ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ವಾಗ್ವಾದ
Team Udayavani, Jan 26, 2021, 12:12 PM IST
ದೊಡ್ಡಬಳ್ಳಾಪುರ: ಕನ್ನಡಪರ ಹೋರಾಟಗಾರರನ್ನು ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ತಪ್ಪು ಎಂದು ಹೇಳಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಿ.ಮಾ.ಸುಧಾಕರ್ ಅವರು ಹೋರಾಟ ಗಾರರ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.
ಇದರಿಂದಾಗಿ ತಾಪಂ ಭವನದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ಉಂಟಾಗಿತ್ತು. ಶಾಸಕ ಟಿ.ವೆಂಕಟರಮಣಯ್ಯ ಸೇರಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕನ್ನಡಪರ ಹೋರಾಟಗಾರರ ಮಾತಿಗೆ ಗೌರವ ನೀಡದೆ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಚಿ.ಮಾ.ಸುಧಾಕರ್ ಕ್ಷಮೆಯಾಚಿಸದೆ ಸಭೆಯಿಂದ ಹೊರ ನಡೆದರು.
ಸುಧಾಕರ್ ವಿರುದ್ಧ ಕಿಡಿ: ಸಾಹಿತ್ಯ ಪರಿಷತ್ ನಿಕಟಪೂರ್ವ ತಾಲೂಕು ಅಧ್ಯಕ್ಷ ಕೆ.ಆರ್.ರವಿಕಿರಣ್ ಮಾತನಾಡಿ, ಜಿಲ್ಲಾ
ಸಾಹಿತ್ಯ ಪರಿಷತ್ ಲೆಕ್ಕಪತ್ರಗಳು ಪಾರದರ್ಶಕವಾಗಿಲ್ಲ. ದತ್ತಿನಿಧಿಯಿಂದ ತಾಲೂಕಿಗೆ ಬರಬೇಕಿರುವ ಹಣ ಬಂದಿಲ್ಲ. ಕನ್ನಡ
ಪರ ಹೋರಾಟಗಾರರು ಸಮ್ಮೇಳನ ಅಧ್ಯಕ್ಷರಾಗಲು ಅವಕಾಶ ಇಲ್ಲ ಎಂದು ಎಲ್ಲೂ ನಿಯಮ ಇಲ್ಲ. ಜಿಲ್ಲಾ ಅಧ್ಯಕ್ಷರು
ಯಾವುದೇ ಬರವಣಿಗೆಯನ್ನು ಮಾಡಿಲ್ಲ. ಹೀಗಾಗಿ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಲು ಅರ್ಹತೆ ಇಲ್ಲ ಎಂದು
ಟೀಕಿಸಿದರು. ಮುಖಂಡರಾದ ಮಂಜು ನಾಥ್, ರಾಜು ಸಣ್ಣಕ್ಕಿ, ಸಂಜೀವ್ ನಾಯಕ್ ಮಾತನಾಡಿ, ಸಾಹಿತ್ಯ ಸಮ್ಮೇಳದಲ್ಲಿ ಹೊಸ ಕೃಷಿ ಕಾಯ್ದೆಗಳು, ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಕುರಿತ ವಿಚಾರ ಗೋಷ್ಠಿಗಳು ನಡೆಯಬೇಕು ಎಂದರು.
ಇದನ್ನೂ ಓದಿ:ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು
ಅಧ್ಯಕ್ಷ ನಡವಳಿಕೆ ಖಂಡನೀಯ:
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರ ನಡವಳಿಕೆ ಖಂಡನೀಯವಾಗಿದೆ. ಸಾರ್ವಜನಿಕರ ಹಣ ಖರ್ಚು ಮಾಡುವಾಗ ಲೆಕ್ಕ ಪತ್ರಗಳನ್ನು ಪಾರದರ್ಶಕ ವಾಗಿಟ್ಟು ಕೊಳ್ಳುವುದು ಕಡ್ಡಾಯ. ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕು ಆಡಳಿತದಿಂದ 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ವಿವರಿಸಿದರು. ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಹಾದೇವ್ ಮಾತನಾಡಿ, ಕೋವಿಡ್ ಕಾರಣದಿಂದಾಗಿ ಮುಂದೂಡಲ್ಲಪಟ್ಟಿದ ಜಿಲ್ಲಾ ಸಾಹಿತ್ಯ ಸಮ್ಮೇಳನ ಫೆಬ್ರವರಿ ಮೊದಲ ವಾರದಲ್ಲಿ ಬಸವ ಭವನದಲ್ಲಿ ನಡೆಯಲಿದೆ. ಈ ಹಿಂದೆ ನಿರ್ಧರಿಸಿ ದಂತೆಯೇ ಗೋಷ್ಠಿಗಳು ನಡೆಯಲಿವೆ. ಸಮ್ಮೇಳನ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭು
ದೇವ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಸಮಿತಿ ರಚಿಸಿಕೊಂಡು
ಸಮ್ಮೇಳನ ನಡೆಸಲಾಗುವುದು ಎಂದರು. ಎಸಿ ಅರುಳ್ ಕುಮಾರ್, ತಹಶೀಲ್ದಾರ್ ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣ ಗೌಡ, ಇಇಒ ಮುರುಡಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ