ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯ
Team Udayavani, Jan 25, 2021, 5:29 PM IST
ಧಾರವಾಡ: ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಬ್ಲಾಗ್ ಮತ್ತು ವೆಬ್ಸೈಟ್ಗಳಿಗೆ ಬರೆಯುವುದನ್ನು ಕಲಿಯಬೇಕು. ಈ ಮೂಲಕ ತಂತ್ರಜ್ಞಾನದ ಬಳಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಡಿ.ರಾಮರಾಜ್ ಹೇಳಿದರು. ಕವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ನಡೆದ ವೆಬ್ ಪೋರ್ಟಲ್ ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ನ್ಯೂಸ್ ಪೋರ್ಟಲ್ನಲ್ಲಿ ಸುದ್ದಿಗಳನ್ನು ಅಳವಡಿಸಲು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಅತೀ ಅವಶ್ಯಕವಾಗಿದೆ. ವೆಬ್ಪೇಜ್ ಗಳಲ್ಲಿ ಸುದ್ದಿಯನ್ನು ಹಾಕುವುದರ ಜೊತೆಗೆ ಆಯಾ ಪ್ರದೇಶದ ವಿಷಯದ ಹೆಸರು ಇರಬೇಕು. ದಿನದಿಂದ ದಿನಕ್ಕೆ ಮೊಬೈಲ್ ಬಳಕೆ ಅ ಧಿಕವಾಗುತ್ತಿದ್ದು, ನ್ಯೂಸ್ ಪೋರ್ಟಲ್ಗಳು ಇನ್ನೂ ಹೆಚ್ಚು ಹೆಚ್ಚು ಬಳಕೆಗೆ ಬರುತ್ತವೆ ಎಂದರು.
ವಿಜಯಪುರ ಮಹಿಳಾ ವಿವಿ ಸಹಾಯಕ ಪ್ರಾಧ್ಯಾಪಕ ಸಂದೀಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವೆಬ್ಪೋರ್ಟಲ್ಗಳು ಹೆಚ್ಚು ಮಹತ್ವ ಪಡೆಯುತ್ತಿವೆ. ದಿನದ 24 ಗಂಟೆ ಕಾಲವೂ ಅಪ್ಟೇಡ್ ಸುದ್ದಿ ಇಲ್ಲಿ ದೊರೆಯುವುದರಿಂದ ಪ್ರತಿಯೊಂದು ಮಾಧ್ಯಮ ಸಂಸ್ಥೆಗಳು ಈಗ ತಮ್ಮದೇ ನ್ಯೂಸ್ ಪೋರ್ಟಲ್ ಹೊಂದಿವೆ. ಇಲ್ಲಿ ಕೆಲಸ ಮಾಡಲು ಅವಶ್ಯಕ ತಂತ್ರಜ್ಞಾನದ ಅರಿವನ್ನು ವಿದ್ಯಾರ್ಥಿಗಳುಪಡೆದುಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ:ಪಿಎಂ ಕಿಸಾನ್ ಯೋಜನೆ: 17 ಕೋಟಿ ಜಮಾ
ವಿಭಾಗದ ಮುಖ್ಯಸ್ಥ ಪ್ರೊ| ಜೆ. ಎಂ. ಚಂದುನವರ ಮಾತನಾಡಿ, ಡಿಜಿಟಲ್ ಮಾಧ್ಯಮದ ಎಲ್ಲ ಆಯಾಮಗಳನ್ನು ವಿದ್ಯಾರ್ಥಿಗಳು ಕಲಿಯಬೇಕಾದ ಅವಶ್ಯಕತೆ ಇದೆ ಎಂದರು. ಡಾ| ಮಂಜುನಾಥ ಅಡಿಗಲ್, ವಿಶ್ವಾಸ ಅಂಗಡಿ ಇದ್ದರು. ಶುಶ್ಮಿತಾ ಪಟ್ಟಣಶೆಟ್ಟಿ ನಿರೂಪಿಸಿದರು. ಜಶ್ಮಿನ್ ಸಯ್ಯದ ಪರಿಚಯಿಸಿದರು. ಅವಧಾನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ