿ ಬದಲಾವಣೆ ತರಬಹುದು. ತಾಪಂ ಇರಲೇಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

ದಿಗಂಬರ ಎನ್‌.ಕುರ್ಡೆಕರ

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.