ಶರಣಬಸವ ವಿವಿಯಲ್ಲಿ ಗಣತಂತ್ರ ಸಂಭ್ರಮ

ನಮ್ಮ ಸಂಸ್ಥಾನ ದಾಸೋಹ ಸೇವೆಯನ್ನು ಮುಂದುವರೆಸುವಲ್ಲಿ ಪೂಜ್ಯ ಅವ್ವಾಜಿಯವರ ಶ್ರಮದಾಯಕ ಪ್ರಯತ್ನಗಳಿಗೆ ಧನ್ಯವಾದ

Team Udayavani, Jan 27, 2021, 3:45 PM IST

ಶರಣಬಸವ ವಿವಿಯಲ್ಲಿ ಗಣತಂತ್ರ ಸಂಭ್ರಮ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನವು ದೇಶದ ಹಿತಕ್ಕಾಗಿ ಸತತ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಾ, ಜನರ ಯೋಗ ಕ್ಷೇಮವನ್ನು ಕಾಪಾಡುತ್ತಾ ಬಂದಿದೆ ಎಂದು ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿ ಪತಿ ಹಾಗೂ ಶರಣಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶರಣಬಸವ ವಿಶ್ವವಿದ್ಯಾಲಯ ಆವರಣದಲ್ಲಿ ಮಂಗಳವಾರ 72ನೇ ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೊಡಗು ಹಾಗೂ ಉತ್ತರ ಕರ್ನಾಟಕ ವಿಪತ್ತಿಗೆ ಸಿಲುಕಿದಾಗ ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 1 ಕೋಟಿ, ಕೋವಿಡ್‌ ಸಂದರ್ಭದಲ್ಲಿ ಹಗಲಿರುಳು
ಸೇವೆ ಮಾಡಿದ್ದ ಆಶಾ ಕಾರ್ಯಕರ್ತರಿಗೆ 2 ಲಕ್ಷ ಸಹಾಯಧನ, ಭೀಮಾ ನದಿ ಪ್ರವಾಹಕ್ಕೆ ಸಿಕ್ಕು ತತ್ತರಿಸಿದ ಜನರ ಜೀವನ ಸುಧಾರಿಸಲು 20 ಲಕ್ಷ ಹಾಗೂ ಇಡೀ ದೇಶದ ಅಸ್ಮಿತೆಯಾಗಿರುವ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ಸಮರ್ಪಿಸಲಾಗಿದೆ. ಕೊವೀಡ್‌ ಸಂಕಷ್ಟದ ಕಾಲದಲ್ಲಿ ಮೊದಲಿನಿಂದಲೂ
ಮಾಡಿದ್ದ ಅನ್ನದಾಸೋಹವನ್ನು ಕೂಡ ಇನ್ನೂ ಮುಂದುವರೆಸಿದ್ದು, ನೀರು, ನೆರಳು ನೀಡಿ ಪಾಲಿಸಲಾಗುತ್ತಿದೆ ಎಂದರು.

ಲಾಕ್‌ಡೌನ್‌ ಕಾಲದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನಗಳ ಮೂಲಕ ಬೋಧಿ ಸಿ, ವಿದ್ಯಾರ್ಥಿಗಳನ್ನು ಮಾನಸಿಕ ಸಶಕ್ತರನ್ನಾಗಿಸುತ್ತ ಬಂದಿದೆ. ಪಠ್ಯ ಚಟುವಟಿಕೆಗಳಲ್ಲಿ ತಮ್ಮ ಛಾಪು ಮೂಡಿಸಲು ಕಾರ್ಯತತ್ಪರರಾಗಿದ್ದಾರೆ. ಈ ಸಂದರ್ಭದಲ್ಲಿ ಅನೇಕ ವಿಚಾರ ಸಂಕೀರಣ (ವೇಬ್‌ನಾರ್‌)ಗಳನ್ನು ಹಮ್ಮಿಕೊಂಡು
ಅಧ್ಯಾಪಕರು ತಾವು ಸಹ ಅಧ್ಯಯನಶೀಲರು ಎಂದು ಸಾಬೀತುಪಡಿಸಿದ ಶಿಕ್ಷಕ ವರ್ಗಕ್ಕೆ ಡಾ| ಅಪ್ಪ ಅಭಿನಂದನೆ ಸಲ್ಲಿಸಿದರು.

ಸಹೋದರಿ ಕೋಮಲ ಎಸ್‌ ಅಪ್ಪಾ ಮಾತನಾಡಿ, ದೇಶವಾಸಿಗಳಿಗೆ ಆರೋಗ್ಯ ಮತ್ತು ಸಮೃದ್ಧಿಯನ್ನು ಆಶೀರ್ವದಿಸಲಿ ಎಂದು ಶರಣಬಸವೇಶ್ವರರಲ್ಲಿ
ವಿನಮ್ರವಾಗಿ ಪ್ರಾರ್ಥಿಸಿದರಲ್ಲದೇ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಹ ನಮ್ಮ ಸಂಸ್ಥಾನ ದಾಸೋಹ ಸೇವೆಯನ್ನು ಮುಂದುವರೆಸುವಲ್ಲಿ ಪೂಜ್ಯ ಅವ್ವಾಜಿಯವರ ಶ್ರಮದಾಯಕ ಪ್ರಯತ್ನಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿ ಪತಿ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್‌ ಹಾಗೂ
ಬೋರ್ಡ್‌ ಆಫ್‌ ಗವರ್ನರ್‌ನ ಸದಸ್ಯರಾದ ಮಾತೋಶ್ರೀ ಪೂಜ್ಯ ಡಾ| ದಾಕ್ಷಾಯಿಣಿ ಅವ್ವಾಜಿ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಪತಿ ಡಾ| ನಿರಂಜನ್‌ ವಿ. ನಿಷ್ಠಿ, ಸಮಕುಲಪತಿ ಡಾ| ವಿ.ಡಿ. ಮೈತ್ರಿ ಮತ್ತು ಎನ್‌.ಎಸ್‌.ದೇವರಕಲ್‌, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರಿ, ಡೀನ್‌ ಡಾ| ಲಕ್ಷ್ಮೀ ಪಾಟೀಲ ಮಾಕಾ ಮತ್ತು ಡಾ| ಬಸವರಾಜ ಮಠಪತಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್‌ ಡಾ| ಲಕ್ಷ್ಮೀ ಪಾಟೀಲ ಮಾಕಾ, ಪ್ರಾಚಾರ್ಯರಾದ ಡಾ| ಸುರೇಶ ನಂದಗಾಂವ, ಡಾ| ಎಸ್‌.ಜಿ. ಡೊಳ್ಳೇಗೌಡರ್‌, ಡಾ| ಎನ್‌.
ಎಸ್‌. ಪಾಟೀಲ ಇತರರು ಇದ್ದರು. ಸಹೋದರಿ ಮಹೇಶ್ವರಿ ಎಸ್‌.ಅಪ್ಪಾ, ಕೋಮಲ ಎಸ್‌. ಅಪ್ಪಾ, ಶಿವಾನಿ ಎಸ್‌. ಅಪ್ಪಾ ಹಾಗೂ ಅಪೂರ್ವ ದೇಶಭಕ್ತಿಗೀತೆ ಹಾಡಿದರು. ಶಿಕ್ಷಕರಾದ ಶಂಕರಗೌಡ ಹೊಸಮನಿ ಮತ್ತು ಚಂದ್ರಕಾಂತ ಪಾಟೀಲ ನಿರೂಪಿಸಿದರು. ಈ ಸಂದರ್ಭದಲ್ಲಿ ಎನ್‌. ಎಸ್‌.ಎಸ್‌ ಅ ಧಿಕಾರಿ ಮತ್ತು ವಿದ್ಯಾರ್ಥಿಗಳಿಂದ ಪರೇಡ್‌ ನಡೆಸಲಾಯಿತು.

ಟಾಪ್ ನ್ಯೂಸ್

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.