ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ
ಭಾರತ ಮತ್ತು ಚೀನಾ ಸೇನಾಧಿಕಾರಿಗಳು ಬರೋಬ್ಬರಿ 16 ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
Team Udayavani, Jan 25, 2021, 12:28 PM IST
ನವದೆಹಲಿ:ಲಡಾಖ್ ನ ಗಡಿ ಪ್ರದೇಶದ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ಸೇನಾಧಿಕಾರಿಗಳ ನಡುವೆ 9ನೇ ಸುತ್ತಿನ ಮಾತುಕತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಸಿಕ್ಕಿಂನ ವಾಸ್ತವ ಗಡಿ ನಿಯಂತ್ರಣ ರೇಖೆಯ ಬಳಿ ಉಭಯ ಸೇನೆಗಳ ನಡುವೆ ಘರ್ಷಣೆ ನಡೆದ ಪರಿಣಾಮ ನಾಲ್ವರು ಭಾರತೀಯ ಸೈನಿಕರು, 20 ಮಂದಿ ಚೀನಿ ಸೈನಿಕರು ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ವರದಿಯ ಪ್ರಕಾರ, ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಾಯಿಸಲು ಮುಂದಾಗಿದ್ದ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಸೈನಿಕರ ಯತ್ನವನ್ನು ಭಾರತೀಯ ಸೈನಿಕರು ವಿಫಲಗೊಳಿಸಿರುವುದಾಗಿ ವಿವರಿಸಿದೆ.
ಭಾನುವಾರ ಪೂರ್ವ ಲಡಾಖ್ ಗಡಿ ಪ್ರದೇಶದಲ್ಲಿನ ಸೇನೆಯನ್ನು ವಾಪಸ್ ಪಡೆಯುವ ಕುರಿತು ಭಾರತ ಮತ್ತು ಚೀನಾ ಸೇನಾಧಿಕಾರಿಗಳು ಬರೋಬ್ಬರಿ 16 ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
ಪೂರ್ವ ಲಡಾಖ್ ನ ಪರ್ವತ ಶ್ರೇಣಿ ಹಾಗೂ ಆಯ್ದ ನೆಲೆಗಳಲ್ಲಿ ಚೀನಾ ತನ್ನ ಸೇನೆಯನ್ನು ವಾಪಸ್ ಕರೆಯಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಿ ಎಂದು ಮಾತುಕತೆ ವೇಳೆ ಭಾರತೀಯ ಸೇನಾಧಿಕಾರಿಗಳು ಸಲಹೆ ನೀಡಿರುವುದಾಗಿ ತಿಳಿಸಿದೆ.
ಪರ್ವತ ಶ್ರೇಣಿ ಹಾಗೂ ಆಯ್ದ ಪ್ರದೇಶಗಳಲ್ಲಿನ ಸೇನೆಯನ್ನು ಹಿಂಪಡೆಯುವ ಸಲಹೆ ಒಪ್ಪಿತವಾದಲ್ಲಿ ಭಾರತ ಕೂಡಾ ಪ್ರಕ್ರಿಯೆಯನ್ನು ಆರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು