ಗ್ರಾಮದ ಮಧ್ಯೆ ಕಸ ವಿಲೇವಾರಿ ಬೇಡ
Team Udayavani, Jan 23, 2021, 8:29 PM IST
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕು ಬೈರಕೂರು ಗ್ರಾಪಂ ವತಿಯಿಂದ ಕಸ ವಿಲೇವಾರಿ ಮಾಡಲು ಇರಗಮುತ್ತನಹಳ್ಳಿ ಮತ್ತು ಕೋನಕುಂಟೆ ಗ್ರಾಮದ ಮಧ್ಯೆ ಜಾಗ ಗುರ್ತಿಸಿರುವುದನ್ನು ಕೈಬಿಟ್ಟು ಬೇರೆ ಜಾಗದಲ್ಲಿ ಕಸ ವಿಲೇವಾರಿ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರೈತ ಸಂಘದ ಮುಖಂಡ ವೀರಭದ್ರಸ್ವಾಮಿ ಮಾತನಾಡಿ, ಮುಳಬಾಗಿಲು ತಾಲೂಕು ಬೈರಕೂರು ಗ್ರಾಪಂ ವತಿಯಿಂದ ಕಸ ವಿಲೇವಾರಿ ಮಾಡಲು ಇರಗಮುತ್ತ ನಹಳ್ಳಿ ಮತ್ತು ಕೋನಕುಂಟೆ ಗ್ರಾಮದ ಮಧ್ಯೆ ಜಾಗ ಗುರ್ತಿಸಿರುವುದು ಸರಿಯಲ್ಲ ಎಂದರು.
ಸದರಿ ಈ ಜಾಗವು ಇರಗಮುತ್ತನಹಳ್ಳಿ ಮತ್ತು ಕೋನಕುಂಟೆ ಗ್ರಾಮದಲ್ಲಿರುವ ಶಾಲೆಗಳ ಮಧ್ಯಭಾಗದಲ್ಲಿರುತ್ತದೆ. ಇಲ್ಲಿ ಕಸ ವಿಲೇವಾರಿ ಮಾಡಿದರೆ ಸದರಿ ಎರಡು ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಗ್ರಾಮಗಳಲ್ಲಿ ಯಥೇತ್ಛವಾಗಿ ರೇಷ್ಮೆ ಕೃಷಿ ಮಾಡುತ್ತಿರುತ್ತಾರೆ. ಕಸದಿಂದ ಹೊರ ಹೊಮ್ಮುವದುರ್ವಾಸನೆಯಿಂದಾಗಿ ರೇಷ್ಮೆ ಬೆಳೆಯು ಬರದೇ ರೈತರು ಸಂಕಷ್ಟಕ್ಕೆ ಒಳಗಾಗ ಬೇಕಾಗುತ್ತದೆ ಎಂದರು.
ಇದನ್ನೂ ಓದಿ:ಸರ್ಕಾರದ ಸೌಲಭ್ಯ ಬಳಸಿಕೊಳ್ಳಲಿ
ಕೂಡಲೇ ಇರಗಮುತ್ತನಹಳ್ಳಿ- ಕೋನಕುಂಟೆ ಜಾಗದಲ್ಲಿ ಕಸ ವಿಲೇವಾರಿ ಮಾಡುವು ದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಹಲವಾರು ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ