ಸವಾಲು ಎದುರಿಸಲು ಕನ್ನಡ ಪ್ರಜ್ಞೆ ಒಗ್ಗೂಡಿಸಿ
Team Udayavani, Jan 28, 2021, 12:40 PM IST
ಕೋಲಾರ: 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬುಧವಾರ ಸಮ್ಮೇಳನ ನಡೆಯುವ ಟಿ.ಚನ್ನಯ್ಯ ರಂಗಮಂದಿರದ ಶತಶೃಂಗ ಪರ್ವತ ಮಹಾದ್ವಾರದ ಆವರಣದಲ್ಲಿ ಮೂರು ಧ್ವಜಗಳನ್ನು ಆರೋಹಣೆ ಮಾಡುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರಧ್ವಜವನ್ನು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಹಣ ಮಾಡಿ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ರಕ್ತಗತವಾಗಿ ಸುಪ್ತವಾಗಿರುವ ಕನ್ನಡ ಪ್ರಜ್ಞೆಯನ್ನು ಕನ್ನಡಕ್ಕೆ ಸವಾಲು ಎದುರಾಗಿರುವ ಸಂದರ್ಭದಲ್ಲಿ ಒಗ್ಗೂಡಿಸಬೇಕೆಂದು ತಿಳಿಸಿದರು.
ಇದನ್ನೂ ಓದಿ:ಸರ್ಕಾರಿ ಶಾಲಾ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಿ
ಕನ್ನಡ ಧ್ವಜವನ್ನು ಸಾಹಿತಿ ಕವಿ ಕೋಟಿಗಾನಹಳ್ಳಿ ರಾಮಯ್ಯ ಆರೋಹಣೆ ಮಾಡಿ, ದೇಶಾದ್ಯಂತ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದ ಘಟನಾವಳಿ ಆಧರಿಸಿ ಬರೆದ ಬಾಬಾ ಅಂಬೇಡ್ಕರ್ ಎಂಬ ಪದ್ಯವನ್ನು ವಾಚಿಸಿದರು. ಕಸಾಪ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷ ನಾಗಾನಂದ ಕೆಂಪರಾಜ್ ಆರೋಹಣ ಮಾಡಿದರು. ಭಾರತ ಸೇವಾದಳದ ಎಂ.ಬಿ.ದಾನೇಶ್ ಧ್ವಜ ನಿರ್ವಹಣೆ ಮಾಡಿದರು. ಸುಲೇಮಾನ್ಖಾನ್ರಿಂದ ರಾಷ್ಟ್ರಗೀತೆ ಹಾಗೂ ನಾಡಗೀತೆಗಳ ಗಾಯನ ನಡೆಯಿತು. ಸಿ.ಪುಟ್ಟರಾಜು ನಿರೂಪಿಸಿ, ಎಂ.ಎಸ್. ಶ್ರೀನಿವಾಸ್ ಮಾಗೇರಿ ಸ್ವಾಗತಿಸಿ, ಎನ್.ಮುನಿರಾಜು ನಿರ್ವಹಣೆ ಮಾಡಿ, ವಿ.ತಿಲಕ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು