ಕಟ್ಟಡ ನಿರ್ಮಾಣವಾದರೂ ಮೂಲಸೌಕರ್ಯ ಕೊರತೆ

ಉದ್ಘಾಟನೆಯಾಗದ ನೂತನ ಪೊಲೀಸ್‌ ವಸತಿಗೃಹ

Team Udayavani, Jan 24, 2021, 5:30 AM IST

Untitled-1

ಕಾರ್ಕಳ: ಪೊಲೀಸರು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ. ಪ್ರತಿಯೊಂದು ವ್ಯವಸ್ಥೆ, ರಕ್ಷಣೆಗೂ ಪೊಲೀಸರೆ ಬೇಕು. ವಿಪರ್ಯಾಸ ಎಂದರೆ  ಇವರಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸುವಲ್ಲಿ ಮಾತ್ರ  ಸಂಬಂಧಿಸಿದ ಇಲಾಖೆ  ಹಿಂದೆ ಬಿದ್ದಿದೆ!

ಕಾರ್ಕಳ ನಗರ ವ್ಯಾಪ್ತಿಯಲ್ಲಿ ಪೊಲೀಸರ ವಾಸ್ತವ್ಯಕ್ಕಾಗಿ ವಸತಿಗೃಹ ನಿರ್ಮಾಣಗೊಂಡಿದ್ದರೂ ಅದಕ್ಕಿನ್ನೂ ಮೂಲ ಸೌಕರ್ಯ ಜೋಡಿಸದೆ ಬಾಕಿ ಉಳಿದಿದೆ. ಆದ್ದರಿಂದ ಬಳಕೆಗಿನ್ನೂ ಕಾಲ ಕೂಡಿ ಬಂದಿಲ್ಲ.  ಮೂಲ ಸೌಕರ್ಯ ಕೊರತೆಗಳಿರುವ ಸೋರುವ  ಮನೆಗಳಲ್ಲೆ ಅವರು ಈಗಲೂ ತಮ್ಮ  ವಾಸ್ತವ್ಯವನ್ನು  ಮುಂದುವರೆಸುತ್ತಿದ್ದಾರೆ.

ಗುತ್ತಿಗೆ ಅವಧಿ 2019ಕ್ಕೆ ಮುಕ್ತಾಯ:

ಕಾರ್ಕಳ ಪೊಲೀಸ್‌ ಠಾಣೆಯ ಪಕ್ಕದಲ್ಲೇ ಪೊಲೀಸ್‌ ಸಿಬಂದಿ ವರ್ಗಕ್ಕೆ ವಸತಿಗೃಹ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣ ಸಹಿತ ಬಹುತೇಕ ಕೆಲಸಗಳು ಪೂರ್ಣಗೊಂಡಿದೆ.  2018ರ ಜನವರಿಯಲ್ಲಿ  ಕಾಮಗಾರಿಗೆ ಚಾಲನೆ ದೊರಕಿತ್ತು. ಕಾಮಗಾರಿ ನಿಧಾನಗತಿಯಲ್ಲಿ  ನಡೆಯುತ್ತ ಬಂದಿದೆ. ಟೆಂಡರ್‌ ನಿಯಮದಂತೆ 2019ರ ಮೇ ತಿಂಗಳಲ್ಲಿ ಗುತ್ತಿಗೆದಾರರು ಕಟ್ಟಡವನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಬೇಕಿತ್ತು. ಅವಧಿ ಕಳೆದು 2 ವರ್ಷ ಕಳೆದರೂ ಅದಾಗಿಲ್ಲ.ಬಹು ವೆಚ್ಚದ ಸಮುತ್ಛಯಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇದರ ವತಿಯಿಂದ ಪೊಲೀಸ್‌ ಗೃಹ -2020 ಯೋಜನೆಯಡಿ ವಸತಿಗೃಹ ಕಟ್ಟಡ ನಿರ್ಮಾಣಕ್ಕೆ 9.29 ಕೋಟಿ ರೂ. ಬಿಡುಗಡೆಗೊಂಡಿತ್ತು. ಉಡುಪಿಯ ಶ್ರುತಿ ಎಂಜಿನಿಯರ್‌ ಅವರು ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು.

48 ನಿವೇಶನ :

ಪೊಲೀಸ್‌ ವಸತಿ ಸಮುಚ್ಚಯದಲ್ಲಿ  ಎರಡು ಅಂತಸ್ತಿನ 4 ಬ್ಲಾಕ್‌ಗಳಲ್ಲಿ ಒಟ್ಟು 48 ವಸತಿ ಗೃಹಗಳಿವೆ. ಇದರಿಂದ ಕಾರ್ಕಳ ನಗರ, ಗ್ರಾಮಾಂತರ ಹಾಗೂ ಅಜೆಕಾರು ಪೊಲೀಸ್‌ ಠಾಣೆಯ 48 ಪೊಲೀಸ್‌ ಕುಟುಂಬಕ್ಕೆ ಪ್ರಯೋಜನವಾಗಲಿದೆ. ಇವರೆಲ್ಲರೂ ಈಗ ಹಳೆ ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಕೆಲವರು ಬಾಡಿಗೆಗೆ ಮನೆ ಪಡೆದು ವ್ಯಾಸ್ತವ್ಯ ಹೊಂದಿದ್ದಾರೆ.

ಸೌಕರ್ಯ ಜೋಡಣೆ ಸಮಸ್ಯೆಯಿದೆ :

ಸಮುತ್ಛಯ ಭವನಕ್ಕೆ ನೀರು ಪೂರೈಕೆ, ಡ್ರೈನೇಜ್‌ಗೆ ಸಂಬಂಧಿಸಿ ಕೆಲಸ ಕಾರ್ಯಗಳು ಪೂರ್ಣವಾಗಿಲ್ಲ. ಗುತ್ತಿಗೆದಾರರು ಕಟ್ಟಡ ನಿರ್ಮಿಸಿ ಸುಮ್ಮನಿದ್ದಾರೆ. ನೀರು ಸಂಪರ್ಕ, ಇನ್ನಿತರ  ಮೂಲ ಸೌಕರ್ಯ ಒದಗಿಸುವಲ್ಲಿ  ಗುತ್ತಿಗೆದಾರರ ಮತ್ತು ಇಲಾಖೆ ಮಧ್ಯೆ ಹೊಂದಾಣಿಕೆ ಕೊರತೆಯಿದೆ. ಪರಿಣಾಮ ಕಟ್ಟಡ ಮಾತ್ರ ನಿರ್ಮಾಣಗೊಂಡು ನಿಂತಿದೆ. ಪಕ್ಕದಲ್ಲೇ ಇರುವ ಸರಕಾರಿ ಬಾವಿಗೆ ಪಂಪ್‌ ಅಳವಡಿಸಿ ಪೈಪ್‌ಲೈನ್‌ ಸಂಪರ್ಕ ನೀಡಿದಲ್ಲಿ  ನೀರಿನ ಸಮಸ್ಯೆ ಬಗೆಹರಿಯಲಿದೆ.

ಹಳೆಯ ಕಟ್ಟಡ ಶಿಥಿಲ :

35ಕ್ಕೂ  ಅಧಿಕ ವರ್ಷದ ಹಿಂದೆ ನಿರ್ಮಾಣವಾದ ಪೊಲೀಸ್‌ ವಸತಿಗೃಹಗಳು ಶಿಥಿಲಾವಸ್ಥೆಯಲ್ಲಿದ್ದು,  ಮನೆ ಛಾವಣಿ ಕುಸಿಯುವ  ಭೀತಿ ಹಂತಕ್ಕೆ ತಲುಪಿದೆ. ಪ್ರತಿ ಮಳೆಗಾಲದಲ್ಲಿ ನೀರು ಸೋರುತ್ತಿರುತ್ತದೆ.  ಮನೆ ಸಮಸ್ಯೆ ಸಿಬಂದಿಯನ್ನು ಕಾಡುತ್ತಿದೆ.

ಕಟ್ಟಡ ಸಿದ್ಧವಾಗಿದ್ದರೂ ಲೋಕಾರ್ಪಣೆ ವಿಳಂಬವಾಗಿದೆ. ಅಧಿವೇಶನ ಮುಗಿದ  ತತ್‌ಕ್ಷಣ ಉದ್ಘಾಟನೆಗೆ ಕ್ರಮ ವಹಿಸಲಾಗುವುದು. -ವಿ.ಸುನಿಲ್‌ ಕುಮಾರ್‌,  ಶಾಸಕರು, ಕಾರ್ಕಳ

ಸಮುಚ್ಛಯ ನಿರ್ಮಾಣಗೊಂಡು ಸಿದ್ಧವಾಗಿದೆ. ಒಳಚರಂಡಿಗೆ ಸಂಬಂಧಿಸಿದ ಕೆಲಸವಷ್ಟೇ  ಬಾಕಿಯಿದೆ. ಶೀಘ್ರ ಬಳಕೆಗೆ ಸಿಗುವಂತೆ ಮಾಡಲು ಇಲಾಖೆ  ಗಮನಕ್ಕೆ ತರಲಾಗಿದೆ. ಶೀಘ್ರ ಬಳಕೆಗೆ ಸಿಗುವ  ವಿಶ್ವಾಸವಿದೆ. -ಭರತ್‌ ರೆಡ್ಡಿ , ಡಿವೈಎಸ್ಪಿ , ಕಾರ್ಕಳ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.