ದೆಹಲಿ ರೈತರ ಹೋರಾಟಕ್ಕೆ ಬೆಂಬಲ
ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ರೈತರು ತಹಶೀಲ್ದಾರ್ ಎಚ್. ವಿಶ್ವನಾಥ ಅವರಿಗೆ ಮನವಿ ಸಲ್ಲಿಸಿದರು
Team Udayavani, Jan 27, 2021, 5:28 PM IST
ಹೊಸಪೇಟೆ: ದೆಹಲಿ ರೈತರ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ರಾಜ್ಯ ರೈತ ಸಂ (ಹುಚ್ಚನಳ್ಳಿ ಮಂಜುನಾಥ ಬಣ) ಹಾಗೂ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಬೈಕ್, ಆಟೋ, ಎತ್ತಿನ ಗಾಡಿ ರ್ಯಾಲಿ ನಡೆಯಿತು.
ಇಲ್ಲಿನ ಸಣ್ಣಿಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ರೈತರು, ನಗರದ ವಿವಿಧ ಬೀದಿಗಳಲ್ಲಿ ಸಂಚಾರ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಗರದ ಅಂಬೇಡ್ಕರ್ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮುಖಂಡರಾದ ದೇವರಮನೆ ವೆಂಕಟೇಶ್, ಜಾಹಿರುದ್ಧಿನ್, ಗಂಟೆ ಸೋಮಶೇಖರ್, ಷಣ್ಮುಖ, ಪ್ರಕಾಶ, ಜಡಿಯಪ್ಪ, ಹನುಮಂತಪ್ಪ ಹಾಗೂ
ಸಿಐಟಿಯುನ ಮುಖಂಡರಾದ ಎಂ. ಜಂಬಯ್ಯನಾಯಕ. ಆರ್.ಭಾಸ್ಕರ್ ರೆಡ್ಡಿ, ತಾಯಪ್ಪ ನಾಯಕ, ನಾಗರತ್ನಮ್ಮ, ಗೋಪಾಲ. ಕಲ್ಯಾಣಯ್ಯ, ಕೆ.ರಮೇಶ್, ಎಂ.ಕರುಣಾನಿ ಹಾಗೂ ಬಿ.ಮಹೇಶ್ ಇನ್ನಿತರರಿದ್ದರು.
ಓದಿ : ಹುಣಸೋಡು ಸ್ಫೋಟ ಪ್ರಕರಣದ ತನಿಖೆ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಲಿ : ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್