ಕ್ರಿಕೆಟ್; ಬೆಳಗಾವಿ ತಂಡಕ್ಕೆ ಪ್ರಶಸ್ತಿ
Team Udayavani, Jan 25, 2021, 4:58 PM IST
ಧಾರವಾಡ: ಕವಿವಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಂತರ್ ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡ ಗೆಲುವಿನ ನಗೆ ಬೀರಿದೆ. ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಹಾವೇರಿ ತಂಡವನ್ನು 17 ರನ್ಗಳಿಂದ ಮಣಿಸಿದ ಬೆಳಗಾವಿ ತಂಡ ಪ್ರಶಸ್ತಿಯನ್ನು ಪಡೆದಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬೆಳಗಾವಿ ತಂಡ 9 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಟ ಪ್ರಾರಂಭಿಸಿದ ಹಾವೇರಿ ತಂಡ 9 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ:ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
ವಿಜೇತ ತಂಡ 15000 ನಗದು ಜೊತೆಗೆ ಪ್ರಶಸ್ತಿ ಜಯಿಸಿತು. ಪ್ರಶಸ್ತಿ ಫಲಕ ಮತ್ತು ನಗದು ಪುರಸ್ಕಾರವನ್ನು ಬ್ಯಾಂಕ್ನ ಮಹಾ ಪ್ರಬಂಧಕ ಬಿ.ಸಿ. ರವಿಚಂದ್ರ, ಚಂದ್ರಶೇಖರ ಮೋರೋ ಮತ್ತು ಪಿ. ನಾಗೇಶ್ವರ ರಾವ್ ವಿತರಿಸಿದರು. ಪಂದ್ಯಾವಳಿಯಲ್ಲಿ ಒಟ್ಟು 11 ತಂಡಗಳು ಪಾಲ್ಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್