ಫೇಸ್ ಬುಕ್, ವಾಟ್ಸಾಪ್ ಬದಲಿಗೆ ಹೊಸ ಅಪ್ಲಿಕೇಶನ್ ಬಳಸಲು ಆರಂಭಿಸಿದ ಪಾಕ್ ಉಗ್ರರು
Team Udayavani, Jan 24, 2021, 7:00 PM IST
ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆಗಳು ಹಾಗೂ ಅವುಗಳನ್ನು ನಿರ್ವಹಿಸುತ್ತಿರುವವರು ವಾಟ್ಸಾಪ್ ಮತ್ತು ಫೇಸ್ ಬುಕ್ ಬಳಕೆಯನ್ನು ನಿಲ್ಲಿಸಿ, ಹೊಸ ಮೆಸೇಜಿಂಗ್ ಅಪ್ಲಿಕೇಶನ್ ನ ಮೊರೆ ಹೋಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಈ ಆ್ಯಪ್ ಜಗತ್ತಿನಾದ್ಯಂತ ಉಚಿತವಾಗಿ ದೊರಕುತ್ತಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವಾಟ್ಸಾಪ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಹೊಸ ಭದ್ರತಾ ನೀತಿಗಳನ್ನು ಪರಿಚಯಿಸುತ್ತಿರುವ ಬೆನ್ನಲ್ಲೆ, ಈ ಬೆಳವಣಿಗೆ ನಡೆದಿದ್ದು, ಟರ್ಕೀಶ್ ಮೂಲದ ಕಂಪೆನಿಯೊಂದು ಸಿದ್ದಪಡಿಸಿದ ಹೊಸ ಅಪ್ಲಿಕೇಶನ್ ನತ್ತ ಉಗ್ರರು ಹೊರಳಿದ್ದಾರೆಂದು ತಿಳಿದುಬಂದಿದೆ.
ಕಾಶ್ಮೀರದಲ್ಲಿ ಹಲವು ಉಗ್ರರರನ್ನು ಎನ್ ಕೌಂಟರ್ ಮೂಲಕ ಸದೆಬಡಿದ ನಂತರ ಹಾಗೂ ಕೆಲ ಉಗ್ರರು ಶರಣಾದ ಬಳಿಕ ಈ ಮಾಹಿತಿ ತಿಳಿದುಬಂದಿದ್ದು, ಪಾಕ್ ಉಗ್ರರು ಮೂರು ಹೊಸ ಅಪ್ಲಿಕೇಶನ್ ಗಳ ಮುಖಾಂತರ ಮಾಹಿತಿ ರವಾನಿಸಲು ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ
ಭದ್ರತಾ ಕಾರಣಗಳಿಂದ ಈ ಮೂರು ಅಪ್ಲಿಕೇಶನ್ ಗಳ ಮಾಹಿತಿ ಬಹಿರಂಗಪಡಿಸುವಂತಿಲ್ಲ. ಒಂದು ಅಮೆರಿಕ ಮೂಲದ ಕಂಪೆನಿಯಾಗಿದೆ. ಮತ್ತೊಂದು ಯೂರೋಪ್ ಹಾಗೂ ಇತ್ತೀಚಿಗೆ ಬಳಕೆಯಲ್ಲಿರುವುದು ಟರ್ಕೀಶ್ ಮೂಲದ ಕಂಪೆನಿ ಸಿದ್ದಪಡಿಸಿದ ಅಪ್ಲಿಕೇಶನ್ ಎಂದು ಮಾಹಿತಿ ನೀಡಿದ್ದಾರೆ.
ಹೊಸ ಅಪ್ಲಿಕೇಶನ್ ಅತೀ ಕಡಿಮೆ ಇಂಟರ್ ನೆಟ್ ಕನೆಕ್ಷನ್ ಹೊಂದಿದ್ದರೂ ಕಾರ್ಯನಿರ್ವಹಿಸುವ ಸಾಮಾರ್ಥ್ಯ ಪಡೆದಿದೆ. ಭಾರತ ಸರ್ಕಾರ ಆಗಸ್ಟ್ 2019ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿತ್ತು. 2020ರಲ್ಲಿ2ಜಿ ಇಂಟರ್ ನೆಟ್ ಸೇವೆ ಆರಂಭಿಸಿತ್ತು. ಪರಿಣಾಮವಾಗಿ ಉಗ್ರ ಸಂಘಟನೆಗಳೂ ಕೂಡ ಹೊಸ ಅಪ್ಲಿಕೇಶನ್ ನತ್ತ ಮುಖಮಾಡಿ ಭದ್ರತೆಗೆ ಧಕ್ಕೆ ತರುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಬಿಜೆಪಿ ಇನ್ನೂ 5 ವರ್ಷ ಅಧಿಕಾರಕ್ಕೆ ಬಂದರೇ, ಅಸ್ಸಾಂ ಭದ್ರವಾಗುತ್ತದೆ : ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್