ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ರೈತ ಸಂಘಟನೆಯ ಮುಖಂಡರುಗಳ ಹೆಸರು
Team Udayavani, Jan 27, 2021, 3:31 PM IST
ನವದೆಹಲಿ: ಗಣರಾಜ್ಯೋತ್ಸವ (ಜನವರಿ 26) ದಿನಾಚರಣೆಯಂದು ರೈತರ ಟ್ರ್ಯಾಕ್ಟರ್ ರಾಲಿ ಹಿಂಸಾರೂಪ ಪಡೆದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ರೈತ ಸಂಘಟನೆಯ ಮುಖಂಡರುಗಳ ಹೆಸರುಗಳಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಅನ್ಯ ಶಕ್ತಿಗಳ ಕೈವಾಡ : HDK
ದೆಹಲಿ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್, ರೈತ ಸಂಘಟನೆಯ ಮುಖಂಡರಾದ ದರ್ಶನ್ ಪಾಲ್, ರಾಜಿಂದರ್ ಸಿಂಗ್, ಬಲ್ಬೀರ್ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್ ಗಿಲ್. ಜೋಗಿಂದರ್ ಸಿಂಗ್ ಹಾಗೂ ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ ಹೆಸರು ನಮೂದಿಸಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ(ಜ.26) ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 395 (ದರೋಡೆ), 397 (ಸುಲಿಗೆ, ಸಾವಿಗೆ ಕಾರಣವಾಗುವ ದಾಳಿ), 120 ಬಿ (ಕ್ರಿಮಿನಲ್ ಸಂಚು) ಅನ್ವಯ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.
ಘಟನೆ ಬಗ್ಗೆ ಕ್ರೈಂ ಬ್ರ್ಯಾಂಚ್ ತನಿಖೆ ನಡೆಸಲಿದೆ ಎಂದು ತಿಳಿಸಿರುವ ದೆಹಲಿ ಪೊಲೀಸರು, ಕೆಂಪುಕೋಟೆಯಲ್ಲಿ ನಡೆಸಿದ ಕೃತ್ಯ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.
ಹಿಂಸಾಚಾರದ ವೇಳೆ ಐಟಿಒ ಪ್ರದೇಶದಲ್ಲಿ ಹೆಚ್ಚುವರಿ ಡಿಸಿಪಿ ಮೇಲೆ ತಲ್ವಾರ್ ನಲ್ಲಿ ಹಲ್ಲೆ ನಡೆಸಲಾಗಿತ್ತು. ರೈತರ ಹಿಂಸಾಚಾರ ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು